AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಲಕರನ್ನು ನೌಕರರು ಎಂದು ಪರಿಗಣಿಸಿ: ಊಬರ್​ಗೆ ಲಂಡನ್​ ಸುಪ್ರೀಂಕೋರ್ಟ್​ ನಿರ್ದೇಶನ

ಕೋರ್ಟ್​ ತೀರ್ಪಿನ ಬಗ್ಗೆ ಊಬರ್​ ಸಂಸ್ಥೆ ಪ್ರತಿಕ್ರಿಯೆ ನೀಡಿದೆ. ನಾವು ಕೋರ್ಟ್​ ಆದೇಶವನ್ನು ಗೌರವಿಸುತ್ತೇವೆ ಎಂದು ಹೇಳಿದೆ.

ಚಾಲಕರನ್ನು ನೌಕರರು ಎಂದು ಪರಿಗಣಿಸಿ: ಊಬರ್​ಗೆ ಲಂಡನ್​ ಸುಪ್ರೀಂಕೋರ್ಟ್​ ನಿರ್ದೇಶನ
ಊಬರ್​
ರಾಜೇಶ್ ದುಗ್ಗುಮನೆ
| Edited By: |

Updated on: Feb 19, 2021 | 8:38 PM

Share

ಲಂಡನ್​: ಊಬರ್​ ಸಂಸ್ಥೆಯಡಿಯಲ್ಲಿ ಕಾರು ಚಲಾಯಿಸುವವರನ್ನು ನೌಕರರು ಎಂದು ಪರಿಗಣಿಸುವಂತೆ ಲಂಡನ್ ಸುಪ್ರೀಂಕೋರ್ಟ್​ ಊಬರ್​ ಸಂಸ್ಥೆಗೆ ಆದೇಶಿಸಿದೆ. ಈ ಮೂಲಕ ಹಲವು ವರ್ಷಗಳಿಂದ ಕೋರ್ಟ್​ನಲ್ಲಿ ನಡೆಯುತ್ತಿದ್ದ ಪ್ರಕರಣದಲ್ಲಿ ಊಬರ್​ಗೆ ಸೋಲುಂಟಾಗಿದೆ.

ಊಬರ್​ ಚಾಲಕರನ್ನು ಸಂಸ್ಥೆ ಸಿಬ್ಬಂದಿ ಎಂದು ಪರಿಗಣಿಸಿಲ್ಲ. ಬದಲಿಗೆ ಅವರನ್ನು ಗುತ್ತಿಗೆ ನೌಕರರ ರೀತಿಯಲ್ಲಿ ನಡೆಸಿಕೊಳ್ಳುತ್ತಿದೆ. ಈಗ ಇಂಗ್ಲೆಂಡ್ ಕೋರ್ಟ್​ ನೀಡಿದ ಹೊಸ ಆದೇಶದ ಅಡಿಯಲ್ಲಿ, ಊಬರ್​ ಸಿಬ್ಬಂದಿಗೆ ಕನಿಷ್ಠ ವೇತನ, ರಜೆ, ಅನಾರೋಗ್ಯ ರಜೆಯ ಹಕ್ಕು ಹಾಗೂ ಉದ್ಯೋಗ ಭದ್ರತೆ ಒದಗಿಸುವುದು ಕಡ್ಡಾಯವಾಗಿದೆ.

ಊಬರ್​ ಸಂಸ್ಥೆ ಚಾಲಕರು 2016ರಲ್ಲಿ ಪ್ರಕರಣವೊಂದನ್ನು ದಾಖಲು ಮಾಡಿದ್ದರು. ನಮ್ಮನ್ನು ಹೆಚ್ಚು ದುಡಿಸಿಕೊಳ್ಳುತ್ತಾರೆ ಮತ್ತು ಕಡಿಮೆ ವೇತನ ನೀಡುತ್ತಾರೆ. ಹೀಗಾಗಿ, ನಮ್ಮನ್ನು ನೌಕರರು ಎಂದು ಪರಿಗಣಿಸುವಂತೆ ಕೋರ್ಟ್​ಗೆ ಅರ್ಜಿ ಸಲ್ಲಿಕೆ ಮಾಡಲಾಗಿತ್ತು. ಈಗ ಊಬರ್​ ಸಂಸ್ಥೆಯ ಪರವಾಗಿ ತೀರ್ಪು ಹೊರ ಬಿದ್ದಿದೆ.

ಕೋರ್ಟ್​ ತೀರ್ಪಿನ ಬಗ್ಗೆ ಊಬರ್​ ಸಂಸ್ಥೆ ಪ್ರತಿಕ್ರಿಯೆ ನೀಡಿದೆ. ನಾವು ಕೋರ್ಟ್​ ಆದೇಶವನ್ನು ಗೌರವಿಸುತ್ತೇವೆ ಎಂದು ಹೇಳಿದೆ. ಈ ಮೂಲಕ ಕೋರ್ಟ್​​ ಆದೇಶವನ್ನು ಅನ್ವಯ ಮಾಡಿಕೊಳ್ಳುವ ಸೂಚನೆ ನೀಡಿದೆ.

ಇಂಗ್ಲೆಂಡ್​ನಲ್ಲಿ ಹೊರಡಿಸಿರುವ ಆದೇಶ ವಿಶ್ವಾದ್ಯಂತ ಪರಿಣಾಮ ಬೀರಲಿದೆ. ಭಾರತದಲ್ಲೂ ಸದ್ಯ ಚಾಲಕರನ್ನು ಊಬರ್​ ಸಂಸ್ಥೆ ಗುತ್ತಿಗೆ ಆಧಾರದ​ ಮೇಲೆ ತೆಗೆದುಕೊಂಡಿದೆ. ಹೀಗಾಗಿ, ಭಾರತ ಸೇರಿ ದೇಶದ ಅನೇಕ ರಾಷ್ಟ್ರಗಳಲ್ಲಿ ಊಬರ್​ ಚಾಲಕರು ಕೋರ್ಟ್​ನಲ್ಲಿ ಇದೇ ಮಾದರಿಯ ಅರ್ಜಿ ಸಲ್ಲಿಕೆ ಮಾಡಿ ತಮ್ಮನ್ನು ಸಿಬ್ಬಂದಿ ಎಂದು ಪರಿಗಣಿಸುವಂತೆ ಕೋರಬಹುದಾಗಿದೆ. ಇತ್ತೀಚೆಗೆ ದೆಹಲಿಯಲ್ಲಿ ಊಬರ್​-ಓಲಾ ಚಾಲಕರು ಪ್ರತಿಭಟನೆಗೆ ಇಳಿದಿದ್ದರು. ಪ್ರತಿ ಕಿ.ಮೀ.ಗೆ ಸಂಸ್ಥೆಗೆ ತೆಗೆದುಕೊಳ್ಳುತ್ತಿರುವ ಕಮಿಷನ್​ ಹಣವನ್ನು ಕಡಿಮೆ ಮಾಡಬೇಕು ಎನ್ನುವುದು ಚಾಲಕರ ಆಗ್ರಹವಾಗಿತ್ತು.

ಇದನ್ನೂ ಓದಿ: ಇದೇನಿದು Koo.. ಏನಿದರ ವಿಶೇಷತೆ? ಕೇಂದ್ರ ಸರ್ಕಾರ ಈ ಆ್ಯಪ್​ಗೆ ಮಹತ್ವ ಕೊಡ್ತಿರೋದೇಕೆ?

Follow Us
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ