AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಂಗ್ಲಾದೇಶದಲ್ಲಿ ಭಗವಾನ್ ವಿಷ್ಣುವಿನ ಬೆಲೆಬಾಳುವ ವಿಗ್ರಹ ಪತ್ತೆ ; ಮಣ್ಣು ಅಗೆಯುವಾಗ ಸಿಕ್ಕರೂ ಸುಮ್ಮನಿದ್ದ ಶಿಕ್ಷಕ

ವಿಷ್ಣುವಿನ ವಿಗ್ರಹವನ್ನು ಅಬು ಯೂಸುಫ್​ ಎಂಬ ಹೆಸರಿನ ಶಿಕ್ಷಕರ ಬಳಿಯಿಂದ ವಶಪಡಿಸಿಕೊಳ್ಳಲಾಗಿದೆ. ಇವರಿಗೆ ಒಂದೂವರೆ ತಿಂಗಳ ಹಿಂದೆಯೇ ವಿಗ್ರಹ ಸಿಕ್ಕಿತ್ತು ಎನ್ನಲಾಗಿದೆ.

ಬಾಂಗ್ಲಾದೇಶದಲ್ಲಿ ಭಗವಾನ್ ವಿಷ್ಣುವಿನ ಬೆಲೆಬಾಳುವ ವಿಗ್ರಹ ಪತ್ತೆ ; ಮಣ್ಣು ಅಗೆಯುವಾಗ ಸಿಕ್ಕರೂ ಸುಮ್ಮನಿದ್ದ ಶಿಕ್ಷಕ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Aug 05, 2021 | 5:11 PM

Share

ಢಾಕಾ: ಸುಮಾರು 1000 ವರ್ಷಗಳಷ್ಟು ಹಳೆಯದು ಎನ್ನಲಾದ, ಶ್ರೀವಿಷ್ಣುವಿನ ಕಪ್ಪುಕಲ್ಲಿನ ವಿಗ್ರಹ (Black Stone Statue) ವನ್ನು ಬಾಂಗ್ಲಾದೇಶ ಪೊಲೀಸ (Bangladesh Police)ರು ವಶಪಡಿಸಿಕೊಂಡಿದ್ದಾರೆ. ಈ ವಿಗ್ರಹವನ್ನು ಅವರು ಕೊಮಿಲ್ಲಾ ಜಿಲ್ಲೆಯ ಬಾರೋ ಗೋಲಿ ಎಂಬ ಗ್ರಾಮದ ಶಿಕ್ಷಕ (Teacher)ರೊಬ್ಬರಿಂದ ವಶಪಡಿಸಿಕೊಂಡಿದ್ದಾರೆ ಎಂದು ಡೇಲಿ ಸ್ಟಾರ್​ ಎಂಬ ನ್ಯೂಸ್​ ಪೇಪರ್​ ವರದಿ ಮಾಡಿದೆ.

ವಿಷ್ಣುವಿನ ಈ ವಿಗ್ರಹ 23 ಇಂಚ್​ಗಳಷ್ಟು ಎತ್ತರವಿದ್ದು, 9.5 ಇಂಚ್​ಗಳಷ್ಟು ಅಗಲವಿದೆ. ಹಾಗೇ, 12 ಕೆಜಿ ತೂಕ ಹೊಂದಿದೆ. ಈ ಬಗ್ಗೆ ದೌಡ್ಕಂಡಿ ಪೊಲೀಸ್​ ಠಾಣೆಯ ಅಧಿಕಾರಿ ನಝರ್​ಉಲ್​ ಇಸ್ಲಾಂ ಮಾಹಿತಿ ನೀಡಿದ್ದು, ವಿಷ್ಣುವಿನ ವಿಗ್ರಹವನ್ನು ಅಬು ಯೂಸುಫ್​ ಎಂಬ ಹೆಸರಿನ ಶಿಕ್ಷಕರ ಬಳಿಯಿಂದ ವಶಪಡಿಸಿಕೊಳ್ಳಲಾಗಿದೆ. ಇವರಿಗೆ ಒಂದೂವರೆ ತಿಂಗಳ ಹಿಂದೆಯೇ ವಿಗ್ರಹ ಸಿಕ್ಕಿತ್ತು. ಆದರೆ ಅವರು ನಮಗೆ ಮಾಹಿತಿ ನೀಡದೆ, ತಮ್ಮ ಬಳಿಯೇ ಇಟ್ಟುಕೊಂಡಿದ್ದರು. ಅವರ ಬಳಿ ವಿಗ್ರಹ ಇದೆ ಎಂಬ ಪಕ್ಕಾ ಮಾಹಿತಿ ನಮಗೆ ಬೇರೆ ಮೂಲಗಳಿಂದ ಬಂದ ಹಿನ್ನೆಲೆಯಲ್ಲಿ, ಅವರ ಮನೆಗೆ ಹೋಗಿ ವಶಪಡಿಸಿಕೊಳ್ಳಲಾಗಿದೆ ಎಂದೂ ಹೇಳಿದ್ದಾರೆ. ಇನ್ನು ತಮಗೆ ವಿಗ್ರಹ ಹೇಗೆ ಸಿಕ್ಕಿತು ಎಂಬುದನ್ನು ಶಿಕ್ಷಕ ಯೂಸುಫ್​ ತಿಳಿಸಿದ್ದಾರೆ. ಸುಮಾರು 20-22 ದಿನಗಳ ಹಿಂದೆ ಯಾವುದೋ ಒಂದು ಕೆಲಸಕ್ಕೆಂದು ಮಣ್ಣು ಅಗೆಯುತ್ತಿರುವಾಗ ವಿಗ್ರಹ ಸಿಕ್ಕಿತು. ಆದರೆ ನಮ್ಮ ಕೆಲಸದ ಮಧ್ಯೆ ಆ ವಿಷಯವನ್ನು ಪೊಲೀಸರಿಗೆ ತಿಳಿಸುವುದನ್ನೇ ಮರೆತೆವು ಎಂದಿದ್ದಾರೆ.

ಇದೀಗ ಪತ್ತೆಯಾಗಿರುವ ಭಗವಾನ್​ ವಿಷ್ಣುವಿನ ವಿಗ್ರಹ ಅತ್ಯಂತ ಬೆಲೆಬಾಳುವಂಥದ್ದಾಗಿದೆ. ಸುಮಾರು 1000 ವರ್ಷ ಹಳೆಯದು ಎಂದು ನೋಡಿದರೇ ಅನ್ನಿಸುತ್ತಿದೆ. ಅದನ್ನು ಸರಿಯಾಗಿ ಸಂರಕ್ಷಣೆ ಮಾಡುವ ಸಲುವಾಗಿ, ಹೆಚ್ಚಿನ ಅಧ್ಯಯನಕ್ಕಾಗಿ ತಕ್ಷಣವೇ ಮೈನಾಮತಿ ಮ್ಯೂಸಿಯಂಗೆ ಹಸ್ತಾಂತರಿಸಿದರೆ ಒಳ್ಳೆಯದು ಎಂದು ಚಟ್ಟೋಗ್ರಾಮ್ ವಿಭಾಗೀಯ ಪುರಾತತ್ವ ಇಲಾಖೆಯ ಮಾಜಿ ಪ್ರಾದೇಶಿಕ ನಿರ್ದೇಶಕ ಅತೌರ್​ ರೆಹಮಾನ್​ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಪ್ರತಿಪಕ್ಷಗಳು ರಾಜಕೀಯ ಲಾಭಕ್ಕಾಗಿ ಸೆಲ್ಫ್ ಗೋಲ್ ಹೊಡೆಯುತ್ತಿವೆ: ಪ್ರಧಾನಿ ನರೇಂದ್ರ ಮೋದಿ

Tokyo Olympics: ಒಲಿಂಪಿಕ್ಸ್​ನಲ್ಲಿ ಭಾರತಕ್ಕೆ ಎರಡನೇ ಬೆಳ್ಳಿ ಪದಕ! ಬೆಳ್ಳಿಗೆ ಮುತ್ತಿಕ್ಕಿದ ಕುಸ್ತಿಪಟು ರವಿ ದಹಿಯಾ

Follow Us
Web contact
Web contact

TV9 Kannada

Read More
ಬೆಂಗಳೂರು ಅಂತಾರಾಷ್ಟ್ರೀಯ ಸ್ಟೇಡಿಯಂ ಗುದ್ದಲಿ ಪೂಜೆಗೆ ಕ್ರಿಕೆಟ್ ದಿಗ್ಗಜರು
ಬೆಂಗಳೂರು ಅಂತಾರಾಷ್ಟ್ರೀಯ ಸ್ಟೇಡಿಯಂ ಗುದ್ದಲಿ ಪೂಜೆಗೆ ಕ್ರಿಕೆಟ್ ದಿಗ್ಗಜರು
ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ
ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ