AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಿಬಿಯಾದಲ್ಲಿ ಭೀಕರ ಚಂಡಮಾರುತ: ಮೃತಪಟ್ಟವರ ಸಂಖ್ಯೆ 20 ಸಾವಿರಕ್ಕೆ ಏರಿಕೆ

ಡೇನಿಯಲ್ ಚಂಡಮಾರುತ ಹಾಗೂ ಭಾರಿ ಪ್ರವಾಹಕ್ಕೆ ಲಿಬಿಯಾ ದೇಶದ ಜನರು ತತ್ತರಿಸಿದ್ದಾರೆ. ಮಹಾ ಪ್ರವಾಹಕ್ಕೆ ಸಿಲುಕಿ ಸಾವನ್ನಪ್ಪಿದವರ ಸಂಖ್ಯೆ 20 ಸಾವಿರಕ್ಕೆ ಏರಿಕೆಯಾಗಿದೆ. ಈ ಪೈಕಿ ಐದು ಸಾವಿರ ಶವಗಳು ಡೆರ್ನಾ ನಗರವೊಂದರಲ್ಲೇ ಪತ್ತೆಯಾಗಿವೆ. ಚಂಡಮಾರುತದಿಂದಾಗಿ 2 ಡ್ಯಾಮ್ ಒಡೆದು ಈ ದುರಂತ ಸಂಭವಿಸಿದೆ.

ಲಿಬಿಯಾದಲ್ಲಿ ಭೀಕರ ಚಂಡಮಾರುತ: ಮೃತಪಟ್ಟವರ ಸಂಖ್ಯೆ 20 ಸಾವಿರಕ್ಕೆ ಏರಿಕೆ
ಲಿಬಿಯಾದ ಡೆರ್ನಾದಲ್ಲಿ ಹಾನಿಯನ್ನು ವೀಕ್ಷಿಸುತ್ತಿರುವ ವ್ಯಕ್ತಿImage Credit source: Reuters
Rakesh Nayak Manchi
|

Updated on:Sep 14, 2023 | 9:12 AM

Share

ಟ್ರಿಪೋಲಿ, ಸೆ.14: ಲಿಬಿಯಾ ದೇಶದಲ್ಲಿ ಅಬ್ಬರಿಸಿದ ಭೀಕರ ಡೇನಿಯಲ್ ಚಂಡಮಾರುತ (Daniel cyclone) ಹಾಗೂ ಪ್ರವಾಹಕ್ಕೆ (Flood) ಸಾವನ್ನಪ್ಪಿದವರ ಸಂಖ್ಯೆ 20 ಸಾವಿರಕ್ಕೆ ಏರಿಕೆಯಾಗಿದ್ದು, ಈ ಪೈಕಿ ಐದು ಸಾವಿರ ಶವಗಳು ಡೆರ್ನಾ ನಗರವೊಂದರಲ್ಲೇ ಪತ್ತೆಯಾಗಿದೆ. ಚಂಡಮಾರುತದಿಂದಾಗಿ 2 ಡ್ಯಾಮ್ ಒಡೆದು ಈ ದುರಂತ ಸಂಭವಿಸಿದೆ.

ಸಾವಿರಾರು ಜನರನ್ನು ಬಲಿತೆಗೆದುಕೊಂಡ ಮತ್ತು ಅನೇಕರು ಸಮುದ್ರಕ್ಕೆ ಕೊಚ್ಚಿಕೊಂಡು ಹೋದ ಭೀಕರ ಪ್ರವಾಹದ ನಂತರ, ಹಾನಿಗೊಳಗಾದ ಲಿಬಿಯಾದ ನಗರ ಡೆರ್ನಾದ ನಿವಾಸಿಗಳು ಕಾಣೆಯಾದ ತಮ್ಮ ಸಂಬಂಧಿಕರಿಗಾಗಿ ತೀವ್ರ ಹುಡುಕಾಡುತ್ತಿದ್ದಾರೆ. ಸ್ಥಳದಲ್ಲಿ ರಕ್ಷಣಾ ತಂಡಗಳು ಬೀಡುಬಿಟ್ಟಿದ್ದು, ಕಟ್ಟಡ ಹಾಗೂ ಸಮುದ್ರ ತೀರದಿಂದ ಶವಗಳನ್ನು ಹೊರತೆಗೆಯುತ್ತಿದ್ದಾರೆ.

ಇದನ್ನೂ ಓದಿ: ಜೀವಂತವಾಗಿರಲು ಟಾಯ್ಲೆಟ್​ನ ನೀರು ಕುಡಿದಿದ್ದೆವು, 6 ತಿಂಗಳ ಬಳಿಕ ಲಿಬಿಯಾದಿಂದ ಹಿಂದಿರುಗಿದ ಭಾರತೀಯರ ಮಾತು

ಡೆರ್ನಾ ಮತ್ತು ಪ್ರವಾಹ ಪೀಡಿತ ಇತರ ಪಟ್ಟಣಗಳಲ್ಲಿನ ಸುಮಾರು 40,000 ಜನರನ್ನು ಈಗಾಗಲೇ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲಾಗಿದೆ. ಭೀಕರ ಪ್ರವಾಹಕ್ಕೆ ತತ್ತರಿಸಿದ ಲಿಬಿಯಾಕ್ಕೆ ವಿವಿಧ ದೇಶಗಳು ನೆರವಿನ ಹಸ್ತ ಚಾಚಿದ್ದು, ಜನರ ರಕ್ಷಣೆಗೆ ಮುಂದೆ ಬಂದಿವೆ.

ಡೇನಿಯಲ್ ಚಂಡಮಾರುತವು ಭಾನುವಾರ ಮತ್ತು ಸೋಮವಾರದಂದು ಬೆಂಗಾಜಿ, ಸುಸಾ, ಬೈಡಾ, ಅಲ್-ಮಾರ್ಜ್ ಮತ್ತು ಡರ್ನಾ ನಗರಗಳ ಮೇಲೆ ಪರಿಣಾಮ ಬೀರಿತ್ತು. ಸದ್ಯ ಸಾವಿರಾರು ಮಂದಿ ನಾಪತ್ತೆಯಾಗಿದ್ದು, ತೀವ್ರ ಹುಡುಕಾಟ ನಡೆಸಲಾಗುತ್ತಿದೆ.

ವಿದೇಶದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:34 am, Thu, 14 September 23

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ