AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಲಂಡನ್​​ನ ಅಪಾರ್ಟ್​ಮೆಂಟ್​​ನ ಕಿಟಕಿಯಿಂದ ಕೆಳಗೆ ಬೀಳುತ್ತಿದ್ದ ಬಾಲಕಿಯನ್ನು ಕಾಪಾಡಿದ ಭಾರತೀಯ ವ್ಯಕ್ತಿ

ಲಂಡನ್‌ನಲ್ಲಿ ಅಪಾರ್ಟ್​ಮೆಂಟ್​ನ ಕಿಟಕಿಯಿಂದ ಬೀಳುತ್ತಿದ್ದ ಮೂರು ವರ್ಷದ ಬಾಲಕಿಯನ್ನು ಭಾರತೀಯ ಮೂಲದ ಮೊಹಮ್ಮದ್ ಜೆಸಿಲ್ ರಕ್ಷಿಸಿದ್ದಾರೆ. ಪ್ರಾಣದ ಹಂಗು ತೊರೆದು ಮಗುವನ್ನು ಉಳಿಸಿದ ಇವರ ಸಾಹಸದ ವಿಡಿಯೋ ವೈರಲ್ ಆಗಿದೆ. ತಂದೆಯಾಗಿ ತನ್ನ ಕರ್ತವ್ಯ ನಿರ್ವಹಿಸಿದ್ದೇನೆ ಎಂದ ಜೆಸಿಲ್, ತಮ್ಮ ಮಾನವೀಯತೆಯಿಂದ ನೂರಾರು ಜನರ ಪ್ರಶಂಸೆ ಗಳಿಸಿದ್ದಾರೆ. ಈ ಘಟನೆ ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿದೆ.

Video: ಲಂಡನ್​​ನ ಅಪಾರ್ಟ್​ಮೆಂಟ್​​ನ ಕಿಟಕಿಯಿಂದ ಕೆಳಗೆ ಬೀಳುತ್ತಿದ್ದ ಬಾಲಕಿಯನ್ನು ಕಾಪಾಡಿದ ಭಾರತೀಯ ವ್ಯಕ್ತಿ
ಬಾಲಕಿಯ ಕಾಪಾಡಿದ ವ್ಯಕ್ತಿImage Credit source: Free Press Journal
ನಯನಾ ರಾಜೀವ್
|

Updated on: Jun 14, 2026 | 10:42 AM

Share

ಲಂಡನ್, ಜೂನ್ 14: ಅಪಾರ್ಟ್​ಮೆಂಟ್​ನ ಕಿಟಕಿಯ ಅಂಚಿನಲ್ಲಿ ನೇತಾಡುತ್ತಾ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಮೂರು ವರ್ಷದ ಹೆಣ್ಣು ಮಗು(Baby)ವನ್ನು ಭಾರತೀಯ ವ್ಯಕ್ತಿಯೊಬ್ಬರು ತನ್ನ ಪ್ರಾಣದ ಹಂಗು ತೊರೆದು ರಕ್ಷಿಸಿರುವ ವಿಡಿಯೋ ವೈರಲ್ ಆಗಿದೆ. ಲಂಡನ್‌ನ ಇಲ್ಫೋರ್ಡ್ ಹೈ ಸ್ಟ್ರೀಟ್‌ನ ವಾಣಿಜ್ಯ ಸಂಕೀರ್ಣದಲ್ಲಿರುವ ಫ್ಲಾಟ್‌ನ ಕಿಟಕಿಯಿಂದ ಅದ್ಹೇಗೋ ಬಾಲಕಿ ಹೊರಬಂದಿದ್ದಾಳೆ, ಬಳಿಕ ಕಿಟಕಿ ಚೌಕಟ್ಟನ್ನು ಹಿಡಿದು ನೇತಾಡಿದ್ದಾಳೆ.

ಇದನ್ನು ಕಂಡ ರಸ್ತೆಯಲ್ಲಿದ್ದ ನೂರಾರು ಪ್ರೇಕ್ಷಕರು ದಿಗ್ಭ್ರಮೆಗೊಂಡರು. ಪಕ್ಕದ ಕಿಟಕಿಯಿಂದ ಮಹಿಳೆಯೊಬ್ಬಳು ಮಗುವನ್ನು ಎತ್ತಲು ಕೈಚಾಚಿದರೂ ಮಗು ಸಿಗುತ್ತಿರಲಿಲ್ಲ. ಇತ್ತ ಮಗುವಿನ ಕೈಗಳ ಶಕ್ತಿ ಕ್ಷಣಕ್ಷಣಕ್ಕೂ ಕ್ಷೀಣಿಸುತ್ತಿತ್ತು. ಯಾವುದೇ ಕ್ಷಣದಲ್ಲಾದರೂ ಮಗು ಕೆಳಗೆ ಬಿದ್ದು ಪ್ರಾಣ ಹೋಗುವ ಭೀತಿ ಎದುರಾಗಿತ್ತು.

ಅದೇ ರಸ್ತೆಯಲ್ಲಿ ರೆಸ್ಟೋರೆಂಟ್ ವ್ಯವಸ್ಥಾಪಕರಾಗಿ ಕೆಲಸ ಮಾಡುತ್ತಿರುವ ಭಾರತ ಮೂಲದ ಮೊಹಮ್ಮದ್ ಜೆಸಿಲ್ ಅವರಿಗೆ ಜನರ ಕಿರುಚಾಟ ಕೇಳಿಸಿದೆ. ಹೊರಗೆ ಬಂದು ನೋಡಿದಾಗ ಕಿಟಕಿಯಲ್ಲಿ ನೇತಾಡುತ್ತಿದ್ದ ಮಗು ಕಂಡಿದೆ. ಒಂದು ಕ್ಷಣವೂ ಯೋಚಿಸದ ಜೆಸಿಲ್ ತಕ್ಷಣವೇ ಮಗುವಿನ ರಕ್ಷಣೆಗೆ ಧಾವಿಸಿದರು. ನನಗೆ ಬೇರೆನೂ ಯೋಚನೆ ಬರಲಿಲ್ಲ. ನಾನು ಕೇವಲ ಐದು ತಿಂಗಳ ವಯಸ್ಸಿನ ಅವಳಿ ಮಕ್ಕಳ ತಂದೆ. ಕಷ್ಟದಲ್ಲಿದ್ದ ಆ ಮಗುವನ್ನು ನೋಡಿದಾಗ ನನ್ನೊಳಗಿನ ತಂದೆಯ ಹೃದಯ ಜಾಗೃತವಾಯಿತು. ನಾನು ಹೀರೋ ಅಲ್ಲ, ಒಬ್ಬ ತಂದೆಯಾಗಿ ನನ್ನ ಕರ್ತವ್ಯ ಮಾಡಿದೆ ಎಂದು ಜೆಸಿಲ್ ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ.

ಮತ್ತಷ್ಟು ಓದಿ: ನಾಯಿ ಹಾಗೂ ಎರಡು ವರ್ಷದ ಮಗು ನಾಲ್ಕು ದಿನಗಳಿಂದ ನಾಪತ್ತೆ, ಮೂರು ದಿನಗಳ ಬಳಿಕ ವಾಪಸಾದ ನಾಯಿ

ಮಗುವಿನ ಹಿಡಿತ ಸಡಿಲಗೊಳ್ಳುತ್ತಿದ್ದಂತೆ, ಜೆಸಿಲ್ ಮತ್ತು ಅಲ್ಲಿಗೆ ಬಂದಿದ್ದ ಬ್ರಿಟನ್ ಪೊಲೀಸ್ ಅಧಿಕಾರಿಯೊಬ್ಬರು ನೇರವಾಗಿ ಮಗುವಿನ ಕೆಳಭಾಗದಲ್ಲಿ ನಿಂತುಕೊಂಡರು. ದಾರಿಹೋಕರೊಬ್ಬರು ಸಣ್ಣ ಏಣಿಯೊಂದನ್ನು ತಂದು ಬೆಂಬಲವಾಗಿ ನಿಲ್ಲಿಸಿದರು.

ವಿಡಿಯೋ

ಕ್ಷಣಾರ್ಧದಲ್ಲಿ ಮಗು ಕಿಟಕಿಯ ಮೇಲಿಂದ ಕೈಬಿಟ್ಟು ಕೆಳಗೆ ಬಿದ್ದಿದೆ. ಇಡೀ ಜನಸಮೂಹವೇ ಆಘಾತದಿಂದ ಕಣ್ಣು ಮುಚ್ಚಿಕೊಂಡ ಆ ರಣರೋಚಕ ಕ್ಷಣದಲ್ಲಿ, ಜೆಸಿಲ್ ಅತ್ಯಂತ ಜಾಗರೂಕತೆಯಿಂದ ಬೀಳುತ್ತಿದ್ದ ಮಗುವನ್ನು ಗಾಳಿಯಲ್ಲೇ ಸುರಕ್ಷಿತವಾಗಿ ತಮ್ಮ ಕೈಗಳಿಂದ ಹಿಡಿದುಕೊಂಡಿದ್ದಾರೆ! ಪೊಲೀಸ್ ಅಧಿಕಾರಿ ಜೆಸಿಲ್ ಮತ್ತು ಮಗು ಇಬ್ಬರೂ ಕೆಳಗೆ ಬೀಳದಂತೆ ಗಟ್ಟಿಯಾಗಿ ಹಿಡಿದು ಸ್ಥಿರಗೊಳಿಸಿದರು.

ಯಾವುದೇ ಗಾಯಗಳಿಲ್ಲದೆ ಪ್ರಾಣಾಪಾಯದಿಂದ ಪಾರಾದ ಮಗುವಿನ ತಂದೆ, ಭಾರತೀಯ ಯುವಕ ಜೆಸಿಲ್ ಮತ್ತು ಪೊಲೀಸ್ ಅಧಿಕಾರಿಯನ್ನು ‘ನಮ್ಮ ಪಾಲಿನ ರಿಯಲ್ ಹೀರೋಗಳು’ ಎಂದು ಕೃತಜ್ಞತೆ ಸಲ್ಲಿಸಿದ್ದಾರೆ. ಲಂಡನ್ ಪೊಲೀಸರು ಮತ್ತು ಅಲ್ಲಿನ ಮಾಧ್ಯಮಗಳು ಭಾರತೀಯ ಯುವಕ ಮೊಹಮ್ಮದ್ ಜೆಸಿಲ್ ಅವರ ಈ ಅಪ್ರತಿಮ ಸಾಹಸ ಹಾಗೂ ಮಾನವೀಯತೆಯನ್ನು ಮುಕ್ತಾಕಂಠದಿಂದ ಪ್ರಶಂಸಿಸುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಈ ರಕ್ಷಣೆಯ ವಿಡಿಯೋ ಭಾರಿ ವೈರಲ್ ಆಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಮಂತ್ರಾಲಯದಲ್ಲಿ ಪ್ರತಿನಿತ್ಯ ಭಕ್ತ ಸಾಗರ: ವಸತಿಗೂ ಪರದಾಟ
ಮಂತ್ರಾಲಯದಲ್ಲಿ ಪ್ರತಿನಿತ್ಯ ಭಕ್ತ ಸಾಗರ: ವಸತಿಗೂ ಪರದಾಟ
ಮನೆಗೆ ಹಾವು ಬಂದ್ರೆ ಕೊಲ್ಲಬಾರದು ಯಾಕೆ?
ಮನೆಗೆ ಹಾವು ಬಂದ್ರೆ ಕೊಲ್ಲಬಾರದು ಯಾಕೆ?
ಇಂದು ಈ ರಾಶಿಯವರು ಕೆಲಸಗಳಲ್ಲಿ ಅವಸರ ಮಾಡಬೇಡಿ
ಇಂದು ಈ ರಾಶಿಯವರು ಕೆಲಸಗಳಲ್ಲಿ ಅವಸರ ಮಾಡಬೇಡಿ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗೆ ಮರು ಅರ್ಜಿ: ಸಿಎಂ ಡಿಕೆಶಿ ಮಾಹಿತಿ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗೆ ಮರು ಅರ್ಜಿ: ಸಿಎಂ ಡಿಕೆಶಿ ಮಾಹಿತಿ
ಫುಟ್​​ಬಾಲ್ ವಿಶ್ವಕಪ್ ಉದ್ಘಾಟನೆಯಲ್ಲಿ ಹೀಗಿತ್ತು ನೋರಾ ಫತೇಹಿ ಪ್ರದರ್ಶನ
ಫುಟ್​​ಬಾಲ್ ವಿಶ್ವಕಪ್ ಉದ್ಘಾಟನೆಯಲ್ಲಿ ಹೀಗಿತ್ತು ನೋರಾ ಫತೇಹಿ ಪ್ರದರ್ಶನ
ಸಾವಿನ ಬಗ್ಗೆ ಪದೇ ಪದೇ ಸುಳ್ಳು ಸುದ್ದಿ: ನಟ ದೊಡ್ಡಣ್ಣ ಹೇಳಿದ್ದೇನು?
ಸಾವಿನ ಬಗ್ಗೆ ಪದೇ ಪದೇ ಸುಳ್ಳು ಸುದ್ದಿ: ನಟ ದೊಡ್ಡಣ್ಣ ಹೇಳಿದ್ದೇನು?
ನಿರುದ್ಯೋಗಿಗಳಿಗೆ ಗುಡ್​ನ್ಯೂಸ್​​ ನೀಡಿದ ಸಿಎಂ ಡಿಕೆ ಶಿವಕುಮಾರ್​
ನಿರುದ್ಯೋಗಿಗಳಿಗೆ ಗುಡ್​ನ್ಯೂಸ್​​ ನೀಡಿದ ಸಿಎಂ ಡಿಕೆ ಶಿವಕುಮಾರ್​
ಬೆಳಗ್ಗೆ 10 ಗಂಟೆಗೆ ಕಚೇರಿಯಲ್ಲಿ ಹಾಜರಿರಬೇಕು: ಅಧಿಕಾರಿಗಳಿಗೆ ಸಿಎಂ ಸೂಚನೆ
ಬೆಳಗ್ಗೆ 10 ಗಂಟೆಗೆ ಕಚೇರಿಯಲ್ಲಿ ಹಾಜರಿರಬೇಕು: ಅಧಿಕಾರಿಗಳಿಗೆ ಸಿಎಂ ಸೂಚನೆ
ಮತ್ತೆ ವಿದೇಶಕ್ಕೆ ತೆರಳಿದ ಪ್ರಧಾನಿ ಮೋದಿ; ಫ್ರಾನ್ಸ್​, ಸ್ಲೋವಾಕಿಯಾಗೆ ಭೇಟಿ
ಮತ್ತೆ ವಿದೇಶಕ್ಕೆ ತೆರಳಿದ ಪ್ರಧಾನಿ ಮೋದಿ; ಫ್ರಾನ್ಸ್​, ಸ್ಲೋವಾಕಿಯಾಗೆ ಭೇಟಿ
ಮನಾಲಿಗೆ ಹೊರಟ ಪ್ರವಾಸಿಗರಿಂದ ಕುಲು-ಮಂಡಿ ಮಾರ್ಗದಲ್ಲಿ ಟ್ರಾಫಿಕ್ ಜಾಮ್
ಮನಾಲಿಗೆ ಹೊರಟ ಪ್ರವಾಸಿಗರಿಂದ ಕುಲು-ಮಂಡಿ ಮಾರ್ಗದಲ್ಲಿ ಟ್ರಾಫಿಕ್ ಜಾಮ್