AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈಶಾನ್ಯ ಜಪಾನ್​ನಲ್ಲಿ ಭೂಕಂಪ; ಸುನಾಮಿ ಏಳುವ ಸಾಧ್ಯತೆ

Japan Earthquake: ಮಿಯಾಮಿ ಪ್ರದೇಶದ ಸಾಗರದ ಆಳದಲ್ಲಿ ಈ ಭೂಕಂಪ ಸಂಭವಿಸಿದೆ. ಭೂಕಂಪನದಿಂದ ಯಾವುದೇ ಸಾವು ನೋವು ಅಥವಾ ಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ಸುನಾಮಿ ಏಳುವ ಮುನ್ಸೂಚನೆ ಇದೆ ಎಂದು ವರದಿಯಾಗಿದೆ.

ಈಶಾನ್ಯ ಜಪಾನ್​ನಲ್ಲಿ ಭೂಕಂಪ; ಸುನಾಮಿ ಏಳುವ ಸಾಧ್ಯತೆ
ಸಾಂದರ್ಭಿಕ ಚಿತ್ರ
guruganesh bhat
|

Updated on:Mar 20, 2021 | 6:43 PM

Share

ಟೋಕಿಯೋ: ಜಪಾನ್​ನ ಈಶಾನ್ಯ ಕರಾವಳಿಯಲ್ಲಿ ಶನಿವಾರ ಪ್ರಬಲ ಭೂಕಂಪವಾಗಿದ್ದು ರಿಕ್ಟರ್ ಮಾಪಕದಲ್ಲಿ 7 ರಷ್ಟು ತೀವ್ರತೆ ದಾಖಲಾಗಿದೆ ಎಂದು ಯುಎಸ್ ಜಿಯೋಲಾಜಿಕಲ್ ಸರ್ವೆ ವರದಿ ಮಾಡಿದೆ. ಜಪಾನ್​​ನ ಈಶಾನ್ಯ ಕಡಲತೀರದಲ್ಲಿ ಸಂಭವಿಸಿರುವ ಈ ಭೂಕಂಪದಿಂದ ಜಪಾನ್​ಗೆ ಸುನಾಮಿ ಭೀತಿ ಎದುರಾಗುವ ಸಾಧ್ಯತೆ ಇದೆ ಎಂದು ಅಲ್ಲಿನ ಹವಾಮಾನ ಇಲಾಖೆ ತಿಳಿಸಿದೆ.

ಮಿಯಾಮಿ ಪ್ರದೇಶದ ಸಾಗರದ ಆಳದಲ್ಲಿ ಈ ಭೂಕಂಪ ಸಂಭವಿಸಿದೆ. ಭೂಕಂಪನದಿಂದ ಯಾವುದೇ ಸಾವು ನೋವು ಅಥವಾ ಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ಸುನಾಮಿ ಏಳುವ ಮುನ್ಸೂಚನೆ ಇದೆ ಎಂದು ವರದಿಯಾಗಿದೆ. ಹೀಗಾಗಿ ಜಪಾನ್​ನಾದ್ಯಂತ ಭಾರಿ ಮುಂಜಾಗರೂಕತೆ ವಹಿಸಲಾಗಿದೆ.

ರಿಕ್ಟರ್ ಮಾಪಕದಲ್ಲಿ 7ರಷ್ಟು ತೀವ್ರತೆ ದಾಖಲಾಗಿರುವುದರಿಂದ ರೈಲ್ವೆ ಇಲಾಖೆಯು ರೈಲು ಸಂಚಾರವನ್ನು ಸ್ಥಗಿತಗೊಳಿಸಿದೆ. ಅಲ್ಲದೇ ಈಶಾನ್ಯ ಜಪಾನ್​ನ ಅಣು ಸ್ಥಾವರಗಳ ಸುರಕ್ಷತೆಯ ಪ್ರಶ್ನೆಯೂ ಈ ಭೂಕಂಪದಿಂದ ಉಂಟಾಗಿದ್ದು, ಈ ಕುರಿತು ತಜ್ಞ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. 2011ರಲ್ಲಿ ಸುನಾಮಿ ಹೊಡೆತದಿಂದ ಪುಕುಶಿಮಾ ಅಣು ಸ್ಥಾವರಕ್ಕೆ ಧಕ್ಕೆ ಬಂದಿತ್ತು ಎಂದು ಸ್ಮರಿಸಬಹುದು.

ಇದನ್ನೂ ಓದಿ: ಎರಡೇ ನಿಮಿಷ ಮೊದಲು ಕಚೇರಿಯಿಂದ ಹೊರಟರೂ ಜಪಾನ್​ ಸರ್ಕಾರ ನೀಡೋ ಶಿಕ್ಷೆ ಏನು ಗೊತ್ತಾ?

Japan Earthquake: ಜಪಾನ್​ನಲ್ಲಿ 7.1 ತೀವ್ರತೆಯ ಭೂಕಂಪ: ಸುನಾಮಿ ಮುನ್ಸೂಚನೆ ಇಲ್ಲ ಎಂದ ಅಧಿಕಾರಿಗಳು

Published On - 6:34 pm, Sat, 20 March 21

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?