AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ecuador Earthquake: ಈಕ್ವೆಡಾರ್​ನಲ್ಲಿ 6.8 ತೀವ್ರತೆಯ ಪ್ರಬಲ ಭೂಕಂಪ, 14 ಮಂದಿ ಸಾವು

ದಕ್ಷಿಣ ಅಮೆರಿಕದ ಈಕ್ವೆಡಾರ್​ನಲ್ಲಿ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, 14 ಮಂದಿ ಮೃತಪಟ್ಟಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಭೂಕಂಪದ ತೀವ್ರತೆಯಿಂದಾಗಿ ಹಲವು ಕಟ್ಟಡಗಳು ಹಾನಿಗೀಡಾಗಿವೆ, ಜನರು ಮನೆ ಬಿಟ್ಟು ಬೀದಿಗೆ ಬಂದಿದ್ದಾರೆ. ಉತ್ತರ ಪೆರುವಿನಲ್ಲೂ ಭೂಕಂಪದ ಅನುಭವವಾಗಿದೆ.

Ecuador Earthquake: ಈಕ್ವೆಡಾರ್​ನಲ್ಲಿ 6.8 ತೀವ್ರತೆಯ ಪ್ರಬಲ ಭೂಕಂಪ, 14 ಮಂದಿ ಸಾವು
ಈಕ್ವೆಡಾರ್ ಭೂಕಂಪImage Credit source: Reuters
ನಯನಾ ರಾಜೀವ್
|

Updated on: Mar 19, 2023 | 7:56 AM

Share

ಮುಖ್ಯಾಂಶಗಳು

  • ಈಕ್ವೆಡಾರ್​ನಲ್ಲಿ 6.8 ತೀವ್ರತೆಯ ಪ್ರಬಲ ಭೂಕಂಪ, 14 ಮಂದಿ ಸಾವು
  • ದಕ್ಷಿಣ ಅಮೆರಿಕದ ಈಕ್ವೆಡಾರ್​ನಲ್ಲಿ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, 14 ಮಂದಿ ಮೃತಪಟ್ಟಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ
  • ದೇಶದ ಕರಾವಳಿ ಗುವಾಯಾಸ್ ಪ್ರದೇಶದಲ್ಲಿ 6.8 ತೀವ್ರತೆಯ ಭೂಕಂಪ ಸಂಭವಿಸಿದ್ದು, ಈಕ್ವೆಡಾರ್​ನ ಎರಡನೇ ದೊಡ್ಡ ನಗರವಾದ ಗುವಾಕ್ವಿಲ್​ನ ದಕ್ಷಿಣಕ್ಕೆ ಸುಮಾರು 50 ಮೈಲಿಗಳ ದೂರದಲ್ಲಿ ಭೂಕಂಪದ ಕೇಂದ್ರ ಬಿಂದುವಿದೆ.

ದಕ್ಷಿಣ ಅಮೆರಿಕದ ಈಕ್ವೆಡಾರ್​ನಲ್ಲಿ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, 14 ಮಂದಿ ಮೃತಪಟ್ಟಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಭೂಕಂಪದ ತೀವ್ರತೆಯಿಂದಾಗಿ ಹಲವು ಕಟ್ಟಡಗಳು ಹಾನಿಗೀಡಾಗಿವೆ, ಜನರು ಮನೆ ಬಿಟ್ಟು ಬೀದಿಗೆ ಬಂದಿದ್ದಾರೆ. ಉತ್ತರ ಪೆರುವಿನಲ್ಲೂ ಭೂಕಂಪದ ಅನುಭವವಾಗಿದೆ.

ದೇಶದ ಕರಾವಳಿ ಗುವಾಯಾಸ್ ಪ್ರದೇಶದಲ್ಲಿ 6.8 ತೀವ್ರತೆಯ ಭೂಕಂಪ ಸಂಭವಿಸಿದ್ದು, ಈಕ್ವೆಡಾರ್​ನ ಎರಡನೇ ದೊಡ್ಡ ನಗರವಾದ ಗುವಾಕ್ವಿಲ್​ನ ದಕ್ಷಿಣಕ್ಕೆ ಸುಮಾರು 50 ಮೈಲಿಗಳ ದೂರದಲ್ಲಿ ಭೂಕಂಪದ ಕೇಂದ್ರ ಬಿಂದುವಿದೆ.

ಉತ್ತರ ಪೆರುವಿನಲ್ಲೂ ಭೂಕಂಪದ ಅನುಭವವಾಗಿದ್ದು, ಅಧ್ಯಕ್ಷ ಗಿಲ್ಲೆರ್ಮೊ ಲಾಸ್ಸೊ ಟ್ವೀಟ್ ಮಾಡಿ ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ. ಎಲ್ ಒರೊದಲ್ಲಿ 11 ಮಂದಿ ಮೃತಪಟ್ಟರೆ, ಅಜುವಾಯ್​ನಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ, ಅಜುವಾಯ್​ನಲ್ಲಿ ಕಾರಿನ ಮೇಲೆ ಗೋಡೆ ಬಿದ್ದು ಒಬ್ಬರು ಮೃತಪಟ್ಟಿದ್ದಾರೆ, ಭದ್ರತಾ ಕ್ಯಾಮರಾ ಟವರ್ ಬಿದ್ದು ಎಲ್ ಒರೊದಲ್ಲಿ ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ.

ಮತ್ತಷ್ಟು ಓದಿ: China Earthquake: ಚೀನಾದಲ್ಲಿ 4.7 ತೀವ್ರತೆಯ ಭೂಕಂಪ

ಭೂಕಂಪದಲ್ಲಿ ಗಾಯಗೊಂಡವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ, ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಸಾವುನೋವುಗಳು ಹೆಚ್ಚಾಗುವ ಸಾಧ್ಯತೆ ಇದೆ. ಭೂಕಂಪವು ದಕ್ಷಿಣ ಈಕ್ವೆಡಾರ್​ನಲ್ಲಿರುವ ಹಲವು ಕಟ್ಟಡಗಳಿಗೆ ಹಾನಿಯುಂಟು ಮಾಡಿದೆ, ಸುನಾಮಿಯ ಯಾವುದೇ ಲಕ್ಷಣಗಳಿಲ್ಲ.

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ