Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಲಕರನ್ನು ನೌಕರರು ಎಂದು ಪರಿಗಣಿಸಿ: ಊಬರ್​ಗೆ ಲಂಡನ್​ ಸುಪ್ರೀಂಕೋರ್ಟ್​ ನಿರ್ದೇಶನ

ಕೋರ್ಟ್​ ತೀರ್ಪಿನ ಬಗ್ಗೆ ಊಬರ್​ ಸಂಸ್ಥೆ ಪ್ರತಿಕ್ರಿಯೆ ನೀಡಿದೆ. ನಾವು ಕೋರ್ಟ್​ ಆದೇಶವನ್ನು ಗೌರವಿಸುತ್ತೇವೆ ಎಂದು ಹೇಳಿದೆ.

ಚಾಲಕರನ್ನು ನೌಕರರು ಎಂದು ಪರಿಗಣಿಸಿ: ಊಬರ್​ಗೆ ಲಂಡನ್​ ಸುಪ್ರೀಂಕೋರ್ಟ್​ ನಿರ್ದೇಶನ
ಊಬರ್​
Follow us
ರಾಜೇಶ್ ದುಗ್ಗುಮನೆ
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Feb 19, 2021 | 8:38 PM

ಲಂಡನ್​: ಊಬರ್​ ಸಂಸ್ಥೆಯಡಿಯಲ್ಲಿ ಕಾರು ಚಲಾಯಿಸುವವರನ್ನು ನೌಕರರು ಎಂದು ಪರಿಗಣಿಸುವಂತೆ ಲಂಡನ್ ಸುಪ್ರೀಂಕೋರ್ಟ್​ ಊಬರ್​ ಸಂಸ್ಥೆಗೆ ಆದೇಶಿಸಿದೆ. ಈ ಮೂಲಕ ಹಲವು ವರ್ಷಗಳಿಂದ ಕೋರ್ಟ್​ನಲ್ಲಿ ನಡೆಯುತ್ತಿದ್ದ ಪ್ರಕರಣದಲ್ಲಿ ಊಬರ್​ಗೆ ಸೋಲುಂಟಾಗಿದೆ.

ಊಬರ್​ ಚಾಲಕರನ್ನು ಸಂಸ್ಥೆ ಸಿಬ್ಬಂದಿ ಎಂದು ಪರಿಗಣಿಸಿಲ್ಲ. ಬದಲಿಗೆ ಅವರನ್ನು ಗುತ್ತಿಗೆ ನೌಕರರ ರೀತಿಯಲ್ಲಿ ನಡೆಸಿಕೊಳ್ಳುತ್ತಿದೆ. ಈಗ ಇಂಗ್ಲೆಂಡ್ ಕೋರ್ಟ್​ ನೀಡಿದ ಹೊಸ ಆದೇಶದ ಅಡಿಯಲ್ಲಿ, ಊಬರ್​ ಸಿಬ್ಬಂದಿಗೆ ಕನಿಷ್ಠ ವೇತನ, ರಜೆ, ಅನಾರೋಗ್ಯ ರಜೆಯ ಹಕ್ಕು ಹಾಗೂ ಉದ್ಯೋಗ ಭದ್ರತೆ ಒದಗಿಸುವುದು ಕಡ್ಡಾಯವಾಗಿದೆ.

ಊಬರ್​ ಸಂಸ್ಥೆ ಚಾಲಕರು 2016ರಲ್ಲಿ ಪ್ರಕರಣವೊಂದನ್ನು ದಾಖಲು ಮಾಡಿದ್ದರು. ನಮ್ಮನ್ನು ಹೆಚ್ಚು ದುಡಿಸಿಕೊಳ್ಳುತ್ತಾರೆ ಮತ್ತು ಕಡಿಮೆ ವೇತನ ನೀಡುತ್ತಾರೆ. ಹೀಗಾಗಿ, ನಮ್ಮನ್ನು ನೌಕರರು ಎಂದು ಪರಿಗಣಿಸುವಂತೆ ಕೋರ್ಟ್​ಗೆ ಅರ್ಜಿ ಸಲ್ಲಿಕೆ ಮಾಡಲಾಗಿತ್ತು. ಈಗ ಊಬರ್​ ಸಂಸ್ಥೆಯ ಪರವಾಗಿ ತೀರ್ಪು ಹೊರ ಬಿದ್ದಿದೆ.

ಕೋರ್ಟ್​ ತೀರ್ಪಿನ ಬಗ್ಗೆ ಊಬರ್​ ಸಂಸ್ಥೆ ಪ್ರತಿಕ್ರಿಯೆ ನೀಡಿದೆ. ನಾವು ಕೋರ್ಟ್​ ಆದೇಶವನ್ನು ಗೌರವಿಸುತ್ತೇವೆ ಎಂದು ಹೇಳಿದೆ. ಈ ಮೂಲಕ ಕೋರ್ಟ್​​ ಆದೇಶವನ್ನು ಅನ್ವಯ ಮಾಡಿಕೊಳ್ಳುವ ಸೂಚನೆ ನೀಡಿದೆ.

ಇಂಗ್ಲೆಂಡ್​ನಲ್ಲಿ ಹೊರಡಿಸಿರುವ ಆದೇಶ ವಿಶ್ವಾದ್ಯಂತ ಪರಿಣಾಮ ಬೀರಲಿದೆ. ಭಾರತದಲ್ಲೂ ಸದ್ಯ ಚಾಲಕರನ್ನು ಊಬರ್​ ಸಂಸ್ಥೆ ಗುತ್ತಿಗೆ ಆಧಾರದ​ ಮೇಲೆ ತೆಗೆದುಕೊಂಡಿದೆ. ಹೀಗಾಗಿ, ಭಾರತ ಸೇರಿ ದೇಶದ ಅನೇಕ ರಾಷ್ಟ್ರಗಳಲ್ಲಿ ಊಬರ್​ ಚಾಲಕರು ಕೋರ್ಟ್​ನಲ್ಲಿ ಇದೇ ಮಾದರಿಯ ಅರ್ಜಿ ಸಲ್ಲಿಕೆ ಮಾಡಿ ತಮ್ಮನ್ನು ಸಿಬ್ಬಂದಿ ಎಂದು ಪರಿಗಣಿಸುವಂತೆ ಕೋರಬಹುದಾಗಿದೆ. ಇತ್ತೀಚೆಗೆ ದೆಹಲಿಯಲ್ಲಿ ಊಬರ್​-ಓಲಾ ಚಾಲಕರು ಪ್ರತಿಭಟನೆಗೆ ಇಳಿದಿದ್ದರು. ಪ್ರತಿ ಕಿ.ಮೀ.ಗೆ ಸಂಸ್ಥೆಗೆ ತೆಗೆದುಕೊಳ್ಳುತ್ತಿರುವ ಕಮಿಷನ್​ ಹಣವನ್ನು ಕಡಿಮೆ ಮಾಡಬೇಕು ಎನ್ನುವುದು ಚಾಲಕರ ಆಗ್ರಹವಾಗಿತ್ತು.

ಇದನ್ನೂ ಓದಿ: ಇದೇನಿದು Koo.. ಏನಿದರ ವಿಶೇಷತೆ? ಕೇಂದ್ರ ಸರ್ಕಾರ ಈ ಆ್ಯಪ್​ಗೆ ಮಹತ್ವ ಕೊಡ್ತಿರೋದೇಕೆ?

ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್