AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾದೇವ ಬೆಟ್ಟಿಂಗ್ ಆ್ಯಪ್ ಹಗರಣ, 2023ರಲ್ಲಿ ಬಂಧಿಸಲಾಗಿದ್ದ ಆರೋಪಿ ನಾಪತ್ತೆ, ಹಸ್ತಾಂತರಕ್ಕೆ ತಡೆ

ಮಹಾದೇವ ಬೆಟ್ಟಿಂಗ್ ಆ್ಯಪ್(Mahadev Betting App) ಪ್ರಕರಣದ ಪ್ರಮುಖ ಆರೋಪಿ ರವಿ ಉಪ್ಪಲ್ ನಾಪತ್ತೆಯಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. 2023ರಲ್ಲಿ ದುಬೈನಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿತ್ತು. ಶೀಘ್ರವೇ ಭಾರತಕ್ಕೆ ಹಸ್ತಾಂತರಿಸಲಾಗುವುದು ಎಂದು ಹೇಳಲಾಗಿತ್ತು. ಇಂಟರ್‌ಪೋಲ್ ಹೊರಡಿಸಿದ ರೆಡ್ ಕಾರ್ನರ್ ನೋಟಿಸ್‌ನ ಹಿನ್ನೆಲೆಯಲ್ಲಿ ಉಪ್ಪಲ್‌ನನ್ನು ಬಂಧಿಸಲಾಗಿತ್ತು.45 ದಿನಗಳ ನಂತರ ಅವರನ್ನು ಬಿಡುಗಡೆ ಮಾಡಲಾಯಿತು ಆದರೆ ಹಸ್ತಾಂತರ ಪ್ರಕ್ರಿಯೆಗಳು ಬಾಕಿ ಇರುವುದರಿಂದ ಕಣ್ಗಾವಲಿನಲ್ಲಿಯೇ ಇದ್ದರು.

ಮಹಾದೇವ ಬೆಟ್ಟಿಂಗ್ ಆ್ಯಪ್ ಹಗರಣ, 2023ರಲ್ಲಿ ಬಂಧಿಸಲಾಗಿದ್ದ ಆರೋಪಿ ನಾಪತ್ತೆ, ಹಸ್ತಾಂತರಕ್ಕೆ ತಡೆ
ಉಪ್ಪಾಲ್
ನಯನಾ ರಾಜೀವ್
|

Updated on: Nov 04, 2025 | 2:58 PM

Share

ದುಬೈ, ನವೆಂಬರ್ 04: ಮಹಾದೇವ ಬೆಟ್ಟಿಂಗ್ ಆ್ಯಪ್(Mahadev Betting App) ಪ್ರಕರಣದ ಪ್ರಮುಖ ಆರೋಪಿ ರವಿ ಉಪ್ಪಲ್ ನಾಪತ್ತೆಯಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. 2023ರಲ್ಲಿ ದುಬೈನಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿತ್ತು. ಶೀಘ್ರವೇ ಭಾರತಕ್ಕೆ ಹಸ್ತಾಂತರಿಸಲಾಗುವುದು ಎಂದು ಹೇಳಲಾಗಿತ್ತು. ಇಂಟರ್‌ಪೋಲ್ ಹೊರಡಿಸಿದ ರೆಡ್ ಕಾರ್ನರ್ ನೋಟಿಸ್‌ನ ಹಿನ್ನೆಲೆಯಲ್ಲಿ ಉಪ್ಪಲ್‌ನನ್ನು ಬಂಧಿಸಲಾಗಿತ್ತು.45 ದಿನಗಳ ನಂತರ ಅವರನ್ನು ಬಿಡುಗಡೆ ಮಾಡಲಾಯಿತು ಆದರೆ ಹಸ್ತಾಂತರ ಪ್ರಕ್ರಿಯೆಗಳು ಬಾಕಿ ಇರುವುದರಿಂದ ಕಣ್ಗಾವಲಿನಲ್ಲಿಯೇ ಇದ್ದರು.

ರವಿ ಭಾರತದ ಅಧಿಕಾರಿಗಳ ವಶದಲ್ಲಿಲ್ಲ, ಜತೆಗೆ ಕಾಣೆಯಾಗಿರುವ ಕಾರಣ ಹಸ್ತಾಂತರ ಪ್ರಕ್ರಿಯೆಗೆ ತಡೆ ಬಿದ್ದಿದೆ. ಉಪ್ಪಲ್ ಯುನೈಟೆಡ್ ಅರಬ್ ಎಮಿರೇಟ್ಸ್‌ನಿಂದ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ ಎಂದು ಮೂಲಗಳು ಹೇಳುತ್ತಿವೆ. ಹಸ್ತಾಂತರ ಪ್ರಕ್ರಿಯೆಯನ್ನು ಸ್ಥಗಿತಗೊಳಿಸುವ ಪ್ರಸ್ತಾಪವನ್ನು ಹೊರತುಪಡಿಸಿ, ಅವರ ಸ್ಥಳ ಅಥವಾ ಗಮ್ಯಸ್ಥಾನದ ಕುರಿತು ಯಾವುದೇ ಗುಪ್ತಚರ ಮಾಹಿತಿ ನೀಡಲಾಗಿಲ್ಲ ಎಂದು ಮೂಲಗಳು ತಿಳಿಸಿವೆ.

ಕೆಲವು ದಾಖಲೆಗಳು ಸಮಯಕ್ಕೆ ಸರಿಯಾಗಿ ತಲುಪದ ಕಾರಣ ಉಪ್ಪಲ್ ಅವರನ್ನು ಮರಳಿ ತರುವ ವಿನಂತಿಯನ್ನು ಯುಎಇ (ಅನಧಿಕೃತವಾಗಿ) ತಿರಸ್ಕರಿಸಿದೆ ಎನ್ನಲಾಗಿದೆ.ಜಾರಿ ನಿರ್ದೇಶನಾಲಯದ ಮೂಲಗಳು ಅಗತ್ಯವಿರುವ ಎಲ್ಲಾ ದಾಖಲೆಗಳನ್ನು ಸಮಯಕ್ಕೆ ಸರಿಯಾಗಿ ಸಲ್ಲಿಸಲಾಗಿದೆ ಎಂದು ಹೇಳಿವೆ. ಸಹಚರ ಸೌರಭ್ ಚಂದ್ರಕರ್ ಅವರನ್ನು ತನಿಖೆ ನಡೆಸುತ್ತಿದ್ದಾರೆ. ಸೌರಭ್ ಚಂದ್ರಕರ್ ಇನ್ನೂ ದುಬೈ ಅಧಿಕಾರಿಗಳ ವಶದಲ್ಲಿದ್ದಾರೆ.

ಚಂದ್ರಕರ್ ಅವರನ್ನು ಡಿಸೆಂಬರ್ 2024 ರಲ್ಲಿ ಬಂಧಿಸಿ ಗೃಹಬಂಧನದಲ್ಲಿ ಇರಿಸಲಾಯಿತು. ಉಪ್ಪಲ್‌ನಂತೆ, ಭಾರತವು ಅವರ ಹಸ್ತಾಂತರಕ್ಕೂ ಮನವಿ ಮಾಡಿತ್ತು, ಆದರೆ ಅಂದಿನಿಂದ ಯಾವುದೇ ಪ್ರಗತಿ ಕಂಡುಬಂದಿಲ್ಲ ಎಂದು ಮೂಲಗಳು ತಿಳಿಸಿವೆ. 2018 ರಲ್ಲಿ ಸ್ಥಾಪನೆಯಾದ ಮಹಾದೇವ್ ಅಪ್ಲಿಕೇಶನ್ ದಿನಕ್ಕೆ 200 ಕೋಟಿ ರೂ. ಲಾಭ ಗಳಿಸಿದೆ ಎಂದು ವರದಿಯಾಗಿದೆ.

ಮಹದೇವ್ ಗೇಮಿಂಗ್ ಅಪ್ಲಿಕೇಶನ್ ಆನ್‌ಲೈನ್ ಬೆಟ್ಟಿಂಗ್ ಪ್ಲಾಟ್‌ಫಾರ್ಮ್ ಆಗಿದ್ದು ಅದು ಬಳಕೆದಾರರಿಗೆ ಪೋಕರ್, ಕಾರ್ಡ್ ಆಟಗಳು, ಅವಕಾಶ ಆಟಗಳು, ಬ್ಯಾಡ್ಮಿಂಟನ್, ಟೆನ್ನಿಸ್, ಫುಟ್‌ಬಾಲ್ ಮತ್ತು ಕ್ರಿಕೆಟ್‌ನಂತಹ ವಿವಿಧ ಲೈವ್ ಆಟಗಳಲ್ಲಿ ಜೂಜಾಡಲು ಅನುವು ಮಾಡಿಕೊಡುತ್ತದೆ. ಈ ಆ್ಯಪ್‌ನಲ್ಲಿ ಬಳಕೆದಾರರಿಗೆ ಏನಿಲ್ಲ ಎಂದು ಊಹಿಸಲು ಸಾಧ್ಯವೇ ಇಲ್ಲ, ಅಷ್ಟರ ಮಟ್ಟಿಗೆ ಹಣ ಸುರಿಯಲು ಮತ್ತು ಕಳೆದುಕೊಳ್ಳುವಂತಹ ಆಟಗಳಿವೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು