AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಷ್ಟ್ರಗೀತೆಯಲ್ಲಿ ಏಕತೆಯ ಅಂಶ ಸೇರಿಸಿದ ಆಸ್ಟ್ರೇಲಿಯಾ

ದೇಶದ ಆಧುನಿಕತೆ ಮತ್ತು ಪ್ರಾಚೀನ ಇತಿಹಾಸದಲ್ಲಿ ಏಕತೆಯನ್ನು ಬಿಂಬಿಸುವ ಉದ್ದೇಶದಿಂದ ಆಸ್ಟ್ರೇಲಿಯಾ ತನ್ನ ರಾಷ್ಟ್ರಗೀತೆಯಲ್ಲಿ ಚಿಕ್ಕ ಬದಲಾವಣೆ ಮಾಡಿದೆ.

ರಾಷ್ಟ್ರಗೀತೆಯಲ್ಲಿ ಏಕತೆಯ ಅಂಶ ಸೇರಿಸಿದ ಆಸ್ಟ್ರೇಲಿಯಾ
ಸಾಂಕೇತಿಕ ಚಿತ್ರ
guruganesh bhat
|

Updated on:Jan 01, 2021 | 7:42 PM

Share

ಸಿಡ್ನಿ: ಪ್ರಧಾನಿ ಸ್ಕಾಟ್ ಮಾರಿಸ್ಸನ್​ರ ಆಶಯದಂತೆ ಆಸ್ಟ್ರೇಲಿಯಾ ತನ್ನ ರಾಷ್ಟ್ರಗೀತೆಯಲ್ಲಿ ಚಿಕ್ಕ ಬದಲಾವಣೆ ಮಾಡಿದೆ. ದೇಶದ ಏಕತೆಯನ್ನು ಬಿಂಬಿಸುವ ದೃಷ್ಟಿಯಿಂದ ‘For we are young and free’ ಎನ್ನುವ ಸಾಲನ್ನು ‘For we are one and free’ ಎಂದು ಬದಲಾಯಿಸಲು ಗವರ್ನರ್ ಜನರಲ್ ಡೇವಿಡ್ ಹರ್ಲೇ ಸಮ್ಮತಿ ನೀಡಿದ್ದಾರೆ.

ಇತ್ತೀಚಿಗಷ್ಟೇ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸ್ಸನ್, ದೇಶದ ಏಕತೆಯನ್ನು ಇನ್ನಷ್ಟು ಸದೃಢಗೊಳಿಸುವ ನಿಟ್ಟಿನಲ್ಲಿ ರಾಷ್ಟ್ರಗೀತೆಯಲ್ಲಿ ಚಿಕ್ಕ ಬದಲಾವಣೆ ಮಾಡುವ ಕುರಿತು ಪ್ರಸ್ತಾಪಿಸಿದ್ದರು. ಅಖಂಡ ಆಸ್ಟ್ರೇಲಿಯಾದ ಕುರಿತು ನಾಗರಿಕರಲ್ಲಿ ಭಾವನೆಯನ್ನು ಬಲಗೊಳಿಸಲು ಏಕತೆಯ ಅಂಶವನ್ನು ಸೇರಿಸಬೇಕಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದರು. 1984ರ ನಂತರ ಇದೇ ಮೊದಲ ಬಾರಿಗೆ ಆಸ್ಟ್ರೇಲಿಯಾದ ರಾಷ್ಟ್ರಗೀತೆಯಲ್ಲಿ ಬದಲಾವಣೆ ಮಾಡಲಾಗಿದೆ.

ಆಧುನಿಕೀಕರಣಗೊಂಡಿರುವ ಆಸ್ಟ್ರೇಲಿಯಾಕ್ಕೆ ಪ್ರಾಚೀನ ಇತಿಹಾಸವಿದೆ. ನಮ್ಮ ಪೂರ್ವಜರ ಕುರಿತು ನಮಗೆ ಹೆಮ್ಮೆ ಮತ್ತು ಗೌರವವಿದೆ. ಆಧುನಿಕತೆ ಮತ್ತು ಪ್ರಾಚೀನ ಇತಿಹಾಸವನ್ನು ಸೇರಿಸಿ ದೇಶದ ಜನರಲ್ಲಿ ಒಗ್ಗಟ್ಟಿನ ಭಾವ ಮೂಡುವಂತೆ ‘ಏಕತೆ’ಯ ಅಂಶವನ್ನು ಸೇರಿಸಲಾಗಿದೆ ಎಂದು ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸ್ಸನ್ ತಿಳಿಸಿದ್ದಾರೆ.

1978ರಲ್ಲಿ ಸಂಗೀತ ಸಂಯೋಜಕ ಪೀಟರ್ ಡೋಡ್ಸ್ ಮ್ಯಾಕ್​ಕೋರ್ಮಿಕ್ ಸಂಯೋಜಿಸಿದ ಗೀತೆಯನ್ನು ಆಸ್ಟ್ರೇಲಿಯಾ ರಾಷ್ಟ್ರಗೀತೆಯನ್ನಾಗಿ ಘೋಷಿಸಿತ್ತು. ಬ್ರಿಟಿಷ್ ಆಳ್ವಿಕೆಯಲ್ಲಿ ರಾಷ್ಟ್ರಗೀತೆಯೆಂದು ಘೋಷಿಸಿದ್ದ God save the queen ಗೀತೆಯ ಬದಲಿಗೆ ‘Advance Australia Fair’ ಗೀತೆಯನ್ನು ರಾಷ್ಟ್ರಗೀತೆಯನ್ನಾಗಿ ಪರಿಗಣಿಸಲಾಗಿತ್ತು.

Published On - 7:01 pm, Fri, 1 January 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ