AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಂಡನ್​: ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಯನ್ನು ಚೂರಿಯಿಂದ ಇರಿದು ಹತ್ಯೆ ಮಾಡಿದ ಅಪ್ರಾಪ್ತ ಬಾಲಕ

ಶಾಲೆಗೆ ತೆರಳುತ್ತಿದ್ದ ಬಾಲಕಿಯ ಮೇಲೆ ಚಾಕುವಿನಿಂದ ದಾಳಿ ನಡೆಸಿ ಹತ್ಯೆ ಮಾಡಿರುವ ಘಟನೆ ಲಂಡನ್​ನಲ್ಲಿ ನಡೆದಿದೆ. ದಕ್ಷಿಣ ಲಂಡನ್​ನ ಕ್ರಾಯ್​ಡಾನ್​ನಲ್ಲಿ ಘಟನೆ ನಡೆದಿದೆ, ಶಾಲೆಗೆ ಹೋಗುತ್ತಿದ್ದ ಬಾಲಕಿ ಮೇಲೆ ಅಪ್ರಾಪ್ತ ಬಾಲಕ ಚೂರಿಯಿಂದ ತಿವಿದಿದ್ದಾನೆ. ತಕ್ಷಣವೇ ಏರ್​ ಆಂಬ್ಯುಲೆನ್ಸ್​ಗೆ ಕರೆ ಮಾಡಲಾಯಿತು, ಬೆಳಗ್ಗೆ 8.30ರ ಸುಮಾರಿಗೆ ಘಟನೆ ನಡೆದಿದ್ದು, ಬಾಲಕಿಯನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಲಂಡನ್​: ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಯನ್ನು ಚೂರಿಯಿಂದ ಇರಿದು ಹತ್ಯೆ ಮಾಡಿದ ಅಪ್ರಾಪ್ತ ಬಾಲಕ
ಪೊಲೀಸ್-ಸಾಂದರ್ಭಿಕ ಚಿತ್ರImage Credit source: NDTV
ನಯನಾ ರಾಜೀವ್
|

Updated on: Sep 28, 2023 | 8:05 AM

Share

ಶಾಲೆಗೆ ತೆರಳುತ್ತಿದ್ದ ಬಾಲಕಿಯ ಮೇಲೆ ಚಾಕುವಿನಿಂದ ದಾಳಿ ನಡೆಸಿ ಹತ್ಯೆ ಮಾಡಿರುವ ಘಟನೆ ಲಂಡನ್​ನಲ್ಲಿ ನಡೆದಿದೆ. ದಕ್ಷಿಣ ಲಂಡನ್​ನ ಕ್ರಾಯ್​ಡಾನ್​ನಲ್ಲಿ ಘಟನೆ ನಡೆದಿದೆ, ಶಾಲೆಗೆ ಹೋಗುತ್ತಿದ್ದ ಬಾಲಕಿ ಮೇಲೆ ಅಪ್ರಾಪ್ತ ಬಾಲಕ ಚೂರಿಯಿಂದ ತಿವಿದಿದ್ದಾನೆ. ತಕ್ಷಣವೇ ಏರ್​ ಆಂಬ್ಯುಲೆನ್ಸ್​ಗೆ ಕರೆ ಮಾಡಲಾಯಿತು, ಬೆಳಗ್ಗೆ 8.30ರ ಸುಮಾರಿಗೆ ಘಟನೆ ನಡೆದಿದ್ದು, ಬಾಲಕಿಯನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ವೈದ್ಯರು ವಿದ್ಯಾರ್ಥಿನಿಯನ್ನು ಬದುಕಿಸಲು ಹರಸಾಹಸಪಟ್ಟರು ಆದರೆ ಯಾವುದೇ ಪ್ರಯೋಜನವಾಗಿಲ್ಲ, 50 ನಿಮಿಷಗಳ ಬಳಿಕ ಆಕೆ ಮೃತಪಟ್ಟಿದ್ದಾಳೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 17 ವರ್ಷದ ಅಪ್ರಾಪ್ತನನ್ನು ಬಂಧಿಸಲಾಗಿದೆ.

ಲಂಡನ್ ಮೇಯರ್ ಸಾದಿಕ್ ಮಾತನಾಡಿ, ಇದೊಂದು ಹೃದಯ ವಿದ್ರಾವಕ ಘಟನೆ, ಇಂತಹ ದುಷ್ಕೃತ್ಯಗಳನ್ನು ತಡೆಯಲು ಪೊಲೀಸರು ಹಗಲು ರಾತ್ರಿ ಕಷ್ಟಪಡುತ್ತಿದ್ದಾರೆ ಎಂದರು.

ಅಧಿಕೃತ ಅಂಕಿಅಂಶಗಳ ಪ್ರಕಾರ, ಇಂಗ್ಲೆಂಡ್​ ಹಾಗೂ ವೇಲ್ಸ್​ನಲ್ಲಿ ಈ ವರ್ಷ ಮಾರ್ಚ್​ ವರೆಗೆ 25 ವರ್ಷದೊಳಗಿನ 99 ಮಂದಿ ಚೂರಿ ಇರಿತದಿಂದ ಸಾವನ್ನಪ್ಪಿದ್ದಾರೆ.

ಮತ್ತಷ್ಟು ಓದಿ: ಉತ್ತರ ಪ್ರದೇಶ: ದೂರು ದಾಖಲಿಸಲು ಹೋದ ದಲಿತ ಮಹಿಳೆಯ ಮೇಲೆ ಪೊಲೀಸರಿಂದ ಅತ್ಯಾಚಾರ

ಒಟ್ಟು ಚೂರಿ ಇರಿತ ಪ್ರಕರಣದಲ್ಲಿ ಈ ವರ್ಷ 50 ಸಾವಿರ ಮಂದಿ ಸಾವನ್ನಪ್ಪಿದ್ದಾರೆ, ಅಪರಾಧ ಪ್ರಕರಣಗಳು ಶೇ.5ರಷ್ಟು ಹೆಚ್ಚಾಗಿವೆ. ರಾತ್ರಿ ಪಾಳಿ ಮುಗಿಸಿ ಮನೆಗೆ ಹೋಗುತ್ತಿದ್ದ ಸೆಕ್ಯುರಿಟಿ ಗಾರ್ಡ್​ ಒಬ್ಬರು ಈ ಕೃತ್ಯವನ್ನು ನೋಡಿದ್ದಾರೆ. ಶಾಲೆಯ ಬ್ಲೇಜರ್​ನಲ್ಲಿದ್ದ ಬಾಲಕನನ್ನು ಹಿಂಬಾಲಿಸಿದ್ದರು.

ನಾನು ಅವನನ್ನು ಹಿಡಿಯಲು ಪ್ರಯತ್ನಿಸಿದೆ, ಇನ್ನುಳಿದವರು ಬಾಲಕಿಯ ಪ್ರಾಣ ಉಳಿಸಲು ಪ್ರಯತ್ನಿಸಿದರು. ಯಾರ ಮಗಳಾದರೂ ನಮ್ಮ ಮಕ್ಕಳಿದ್ದಂತೆ ಅಲ್ಲವೇ ಎಂದು ಬೇಸರ ವ್ಯಕ್ತಪಡಿಸಿದರು. ಆ ಸಮಯದಲ್ಲಿ ವಿದ್ಯಾರ್ಥಿನಿ ಬಸ್​ನಿಂದ ಇಳಿದಿದ್ದಳು, ಆತನೊಂದಿಗೆ ಜಗಳವಾಡುತ್ತಿದ್ದಳು. ಬಾಲಕಿಯ ಗುರುತು ಇನ್ನೂ ಪತ್ತೆಯಾಗಿಲ್ಲ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು