AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈಶಾನ್ಯ ಜಪಾನ್​ನಲ್ಲಿ ಭೂಕಂಪ; ಸುನಾಮಿ ಏಳುವ ಸಾಧ್ಯತೆ

Japan Earthquake: ಮಿಯಾಮಿ ಪ್ರದೇಶದ ಸಾಗರದ ಆಳದಲ್ಲಿ ಈ ಭೂಕಂಪ ಸಂಭವಿಸಿದೆ. ಭೂಕಂಪನದಿಂದ ಯಾವುದೇ ಸಾವು ನೋವು ಅಥವಾ ಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ಸುನಾಮಿ ಏಳುವ ಮುನ್ಸೂಚನೆ ಇದೆ ಎಂದು ವರದಿಯಾಗಿದೆ.

ಈಶಾನ್ಯ ಜಪಾನ್​ನಲ್ಲಿ ಭೂಕಂಪ; ಸುನಾಮಿ ಏಳುವ ಸಾಧ್ಯತೆ
ಸಾಂದರ್ಭಿಕ ಚಿತ್ರ
guruganesh bhat
|

Updated on:Mar 20, 2021 | 6:43 PM

Share

ಟೋಕಿಯೋ: ಜಪಾನ್​ನ ಈಶಾನ್ಯ ಕರಾವಳಿಯಲ್ಲಿ ಶನಿವಾರ ಪ್ರಬಲ ಭೂಕಂಪವಾಗಿದ್ದು ರಿಕ್ಟರ್ ಮಾಪಕದಲ್ಲಿ 7 ರಷ್ಟು ತೀವ್ರತೆ ದಾಖಲಾಗಿದೆ ಎಂದು ಯುಎಸ್ ಜಿಯೋಲಾಜಿಕಲ್ ಸರ್ವೆ ವರದಿ ಮಾಡಿದೆ. ಜಪಾನ್​​ನ ಈಶಾನ್ಯ ಕಡಲತೀರದಲ್ಲಿ ಸಂಭವಿಸಿರುವ ಈ ಭೂಕಂಪದಿಂದ ಜಪಾನ್​ಗೆ ಸುನಾಮಿ ಭೀತಿ ಎದುರಾಗುವ ಸಾಧ್ಯತೆ ಇದೆ ಎಂದು ಅಲ್ಲಿನ ಹವಾಮಾನ ಇಲಾಖೆ ತಿಳಿಸಿದೆ.

ಮಿಯಾಮಿ ಪ್ರದೇಶದ ಸಾಗರದ ಆಳದಲ್ಲಿ ಈ ಭೂಕಂಪ ಸಂಭವಿಸಿದೆ. ಭೂಕಂಪನದಿಂದ ಯಾವುದೇ ಸಾವು ನೋವು ಅಥವಾ ಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ಸುನಾಮಿ ಏಳುವ ಮುನ್ಸೂಚನೆ ಇದೆ ಎಂದು ವರದಿಯಾಗಿದೆ. ಹೀಗಾಗಿ ಜಪಾನ್​ನಾದ್ಯಂತ ಭಾರಿ ಮುಂಜಾಗರೂಕತೆ ವಹಿಸಲಾಗಿದೆ.

ರಿಕ್ಟರ್ ಮಾಪಕದಲ್ಲಿ 7ರಷ್ಟು ತೀವ್ರತೆ ದಾಖಲಾಗಿರುವುದರಿಂದ ರೈಲ್ವೆ ಇಲಾಖೆಯು ರೈಲು ಸಂಚಾರವನ್ನು ಸ್ಥಗಿತಗೊಳಿಸಿದೆ. ಅಲ್ಲದೇ ಈಶಾನ್ಯ ಜಪಾನ್​ನ ಅಣು ಸ್ಥಾವರಗಳ ಸುರಕ್ಷತೆಯ ಪ್ರಶ್ನೆಯೂ ಈ ಭೂಕಂಪದಿಂದ ಉಂಟಾಗಿದ್ದು, ಈ ಕುರಿತು ತಜ್ಞ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. 2011ರಲ್ಲಿ ಸುನಾಮಿ ಹೊಡೆತದಿಂದ ಪುಕುಶಿಮಾ ಅಣು ಸ್ಥಾವರಕ್ಕೆ ಧಕ್ಕೆ ಬಂದಿತ್ತು ಎಂದು ಸ್ಮರಿಸಬಹುದು.

ಇದನ್ನೂ ಓದಿ: ಎರಡೇ ನಿಮಿಷ ಮೊದಲು ಕಚೇರಿಯಿಂದ ಹೊರಟರೂ ಜಪಾನ್​ ಸರ್ಕಾರ ನೀಡೋ ಶಿಕ್ಷೆ ಏನು ಗೊತ್ತಾ?

Japan Earthquake: ಜಪಾನ್​ನಲ್ಲಿ 7.1 ತೀವ್ರತೆಯ ಭೂಕಂಪ: ಸುನಾಮಿ ಮುನ್ಸೂಚನೆ ಇಲ್ಲ ಎಂದ ಅಧಿಕಾರಿಗಳು

Published On - 6:34 pm, Sat, 20 March 21

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ