Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟರ್ಕಿಯ ಸಂಸತ್ ಬಳಿ ಭಾರಿ ಸ್ಫೋಟ, ಗುಂಡಿನ ದಾಳಿ

ಟರ್ಕಿಯ ರಾಜಧಾನಿ ಅಂಕಾರದ ಹೃದಯಭಾಗದಲ್ಲಿ ಭಾನುವಾರ ಭಾರೀ ಸ್ಫೋಟದ ಸದ್ದು ಕೇಳಿಸಿದೆ ಎಂದು ಟರ್ಕಿಯ ಮಾಧ್ಯಮ ವರದಿಗಳು ತಿಳಿಸಿವೆ. ಕೆಲವು ವರದಿಗಳ ಪ್ರಕಾರ ಸ್ಫೋಟದ ನಂತರ ಗುಂಡಿನ ದಾಳಿ ನಡೆದಿದೆ. ಸಂಸತ್ತು ಮತ್ತು ಆಂತರಿಕ ವ್ಯವಹಾರಗಳ ಸಚಿವಾಲಯದ ಸಮೀಪವಿರುವ ಪ್ರದೇಶದಲ್ಲಿ ಸ್ಫೋಟ ಸಂಭವಿಸಿದ್ದು, ಕಾರಣ ತಿಳಿದುಬಂದಿಲ್ಲ. ಯಾವುದೇ ಸಾವು-ನೋವುಗಳ ಬಗ್ಗೆ ತಕ್ಷಣದ ವರದಿಗಳಿಲ್ಲ.

ಟರ್ಕಿಯ ಸಂಸತ್ ಬಳಿ ಭಾರಿ ಸ್ಫೋಟ, ಗುಂಡಿನ ದಾಳಿ
ಟರ್ಕಿ ಸಂಸತ್Image Credit source: Hindustan Times
Follow us
ನಯನಾ ರಾಜೀವ್
|

Updated on:Oct 01, 2023 | 2:40 PM

ಟರ್ಕಿಯ ರಾಜಧಾನಿ ಅಂಕಾರದ ಹೃದಯಭಾಗದಲ್ಲಿ ಭಾನುವಾರ ಭಾರೀ ಸ್ಫೋಟದ ಸದ್ದು ಕೇಳಿಸಿದೆ ಎಂದು ಟರ್ಕಿಯ ಮಾಧ್ಯಮ ವರದಿಗಳು ತಿಳಿಸಿವೆ. ಕೆಲವು ವರದಿಗಳ ಪ್ರಕಾರ ಸ್ಫೋಟದ ನಂತರ ಗುಂಡಿನ ದಾಳಿ ನಡೆದಿದೆ. ಸಂಸತ್ತು ಮತ್ತು ಆಂತರಿಕ ವ್ಯವಹಾರಗಳ ಸಚಿವಾಲಯದ ಸಮೀಪವಿರುವ ಪ್ರದೇಶದಲ್ಲಿ ಸ್ಫೋಟ ಸಂಭವಿಸಿದ್ದು, ಕಾರಣ ತಿಳಿದುಬಂದಿಲ್ಲ. ಯಾವುದೇ ಸಾವು-ನೋವುಗಳ ಬಗ್ಗೆ ತಕ್ಷಣದ ವರದಿಗಳಿಲ್ಲ. ಬೇಸಿಗೆ ರಜೆಯ ನಂತರ ಸಂಸತ್ತು ಭಾನುವಾರ ಮತ್ತೆ ತೆರೆಯಲು ನಿರ್ಧರಿಸಲಾಗಿದೆ. ಭದ್ರತಾ ಪಡೆಗಳು ಈ ಪ್ರದೇಶದಲ್ಲಿ ತಡೆಗೋಡೆಗಳನ್ನು ಸ್ಥಾಪಿಸಿವೆ.

ದೂರದರ್ಶನದ ದೃಶ್ಯಾವಳಿಗಳಲ್ಲಿ ಬಾಂಬ್ ಸ್ಕ್ವಾಡ್‌ಗಳು ಆ ಪ್ರದೇಶದಲ್ಲಿ ನಿಲ್ಲಿಸಿದ ವಾಹನದ ಬಳಿ ತಪಾಸಣೆ ಮಾಡುತ್ತಿರುವುದನ್ನು ಕಾಣಬಹುದು.

ಬೆಳಗ್ಗೆ 9.30ರ ಸುಮಾರಿಗೆ ಈ ಘಟನೆ ನಡೆದಿದೆ. ಈ ಅವಧಿಯಲ್ಲಿ ಇಬ್ಬರು ಪೊಲೀಸರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಭಾರೀ ಬಾಂಬ್ ಸ್ಫೋಟದ ನಂತರ ಭದ್ರತಾ ಮತ್ತು ತನಿಖಾ ಸಂಸ್ಥೆಗಳು ಸ್ಥಳಕ್ಕೆ ಧಾವಿಸಿವೆ.

ಟರ್ಕಿ ಸರ್ಕಾರ ಇದನ್ನು ಭಯೋತ್ಪಾದಕ ದಾಳಿ ಎಂದು ಬಣ್ಣಿಸಿದೆ. ಟರ್ಕಿಯ ಸಂಸತ್ತಿನ ಸಮೀಪವಿರುವ ಅಂಕಾರಾದಲ್ಲಿ ಈ ಸ್ಫೋಟ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಸ್ಫೋಟದ ಜೊತೆಗೆ ಗುಂಡಿನ ದಾಳಿ ನಡೆದಿದೆ ಎಂದು ವರದಿಯಾಗಿದೆ. ಈ ಘಟನೆ ಅಂಕಾರಾದಲ್ಲಿ ಸಂಚಲನ ಮೂಡಿಸಿದೆ. ಎಎಫ್‌ಪಿ ಸುದ್ದಿ ಸಂಸ್ಥೆ ಪ್ರಕಾರ, ಅಧ್ಯಕ್ಷ ಎರ್ಡೊಗನ್ ಸರ್ಕಾರ ಇದನ್ನು ಭಯೋತ್ಪಾದಕ ದಾಳಿ ಎಂದು ಕರೆದಿದೆ. ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ ಇನ್ನೂ ತಿಳಿದುಬಂದಿಲ್ಲ.

ಇದೊಂದು ಆತ್ಮಹತ್ಯಾ ದಾಳಿಯಾಗಿದೆ, ದಾಳಿಕೋರನು ಸ್ಫೋಟಕ ಸಾಧನವನ್ನು ಸ್ಫೋಟಿಸಿದ್ದ, ಮತ್ತೊಬ್ಬ ದಾಳಿಕೋರನನ್ನು ಪೊಲೀಸ್​ ಎನ್​ಕೌಂಟರ್​ನಲ್ಲಿ ಹತ್ಯೆ ಮಾಡಿದ್ದಾರೆ.

ಟರ್ಕಿಯಲ್ಲಿ ಬೇಸಿಗೆ ರಜೆ ಮುಗಿದ ನಂತರ ಸಂಸತ್ತಿನ ಕಲಾಪಗಳು ಭಾನುವಾರ ಪುನರಾರಂಭಗೊಳ್ಳಬೇಕಿತ್ತು. ವಿಚಾರಣೆ ಆರಂಭವಾಗುವ ಕೆಲವೇ ಗಂಟೆಗಳ ಮೊದಲು ಆತ್ಮಹತ್ಯಾ ದಾಳಿ ನಡೆದಿದೆ. ಟಿವಿ ಫೂಟೇಜ್‌ನಲ್ಲಿ ಬಾಂಬ್ ನಿಷ್ಕ್ರಿಯ ದಳವು ಆ ಪ್ರದೇಶದಲ್ಲಿ ನಿಲ್ಲಿಸಿದ ವಾಹನದ ಬಳಿ ಕೆಲಸ ಮಾಡುವುದನ್ನು ಕಾಣಬಹುದು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 1:00 pm, Sun, 1 October 23

ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ