AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಲಕರನ್ನು ನೌಕರರು ಎಂದು ಪರಿಗಣಿಸಿ: ಊಬರ್​ಗೆ ಲಂಡನ್​ ಸುಪ್ರೀಂಕೋರ್ಟ್​ ನಿರ್ದೇಶನ

ಕೋರ್ಟ್​ ತೀರ್ಪಿನ ಬಗ್ಗೆ ಊಬರ್​ ಸಂಸ್ಥೆ ಪ್ರತಿಕ್ರಿಯೆ ನೀಡಿದೆ. ನಾವು ಕೋರ್ಟ್​ ಆದೇಶವನ್ನು ಗೌರವಿಸುತ್ತೇವೆ ಎಂದು ಹೇಳಿದೆ.

ಚಾಲಕರನ್ನು ನೌಕರರು ಎಂದು ಪರಿಗಣಿಸಿ: ಊಬರ್​ಗೆ ಲಂಡನ್​ ಸುಪ್ರೀಂಕೋರ್ಟ್​ ನಿರ್ದೇಶನ
ಊಬರ್​
ರಾಜೇಶ್ ದುಗ್ಗುಮನೆ
| Edited By: |

Updated on: Feb 19, 2021 | 8:38 PM

Share

ಲಂಡನ್​: ಊಬರ್​ ಸಂಸ್ಥೆಯಡಿಯಲ್ಲಿ ಕಾರು ಚಲಾಯಿಸುವವರನ್ನು ನೌಕರರು ಎಂದು ಪರಿಗಣಿಸುವಂತೆ ಲಂಡನ್ ಸುಪ್ರೀಂಕೋರ್ಟ್​ ಊಬರ್​ ಸಂಸ್ಥೆಗೆ ಆದೇಶಿಸಿದೆ. ಈ ಮೂಲಕ ಹಲವು ವರ್ಷಗಳಿಂದ ಕೋರ್ಟ್​ನಲ್ಲಿ ನಡೆಯುತ್ತಿದ್ದ ಪ್ರಕರಣದಲ್ಲಿ ಊಬರ್​ಗೆ ಸೋಲುಂಟಾಗಿದೆ.

ಊಬರ್​ ಚಾಲಕರನ್ನು ಸಂಸ್ಥೆ ಸಿಬ್ಬಂದಿ ಎಂದು ಪರಿಗಣಿಸಿಲ್ಲ. ಬದಲಿಗೆ ಅವರನ್ನು ಗುತ್ತಿಗೆ ನೌಕರರ ರೀತಿಯಲ್ಲಿ ನಡೆಸಿಕೊಳ್ಳುತ್ತಿದೆ. ಈಗ ಇಂಗ್ಲೆಂಡ್ ಕೋರ್ಟ್​ ನೀಡಿದ ಹೊಸ ಆದೇಶದ ಅಡಿಯಲ್ಲಿ, ಊಬರ್​ ಸಿಬ್ಬಂದಿಗೆ ಕನಿಷ್ಠ ವೇತನ, ರಜೆ, ಅನಾರೋಗ್ಯ ರಜೆಯ ಹಕ್ಕು ಹಾಗೂ ಉದ್ಯೋಗ ಭದ್ರತೆ ಒದಗಿಸುವುದು ಕಡ್ಡಾಯವಾಗಿದೆ.

ಊಬರ್​ ಸಂಸ್ಥೆ ಚಾಲಕರು 2016ರಲ್ಲಿ ಪ್ರಕರಣವೊಂದನ್ನು ದಾಖಲು ಮಾಡಿದ್ದರು. ನಮ್ಮನ್ನು ಹೆಚ್ಚು ದುಡಿಸಿಕೊಳ್ಳುತ್ತಾರೆ ಮತ್ತು ಕಡಿಮೆ ವೇತನ ನೀಡುತ್ತಾರೆ. ಹೀಗಾಗಿ, ನಮ್ಮನ್ನು ನೌಕರರು ಎಂದು ಪರಿಗಣಿಸುವಂತೆ ಕೋರ್ಟ್​ಗೆ ಅರ್ಜಿ ಸಲ್ಲಿಕೆ ಮಾಡಲಾಗಿತ್ತು. ಈಗ ಊಬರ್​ ಸಂಸ್ಥೆಯ ಪರವಾಗಿ ತೀರ್ಪು ಹೊರ ಬಿದ್ದಿದೆ.

ಕೋರ್ಟ್​ ತೀರ್ಪಿನ ಬಗ್ಗೆ ಊಬರ್​ ಸಂಸ್ಥೆ ಪ್ರತಿಕ್ರಿಯೆ ನೀಡಿದೆ. ನಾವು ಕೋರ್ಟ್​ ಆದೇಶವನ್ನು ಗೌರವಿಸುತ್ತೇವೆ ಎಂದು ಹೇಳಿದೆ. ಈ ಮೂಲಕ ಕೋರ್ಟ್​​ ಆದೇಶವನ್ನು ಅನ್ವಯ ಮಾಡಿಕೊಳ್ಳುವ ಸೂಚನೆ ನೀಡಿದೆ.

ಇಂಗ್ಲೆಂಡ್​ನಲ್ಲಿ ಹೊರಡಿಸಿರುವ ಆದೇಶ ವಿಶ್ವಾದ್ಯಂತ ಪರಿಣಾಮ ಬೀರಲಿದೆ. ಭಾರತದಲ್ಲೂ ಸದ್ಯ ಚಾಲಕರನ್ನು ಊಬರ್​ ಸಂಸ್ಥೆ ಗುತ್ತಿಗೆ ಆಧಾರದ​ ಮೇಲೆ ತೆಗೆದುಕೊಂಡಿದೆ. ಹೀಗಾಗಿ, ಭಾರತ ಸೇರಿ ದೇಶದ ಅನೇಕ ರಾಷ್ಟ್ರಗಳಲ್ಲಿ ಊಬರ್​ ಚಾಲಕರು ಕೋರ್ಟ್​ನಲ್ಲಿ ಇದೇ ಮಾದರಿಯ ಅರ್ಜಿ ಸಲ್ಲಿಕೆ ಮಾಡಿ ತಮ್ಮನ್ನು ಸಿಬ್ಬಂದಿ ಎಂದು ಪರಿಗಣಿಸುವಂತೆ ಕೋರಬಹುದಾಗಿದೆ. ಇತ್ತೀಚೆಗೆ ದೆಹಲಿಯಲ್ಲಿ ಊಬರ್​-ಓಲಾ ಚಾಲಕರು ಪ್ರತಿಭಟನೆಗೆ ಇಳಿದಿದ್ದರು. ಪ್ರತಿ ಕಿ.ಮೀ.ಗೆ ಸಂಸ್ಥೆಗೆ ತೆಗೆದುಕೊಳ್ಳುತ್ತಿರುವ ಕಮಿಷನ್​ ಹಣವನ್ನು ಕಡಿಮೆ ಮಾಡಬೇಕು ಎನ್ನುವುದು ಚಾಲಕರ ಆಗ್ರಹವಾಗಿತ್ತು.

ಇದನ್ನೂ ಓದಿ: ಇದೇನಿದು Koo.. ಏನಿದರ ವಿಶೇಷತೆ? ಕೇಂದ್ರ ಸರ್ಕಾರ ಈ ಆ್ಯಪ್​ಗೆ ಮಹತ್ವ ಕೊಡ್ತಿರೋದೇಕೆ?

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು