AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಿಬಿಯಾದಲ್ಲಿ ಭೀಕರ ಚಂಡಮಾರುತ: ಮೃತಪಟ್ಟವರ ಸಂಖ್ಯೆ 20 ಸಾವಿರಕ್ಕೆ ಏರಿಕೆ

ಡೇನಿಯಲ್ ಚಂಡಮಾರುತ ಹಾಗೂ ಭಾರಿ ಪ್ರವಾಹಕ್ಕೆ ಲಿಬಿಯಾ ದೇಶದ ಜನರು ತತ್ತರಿಸಿದ್ದಾರೆ. ಮಹಾ ಪ್ರವಾಹಕ್ಕೆ ಸಿಲುಕಿ ಸಾವನ್ನಪ್ಪಿದವರ ಸಂಖ್ಯೆ 20 ಸಾವಿರಕ್ಕೆ ಏರಿಕೆಯಾಗಿದೆ. ಈ ಪೈಕಿ ಐದು ಸಾವಿರ ಶವಗಳು ಡೆರ್ನಾ ನಗರವೊಂದರಲ್ಲೇ ಪತ್ತೆಯಾಗಿವೆ. ಚಂಡಮಾರುತದಿಂದಾಗಿ 2 ಡ್ಯಾಮ್ ಒಡೆದು ಈ ದುರಂತ ಸಂಭವಿಸಿದೆ.

ಲಿಬಿಯಾದಲ್ಲಿ ಭೀಕರ ಚಂಡಮಾರುತ: ಮೃತಪಟ್ಟವರ ಸಂಖ್ಯೆ 20 ಸಾವಿರಕ್ಕೆ ಏರಿಕೆ
ಲಿಬಿಯಾದ ಡೆರ್ನಾದಲ್ಲಿ ಹಾನಿಯನ್ನು ವೀಕ್ಷಿಸುತ್ತಿರುವ ವ್ಯಕ್ತಿImage Credit source: Reuters
Follow us
Rakesh Nayak Manchi
|

Updated on:Sep 14, 2023 | 9:12 AM

ಟ್ರಿಪೋಲಿ, ಸೆ.14: ಲಿಬಿಯಾ ದೇಶದಲ್ಲಿ ಅಬ್ಬರಿಸಿದ ಭೀಕರ ಡೇನಿಯಲ್ ಚಂಡಮಾರುತ (Daniel cyclone) ಹಾಗೂ ಪ್ರವಾಹಕ್ಕೆ (Flood) ಸಾವನ್ನಪ್ಪಿದವರ ಸಂಖ್ಯೆ 20 ಸಾವಿರಕ್ಕೆ ಏರಿಕೆಯಾಗಿದ್ದು, ಈ ಪೈಕಿ ಐದು ಸಾವಿರ ಶವಗಳು ಡೆರ್ನಾ ನಗರವೊಂದರಲ್ಲೇ ಪತ್ತೆಯಾಗಿದೆ. ಚಂಡಮಾರುತದಿಂದಾಗಿ 2 ಡ್ಯಾಮ್ ಒಡೆದು ಈ ದುರಂತ ಸಂಭವಿಸಿದೆ.

ಸಾವಿರಾರು ಜನರನ್ನು ಬಲಿತೆಗೆದುಕೊಂಡ ಮತ್ತು ಅನೇಕರು ಸಮುದ್ರಕ್ಕೆ ಕೊಚ್ಚಿಕೊಂಡು ಹೋದ ಭೀಕರ ಪ್ರವಾಹದ ನಂತರ, ಹಾನಿಗೊಳಗಾದ ಲಿಬಿಯಾದ ನಗರ ಡೆರ್ನಾದ ನಿವಾಸಿಗಳು ಕಾಣೆಯಾದ ತಮ್ಮ ಸಂಬಂಧಿಕರಿಗಾಗಿ ತೀವ್ರ ಹುಡುಕಾಡುತ್ತಿದ್ದಾರೆ. ಸ್ಥಳದಲ್ಲಿ ರಕ್ಷಣಾ ತಂಡಗಳು ಬೀಡುಬಿಟ್ಟಿದ್ದು, ಕಟ್ಟಡ ಹಾಗೂ ಸಮುದ್ರ ತೀರದಿಂದ ಶವಗಳನ್ನು ಹೊರತೆಗೆಯುತ್ತಿದ್ದಾರೆ.

ಇದನ್ನೂ ಓದಿ: ಜೀವಂತವಾಗಿರಲು ಟಾಯ್ಲೆಟ್​ನ ನೀರು ಕುಡಿದಿದ್ದೆವು, 6 ತಿಂಗಳ ಬಳಿಕ ಲಿಬಿಯಾದಿಂದ ಹಿಂದಿರುಗಿದ ಭಾರತೀಯರ ಮಾತು

ಡೆರ್ನಾ ಮತ್ತು ಪ್ರವಾಹ ಪೀಡಿತ ಇತರ ಪಟ್ಟಣಗಳಲ್ಲಿನ ಸುಮಾರು 40,000 ಜನರನ್ನು ಈಗಾಗಲೇ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲಾಗಿದೆ. ಭೀಕರ ಪ್ರವಾಹಕ್ಕೆ ತತ್ತರಿಸಿದ ಲಿಬಿಯಾಕ್ಕೆ ವಿವಿಧ ದೇಶಗಳು ನೆರವಿನ ಹಸ್ತ ಚಾಚಿದ್ದು, ಜನರ ರಕ್ಷಣೆಗೆ ಮುಂದೆ ಬಂದಿವೆ.

ಡೇನಿಯಲ್ ಚಂಡಮಾರುತವು ಭಾನುವಾರ ಮತ್ತು ಸೋಮವಾರದಂದು ಬೆಂಗಾಜಿ, ಸುಸಾ, ಬೈಡಾ, ಅಲ್-ಮಾರ್ಜ್ ಮತ್ತು ಡರ್ನಾ ನಗರಗಳ ಮೇಲೆ ಪರಿಣಾಮ ಬೀರಿತ್ತು. ಸದ್ಯ ಸಾವಿರಾರು ಮಂದಿ ನಾಪತ್ತೆಯಾಗಿದ್ದು, ತೀವ್ರ ಹುಡುಕಾಟ ನಡೆಸಲಾಗುತ್ತಿದೆ.

ವಿದೇಶದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:34 am, Thu, 14 September 23

ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ