AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈಶಾನ್ಯ ಜಪಾನ್​ನಲ್ಲಿ ಭೂಕಂಪ; ಸುನಾಮಿ ಏಳುವ ಸಾಧ್ಯತೆ

Japan Earthquake: ಮಿಯಾಮಿ ಪ್ರದೇಶದ ಸಾಗರದ ಆಳದಲ್ಲಿ ಈ ಭೂಕಂಪ ಸಂಭವಿಸಿದೆ. ಭೂಕಂಪನದಿಂದ ಯಾವುದೇ ಸಾವು ನೋವು ಅಥವಾ ಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ಸುನಾಮಿ ಏಳುವ ಮುನ್ಸೂಚನೆ ಇದೆ ಎಂದು ವರದಿಯಾಗಿದೆ.

ಈಶಾನ್ಯ ಜಪಾನ್​ನಲ್ಲಿ ಭೂಕಂಪ; ಸುನಾಮಿ ಏಳುವ ಸಾಧ್ಯತೆ
ಸಾಂದರ್ಭಿಕ ಚಿತ್ರ
guruganesh bhat
|

Updated on:Mar 20, 2021 | 6:43 PM

Share

ಟೋಕಿಯೋ: ಜಪಾನ್​ನ ಈಶಾನ್ಯ ಕರಾವಳಿಯಲ್ಲಿ ಶನಿವಾರ ಪ್ರಬಲ ಭೂಕಂಪವಾಗಿದ್ದು ರಿಕ್ಟರ್ ಮಾಪಕದಲ್ಲಿ 7 ರಷ್ಟು ತೀವ್ರತೆ ದಾಖಲಾಗಿದೆ ಎಂದು ಯುಎಸ್ ಜಿಯೋಲಾಜಿಕಲ್ ಸರ್ವೆ ವರದಿ ಮಾಡಿದೆ. ಜಪಾನ್​​ನ ಈಶಾನ್ಯ ಕಡಲತೀರದಲ್ಲಿ ಸಂಭವಿಸಿರುವ ಈ ಭೂಕಂಪದಿಂದ ಜಪಾನ್​ಗೆ ಸುನಾಮಿ ಭೀತಿ ಎದುರಾಗುವ ಸಾಧ್ಯತೆ ಇದೆ ಎಂದು ಅಲ್ಲಿನ ಹವಾಮಾನ ಇಲಾಖೆ ತಿಳಿಸಿದೆ.

ಮಿಯಾಮಿ ಪ್ರದೇಶದ ಸಾಗರದ ಆಳದಲ್ಲಿ ಈ ಭೂಕಂಪ ಸಂಭವಿಸಿದೆ. ಭೂಕಂಪನದಿಂದ ಯಾವುದೇ ಸಾವು ನೋವು ಅಥವಾ ಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ಸುನಾಮಿ ಏಳುವ ಮುನ್ಸೂಚನೆ ಇದೆ ಎಂದು ವರದಿಯಾಗಿದೆ. ಹೀಗಾಗಿ ಜಪಾನ್​ನಾದ್ಯಂತ ಭಾರಿ ಮುಂಜಾಗರೂಕತೆ ವಹಿಸಲಾಗಿದೆ.

ರಿಕ್ಟರ್ ಮಾಪಕದಲ್ಲಿ 7ರಷ್ಟು ತೀವ್ರತೆ ದಾಖಲಾಗಿರುವುದರಿಂದ ರೈಲ್ವೆ ಇಲಾಖೆಯು ರೈಲು ಸಂಚಾರವನ್ನು ಸ್ಥಗಿತಗೊಳಿಸಿದೆ. ಅಲ್ಲದೇ ಈಶಾನ್ಯ ಜಪಾನ್​ನ ಅಣು ಸ್ಥಾವರಗಳ ಸುರಕ್ಷತೆಯ ಪ್ರಶ್ನೆಯೂ ಈ ಭೂಕಂಪದಿಂದ ಉಂಟಾಗಿದ್ದು, ಈ ಕುರಿತು ತಜ್ಞ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. 2011ರಲ್ಲಿ ಸುನಾಮಿ ಹೊಡೆತದಿಂದ ಪುಕುಶಿಮಾ ಅಣು ಸ್ಥಾವರಕ್ಕೆ ಧಕ್ಕೆ ಬಂದಿತ್ತು ಎಂದು ಸ್ಮರಿಸಬಹುದು.

ಇದನ್ನೂ ಓದಿ: ಎರಡೇ ನಿಮಿಷ ಮೊದಲು ಕಚೇರಿಯಿಂದ ಹೊರಟರೂ ಜಪಾನ್​ ಸರ್ಕಾರ ನೀಡೋ ಶಿಕ್ಷೆ ಏನು ಗೊತ್ತಾ?

Japan Earthquake: ಜಪಾನ್​ನಲ್ಲಿ 7.1 ತೀವ್ರತೆಯ ಭೂಕಂಪ: ಸುನಾಮಿ ಮುನ್ಸೂಚನೆ ಇಲ್ಲ ಎಂದ ಅಧಿಕಾರಿಗಳು

Published On - 6:34 pm, Sat, 20 March 21

Follow Us
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್