AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈಶಾನ್ಯ ಜಪಾನ್​ನಲ್ಲಿ ಭೂಕಂಪ; ಸುನಾಮಿ ಏಳುವ ಸಾಧ್ಯತೆ

Japan Earthquake: ಮಿಯಾಮಿ ಪ್ರದೇಶದ ಸಾಗರದ ಆಳದಲ್ಲಿ ಈ ಭೂಕಂಪ ಸಂಭವಿಸಿದೆ. ಭೂಕಂಪನದಿಂದ ಯಾವುದೇ ಸಾವು ನೋವು ಅಥವಾ ಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ಸುನಾಮಿ ಏಳುವ ಮುನ್ಸೂಚನೆ ಇದೆ ಎಂದು ವರದಿಯಾಗಿದೆ.

ಈಶಾನ್ಯ ಜಪಾನ್​ನಲ್ಲಿ ಭೂಕಂಪ; ಸುನಾಮಿ ಏಳುವ ಸಾಧ್ಯತೆ
ಸಾಂದರ್ಭಿಕ ಚಿತ್ರ
guruganesh bhat
|

Updated on:Mar 20, 2021 | 6:43 PM

Share

ಟೋಕಿಯೋ: ಜಪಾನ್​ನ ಈಶಾನ್ಯ ಕರಾವಳಿಯಲ್ಲಿ ಶನಿವಾರ ಪ್ರಬಲ ಭೂಕಂಪವಾಗಿದ್ದು ರಿಕ್ಟರ್ ಮಾಪಕದಲ್ಲಿ 7 ರಷ್ಟು ತೀವ್ರತೆ ದಾಖಲಾಗಿದೆ ಎಂದು ಯುಎಸ್ ಜಿಯೋಲಾಜಿಕಲ್ ಸರ್ವೆ ವರದಿ ಮಾಡಿದೆ. ಜಪಾನ್​​ನ ಈಶಾನ್ಯ ಕಡಲತೀರದಲ್ಲಿ ಸಂಭವಿಸಿರುವ ಈ ಭೂಕಂಪದಿಂದ ಜಪಾನ್​ಗೆ ಸುನಾಮಿ ಭೀತಿ ಎದುರಾಗುವ ಸಾಧ್ಯತೆ ಇದೆ ಎಂದು ಅಲ್ಲಿನ ಹವಾಮಾನ ಇಲಾಖೆ ತಿಳಿಸಿದೆ.

ಮಿಯಾಮಿ ಪ್ರದೇಶದ ಸಾಗರದ ಆಳದಲ್ಲಿ ಈ ಭೂಕಂಪ ಸಂಭವಿಸಿದೆ. ಭೂಕಂಪನದಿಂದ ಯಾವುದೇ ಸಾವು ನೋವು ಅಥವಾ ಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ಸುನಾಮಿ ಏಳುವ ಮುನ್ಸೂಚನೆ ಇದೆ ಎಂದು ವರದಿಯಾಗಿದೆ. ಹೀಗಾಗಿ ಜಪಾನ್​ನಾದ್ಯಂತ ಭಾರಿ ಮುಂಜಾಗರೂಕತೆ ವಹಿಸಲಾಗಿದೆ.

ರಿಕ್ಟರ್ ಮಾಪಕದಲ್ಲಿ 7ರಷ್ಟು ತೀವ್ರತೆ ದಾಖಲಾಗಿರುವುದರಿಂದ ರೈಲ್ವೆ ಇಲಾಖೆಯು ರೈಲು ಸಂಚಾರವನ್ನು ಸ್ಥಗಿತಗೊಳಿಸಿದೆ. ಅಲ್ಲದೇ ಈಶಾನ್ಯ ಜಪಾನ್​ನ ಅಣು ಸ್ಥಾವರಗಳ ಸುರಕ್ಷತೆಯ ಪ್ರಶ್ನೆಯೂ ಈ ಭೂಕಂಪದಿಂದ ಉಂಟಾಗಿದ್ದು, ಈ ಕುರಿತು ತಜ್ಞ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. 2011ರಲ್ಲಿ ಸುನಾಮಿ ಹೊಡೆತದಿಂದ ಪುಕುಶಿಮಾ ಅಣು ಸ್ಥಾವರಕ್ಕೆ ಧಕ್ಕೆ ಬಂದಿತ್ತು ಎಂದು ಸ್ಮರಿಸಬಹುದು.

ಇದನ್ನೂ ಓದಿ: ಎರಡೇ ನಿಮಿಷ ಮೊದಲು ಕಚೇರಿಯಿಂದ ಹೊರಟರೂ ಜಪಾನ್​ ಸರ್ಕಾರ ನೀಡೋ ಶಿಕ್ಷೆ ಏನು ಗೊತ್ತಾ?

Japan Earthquake: ಜಪಾನ್​ನಲ್ಲಿ 7.1 ತೀವ್ರತೆಯ ಭೂಕಂಪ: ಸುನಾಮಿ ಮುನ್ಸೂಚನೆ ಇಲ್ಲ ಎಂದ ಅಧಿಕಾರಿಗಳು

Published On - 6:34 pm, Sat, 20 March 21

Follow Us
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!