AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇತ್ತೀಚೆಗೆ ಕಂಡು ಕೇಳರಿಯದ ಭಾರೀ ಭಯೋತ್ಪಾದನೆ, ಹತ್ತಾರು ಬಾಂಬು ಸ್ಪೋಟ, ನೂರಾರು ಮಂದಿ ಸಾವು

Moscow Terror attack: ರಷ್ಯಾದ ರಾಜಧಾನಿ ಮಾಸ್ಕೋದಲ್ಲಿ ಭಾರೀ ಭಯೋತ್ಪಾದಕ ದಾಳಿ (Moscow Terror attack) ನಡೆದಿದೆ. ಐವರು ಭಯೋತ್ಪಾದಕರು ಸಂಗೀತ ಕಾರ್ಯಕ್ರಮ ನಡೆಯುತ್ತಿದ್ದ ಸಭಾಂಗಣಕ್ಕೆ (Concert hall) ನುಗ್ಗಿ ಮನಸೋಇಚ್ಛೆ ಗುಂಡಿನ ದಾಳಿ ನಡೆಸಿದ್ದಾರೆ. ಇತ್ತೀಚೆಗೆ ಕಂಡು ಕೇಳರಿಯದ ಭಾರೀ ಭಯೋತ್ಪಾದನೆ ಇದಾಗಿದ್ದು, ಹತ್ತಾರು ಬಾಂಬುಗಳು ಸ್ಪೋಟಗೊಂಡಿವೆ. ರಷ್ಯಾ ಇದನ್ನು ಭಯೋತ್ಪಾದಕ ಕೃತ್ಯ ಎಂದು ಸಾರಿದೆ.

ಇತ್ತೀಚೆಗೆ ಕಂಡು ಕೇಳರಿಯದ ಭಾರೀ ಭಯೋತ್ಪಾದನೆ, ಹತ್ತಾರು ಬಾಂಬು ಸ್ಪೋಟ, ನೂರಾರು ಮಂದಿ ಸಾವು
ಇತ್ತೀಚೆಗೆ ಕಂಡು ಕೇಳರಿಯದ ಭಾರೀ ಭಯೋತ್ಪಾದನೆ, ನೂರಾರು ಮಂದಿ ಸಾವು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Mar 23, 2024 | 6:15 AM

Share

ಮಾಸ್ಕೋ, ಮಾರ್ಚ್​​ 23: ಭಾರತ ಸೇರಿದಂತೆ ಇಡೀ ಜಗತ್ತಿನಾದ್ಯಂತ ಇತ್ತೀಚೆಗೆ ಭಯೋತ್ಪಾದಕರ ಆಟಾಟೋಪಕ್ಕೆ ಕಡಿವಾಣ ಬಿದ್ದಿತ್ತು. ಆದರೆ ಭೀಕರ ಘಟನೆಯಲ್ಲಿ ರಷ್ಯಾದಲ್ಲಿ ಭಯೋತ್ಪಾದನೆ ನಡೆದಿದ್ದು, ಇಡೀ ಜಗತ್ತು ತಲ್ಲಣಗೊಂಡಿದೆ.  ರಷ್ಯಾದ ರಾಜಧಾನಿ ಮಾಸ್ಕೋದಲ್ಲಿ ಭಾರೀ ಭಯೋತ್ಪಾದಕ ದಾಳಿ (Moscow Terror attack) ನಡೆದಿದೆ. ಐವರು ಭಯೋತ್ಪಾದಕರು ಸಂಗೀತ ಕಾರ್ಯಕ್ರಮ ನಡೆಯುತ್ತಿದ್ದ ಸಭಾಂಗಣಕ್ಕೆ (Concert hall) ನುಗ್ಗಿ ಮನಸೋಇಚ್ಛೆ ಗುಂಡಿನ ದಾಳಿ ನಡೆಸಿದ್ದಾರೆ. ಗುಂಡಿನ ದಾಳಿಯಲ್ಲಿ ಭಾರೀ ಸಾವುನೋವು ಸಂಭವಿಸಿದ್ದು ಸದ್ಯಕ್ಕೆ 50 ಜನರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಸಾವಿನ ಸಂಖ್ಯೆ 100ರ ಗಡಿ ದಾಟುವ ಅಪಾಯವಿದೆ. ಕಾರ್ಯಕ್ರಮ ನಡೆಯುತ್ತಿದ್ದಾಗ ಸಭಾಂಗಣದ ಒಳಗಡೆಯಿದ್ದ ಮಹಿಳೆಯರು ಮತ್ತು ಮಕ್ಕಳು ಎನ್ನದೆ ಕಂಡಕಂಡವರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದು ಬಾಂಬುಗಳನ್ನು ಎಸೆದಿದ್ದಾರೆ.

ನಾವೇ ಮಾಡಿದ್ದು ಎಂದ ಐಸಿಸ್ ಉಗ್ರ ಸಂಘಟನೆ: ರಷ್ಯಾ ರಾಜಧಾನಿ ಮಾಸ್ಕೋದ ಕನ್ಸರ್ಟ್ ಹಾಲ್‌ನಲ್ಲಿ ನಡೆದಿರುವ ಭಯೋತ್ಪಾದಕರ ದಾಳಿಯ ಹೊಣೆಯನ್ನು ಐಸಿಸ್ ಉಗ್ರ ಸಂಘಟನೆ ಹೊತ್ತುಕೊಂಡಿದೆ. ಮಾರ್ಚ್​​ 7ರಂದು ಅಮೆರಿಕವು ಭಯೋತ್ಪಾದಕ ದಾಳಿ ಬಗ್ಗೆ ರಷ್ಯಾವನ್ನು ಎಚ್ಚರಿಸಿತ್ತು.

ಗುಂಡಿನ ದಾಳಿ ಬಳಿಕ ಕಟ್ಟಡವು ಸ್ಫೋಟದಿಂದ ಹೊತ್ತಿ ಉರಿಯುತ್ತಿದೆ. ಹೊತ್ತಿ ಉರಿಯುತ್ತಿರುವ ಕಟ್ಟಡದಲ್ಲಿ ನೂರಾರು ಜನ ಸಿಲುಕಿರುವ ಅಂದಾಜಿದೆ. ಐವರು ಭಯೋತ್ಪಾದಕರ ಪೈಕಿ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಇತ್ತೀಚೆಗೆ ಕಂಡು ಕೇಳರಿಯದ ಭಾರೀ ಭಯೋತ್ಪಾದನೆ ಇದಾಗಿದ್ದು, ಹತ್ತಾರು ಬಾಂಬುಗಳು ಸ್ಪೋಟಗೊಂಡಿವೆ. ರಷ್ಯಾ ಇದನ್ನು ಭಯೋತ್ಪಾದಕ ಕೃತ್ಯ ಎಂದು ಸಾರಿದೆ.

(ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ)

Published On - 6:00 am, Sat, 23 March 24

Follow Us
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ