AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಂಡನ್​: ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಯನ್ನು ಚೂರಿಯಿಂದ ಇರಿದು ಹತ್ಯೆ ಮಾಡಿದ ಅಪ್ರಾಪ್ತ ಬಾಲಕ

ಶಾಲೆಗೆ ತೆರಳುತ್ತಿದ್ದ ಬಾಲಕಿಯ ಮೇಲೆ ಚಾಕುವಿನಿಂದ ದಾಳಿ ನಡೆಸಿ ಹತ್ಯೆ ಮಾಡಿರುವ ಘಟನೆ ಲಂಡನ್​ನಲ್ಲಿ ನಡೆದಿದೆ. ದಕ್ಷಿಣ ಲಂಡನ್​ನ ಕ್ರಾಯ್​ಡಾನ್​ನಲ್ಲಿ ಘಟನೆ ನಡೆದಿದೆ, ಶಾಲೆಗೆ ಹೋಗುತ್ತಿದ್ದ ಬಾಲಕಿ ಮೇಲೆ ಅಪ್ರಾಪ್ತ ಬಾಲಕ ಚೂರಿಯಿಂದ ತಿವಿದಿದ್ದಾನೆ. ತಕ್ಷಣವೇ ಏರ್​ ಆಂಬ್ಯುಲೆನ್ಸ್​ಗೆ ಕರೆ ಮಾಡಲಾಯಿತು, ಬೆಳಗ್ಗೆ 8.30ರ ಸುಮಾರಿಗೆ ಘಟನೆ ನಡೆದಿದ್ದು, ಬಾಲಕಿಯನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಲಂಡನ್​: ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಯನ್ನು ಚೂರಿಯಿಂದ ಇರಿದು ಹತ್ಯೆ ಮಾಡಿದ ಅಪ್ರಾಪ್ತ ಬಾಲಕ
ಪೊಲೀಸ್-ಸಾಂದರ್ಭಿಕ ಚಿತ್ರImage Credit source: NDTV
ನಯನಾ ರಾಜೀವ್
|

Updated on: Sep 28, 2023 | 8:05 AM

Share

ಶಾಲೆಗೆ ತೆರಳುತ್ತಿದ್ದ ಬಾಲಕಿಯ ಮೇಲೆ ಚಾಕುವಿನಿಂದ ದಾಳಿ ನಡೆಸಿ ಹತ್ಯೆ ಮಾಡಿರುವ ಘಟನೆ ಲಂಡನ್​ನಲ್ಲಿ ನಡೆದಿದೆ. ದಕ್ಷಿಣ ಲಂಡನ್​ನ ಕ್ರಾಯ್​ಡಾನ್​ನಲ್ಲಿ ಘಟನೆ ನಡೆದಿದೆ, ಶಾಲೆಗೆ ಹೋಗುತ್ತಿದ್ದ ಬಾಲಕಿ ಮೇಲೆ ಅಪ್ರಾಪ್ತ ಬಾಲಕ ಚೂರಿಯಿಂದ ತಿವಿದಿದ್ದಾನೆ. ತಕ್ಷಣವೇ ಏರ್​ ಆಂಬ್ಯುಲೆನ್ಸ್​ಗೆ ಕರೆ ಮಾಡಲಾಯಿತು, ಬೆಳಗ್ಗೆ 8.30ರ ಸುಮಾರಿಗೆ ಘಟನೆ ನಡೆದಿದ್ದು, ಬಾಲಕಿಯನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ವೈದ್ಯರು ವಿದ್ಯಾರ್ಥಿನಿಯನ್ನು ಬದುಕಿಸಲು ಹರಸಾಹಸಪಟ್ಟರು ಆದರೆ ಯಾವುದೇ ಪ್ರಯೋಜನವಾಗಿಲ್ಲ, 50 ನಿಮಿಷಗಳ ಬಳಿಕ ಆಕೆ ಮೃತಪಟ್ಟಿದ್ದಾಳೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 17 ವರ್ಷದ ಅಪ್ರಾಪ್ತನನ್ನು ಬಂಧಿಸಲಾಗಿದೆ.

ಲಂಡನ್ ಮೇಯರ್ ಸಾದಿಕ್ ಮಾತನಾಡಿ, ಇದೊಂದು ಹೃದಯ ವಿದ್ರಾವಕ ಘಟನೆ, ಇಂತಹ ದುಷ್ಕೃತ್ಯಗಳನ್ನು ತಡೆಯಲು ಪೊಲೀಸರು ಹಗಲು ರಾತ್ರಿ ಕಷ್ಟಪಡುತ್ತಿದ್ದಾರೆ ಎಂದರು.

ಅಧಿಕೃತ ಅಂಕಿಅಂಶಗಳ ಪ್ರಕಾರ, ಇಂಗ್ಲೆಂಡ್​ ಹಾಗೂ ವೇಲ್ಸ್​ನಲ್ಲಿ ಈ ವರ್ಷ ಮಾರ್ಚ್​ ವರೆಗೆ 25 ವರ್ಷದೊಳಗಿನ 99 ಮಂದಿ ಚೂರಿ ಇರಿತದಿಂದ ಸಾವನ್ನಪ್ಪಿದ್ದಾರೆ.

ಮತ್ತಷ್ಟು ಓದಿ: ಉತ್ತರ ಪ್ರದೇಶ: ದೂರು ದಾಖಲಿಸಲು ಹೋದ ದಲಿತ ಮಹಿಳೆಯ ಮೇಲೆ ಪೊಲೀಸರಿಂದ ಅತ್ಯಾಚಾರ

ಒಟ್ಟು ಚೂರಿ ಇರಿತ ಪ್ರಕರಣದಲ್ಲಿ ಈ ವರ್ಷ 50 ಸಾವಿರ ಮಂದಿ ಸಾವನ್ನಪ್ಪಿದ್ದಾರೆ, ಅಪರಾಧ ಪ್ರಕರಣಗಳು ಶೇ.5ರಷ್ಟು ಹೆಚ್ಚಾಗಿವೆ. ರಾತ್ರಿ ಪಾಳಿ ಮುಗಿಸಿ ಮನೆಗೆ ಹೋಗುತ್ತಿದ್ದ ಸೆಕ್ಯುರಿಟಿ ಗಾರ್ಡ್​ ಒಬ್ಬರು ಈ ಕೃತ್ಯವನ್ನು ನೋಡಿದ್ದಾರೆ. ಶಾಲೆಯ ಬ್ಲೇಜರ್​ನಲ್ಲಿದ್ದ ಬಾಲಕನನ್ನು ಹಿಂಬಾಲಿಸಿದ್ದರು.

ನಾನು ಅವನನ್ನು ಹಿಡಿಯಲು ಪ್ರಯತ್ನಿಸಿದೆ, ಇನ್ನುಳಿದವರು ಬಾಲಕಿಯ ಪ್ರಾಣ ಉಳಿಸಲು ಪ್ರಯತ್ನಿಸಿದರು. ಯಾರ ಮಗಳಾದರೂ ನಮ್ಮ ಮಕ್ಕಳಿದ್ದಂತೆ ಅಲ್ಲವೇ ಎಂದು ಬೇಸರ ವ್ಯಕ್ತಪಡಿಸಿದರು. ಆ ಸಮಯದಲ್ಲಿ ವಿದ್ಯಾರ್ಥಿನಿ ಬಸ್​ನಿಂದ ಇಳಿದಿದ್ದಳು, ಆತನೊಂದಿಗೆ ಜಗಳವಾಡುತ್ತಿದ್ದಳು. ಬಾಲಕಿಯ ಗುರುತು ಇನ್ನೂ ಪತ್ತೆಯಾಗಿಲ್ಲ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ