AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈಶಾನ್ಯ ಜಪಾನ್​ನಲ್ಲಿ ಭೂಕಂಪ; ಸುನಾಮಿ ಏಳುವ ಸಾಧ್ಯತೆ

Japan Earthquake: ಮಿಯಾಮಿ ಪ್ರದೇಶದ ಸಾಗರದ ಆಳದಲ್ಲಿ ಈ ಭೂಕಂಪ ಸಂಭವಿಸಿದೆ. ಭೂಕಂಪನದಿಂದ ಯಾವುದೇ ಸಾವು ನೋವು ಅಥವಾ ಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ಸುನಾಮಿ ಏಳುವ ಮುನ್ಸೂಚನೆ ಇದೆ ಎಂದು ವರದಿಯಾಗಿದೆ.

ಈಶಾನ್ಯ ಜಪಾನ್​ನಲ್ಲಿ ಭೂಕಂಪ; ಸುನಾಮಿ ಏಳುವ ಸಾಧ್ಯತೆ
ಸಾಂದರ್ಭಿಕ ಚಿತ್ರ
guruganesh bhat
|

Updated on:Mar 20, 2021 | 6:43 PM

Share

ಟೋಕಿಯೋ: ಜಪಾನ್​ನ ಈಶಾನ್ಯ ಕರಾವಳಿಯಲ್ಲಿ ಶನಿವಾರ ಪ್ರಬಲ ಭೂಕಂಪವಾಗಿದ್ದು ರಿಕ್ಟರ್ ಮಾಪಕದಲ್ಲಿ 7 ರಷ್ಟು ತೀವ್ರತೆ ದಾಖಲಾಗಿದೆ ಎಂದು ಯುಎಸ್ ಜಿಯೋಲಾಜಿಕಲ್ ಸರ್ವೆ ವರದಿ ಮಾಡಿದೆ. ಜಪಾನ್​​ನ ಈಶಾನ್ಯ ಕಡಲತೀರದಲ್ಲಿ ಸಂಭವಿಸಿರುವ ಈ ಭೂಕಂಪದಿಂದ ಜಪಾನ್​ಗೆ ಸುನಾಮಿ ಭೀತಿ ಎದುರಾಗುವ ಸಾಧ್ಯತೆ ಇದೆ ಎಂದು ಅಲ್ಲಿನ ಹವಾಮಾನ ಇಲಾಖೆ ತಿಳಿಸಿದೆ.

ಮಿಯಾಮಿ ಪ್ರದೇಶದ ಸಾಗರದ ಆಳದಲ್ಲಿ ಈ ಭೂಕಂಪ ಸಂಭವಿಸಿದೆ. ಭೂಕಂಪನದಿಂದ ಯಾವುದೇ ಸಾವು ನೋವು ಅಥವಾ ಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ಸುನಾಮಿ ಏಳುವ ಮುನ್ಸೂಚನೆ ಇದೆ ಎಂದು ವರದಿಯಾಗಿದೆ. ಹೀಗಾಗಿ ಜಪಾನ್​ನಾದ್ಯಂತ ಭಾರಿ ಮುಂಜಾಗರೂಕತೆ ವಹಿಸಲಾಗಿದೆ.

ರಿಕ್ಟರ್ ಮಾಪಕದಲ್ಲಿ 7ರಷ್ಟು ತೀವ್ರತೆ ದಾಖಲಾಗಿರುವುದರಿಂದ ರೈಲ್ವೆ ಇಲಾಖೆಯು ರೈಲು ಸಂಚಾರವನ್ನು ಸ್ಥಗಿತಗೊಳಿಸಿದೆ. ಅಲ್ಲದೇ ಈಶಾನ್ಯ ಜಪಾನ್​ನ ಅಣು ಸ್ಥಾವರಗಳ ಸುರಕ್ಷತೆಯ ಪ್ರಶ್ನೆಯೂ ಈ ಭೂಕಂಪದಿಂದ ಉಂಟಾಗಿದ್ದು, ಈ ಕುರಿತು ತಜ್ಞ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. 2011ರಲ್ಲಿ ಸುನಾಮಿ ಹೊಡೆತದಿಂದ ಪುಕುಶಿಮಾ ಅಣು ಸ್ಥಾವರಕ್ಕೆ ಧಕ್ಕೆ ಬಂದಿತ್ತು ಎಂದು ಸ್ಮರಿಸಬಹುದು.

ಇದನ್ನೂ ಓದಿ: ಎರಡೇ ನಿಮಿಷ ಮೊದಲು ಕಚೇರಿಯಿಂದ ಹೊರಟರೂ ಜಪಾನ್​ ಸರ್ಕಾರ ನೀಡೋ ಶಿಕ್ಷೆ ಏನು ಗೊತ್ತಾ?

Japan Earthquake: ಜಪಾನ್​ನಲ್ಲಿ 7.1 ತೀವ್ರತೆಯ ಭೂಕಂಪ: ಸುನಾಮಿ ಮುನ್ಸೂಚನೆ ಇಲ್ಲ ಎಂದ ಅಧಿಕಾರಿಗಳು

Published On - 6:34 pm, Sat, 20 March 21

Follow Us
ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ
ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!