AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಯಾಣಿಕರಿದ್ದ ಪಾಕ್​ ವಿಮಾನವನ್ನು ಸೀಜ್​ ಮಾಡಿದ ಮಲೇಷ್ಯಾ ಸರ್ಕಾರ, ಯಾಕೆ?

ಬೋಯಿಂಗ್​-777 ಸೇರಿ ಎರಡು ವಿಮಾನವನ್ನು ಪಿಐಎ ಮಲೇಷಿಯಾದಿಂದ ಗುತ್ತಿಗೆ ಪಡೆದಿತ್ತು. ಆದರೆ, ಗುತ್ತಿಗೆ ಹಣ ಪಾವತಿಸದೇ ಪಾಕಿಸ್ತಾನ ಸತಾಯಿಸುತ್ತಲೇ ಬಂದಿತ್ತು. ಈಗ ಸ್ಥಳೀಯ ಕೋರ್ಟ್​ ವಿಮಾನ ವಶಕ್ಕೆ ಪಡೆಯುವಂತೆ ಆದೇಶಿಸಿತ್ತು.

ಪ್ರಯಾಣಿಕರಿದ್ದ ಪಾಕ್​ ವಿಮಾನವನ್ನು ಸೀಜ್​ ಮಾಡಿದ ಮಲೇಷ್ಯಾ ಸರ್ಕಾರ, ಯಾಕೆ?
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
|

Updated on: Jan 16, 2021 | 4:33 PM

Share

ಪಾಕಿಸ್ತಾನದ ಆರ್ಥಿಕ ಪರಿಸ್ಥಿತಿ ದಿನದಿಂದ ದಿನಕ್ಕೆ ಹೀನಾಯ ಸ್ಥಿತಿ ತಲುಪುತ್ತಿದೆ. ಈ ಮೊದಲು ಚೀನಾಗೆ ಕತ್ತೆಗಳನ್ನು ಮಾರಿ ಪಾಕಿಸ್ತಾನ ದುಡ್ಡು ಸಂಪಾದಿಸಿದ ವಿಚಾರ ದೊಡ್ಡ ಮಟ್ಟದಲ್ಲಿ ಸುದ್ದಿ ಆಗಿತ್ತು. ಈಗ ಮತ್ತೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪಾಕಿಸ್ತಾನದ ಮಾನ ಹರಾಜಾಗಿದೆ. ಗುತ್ತಿಗೆ ಹಣ ಪಾವತಿ ಮಾಡದ ಪಾಕಿಸ್ತಾನ ಇಂಟರ್​ನ್ಯಾಷನಲ್​ ಏರ್​​ಲೈನ್ಸನ್​​ (ಪಿಐಎ) ವಿಮಾನ ಒಂದನ್ನು ಮಲೇಷ್ಯಾ ಅಧಿಕಾರಿಗಳು ಸೀಜ್​ ಮಾಡಿದ್ದಾರೆ. ವಿಮಾನದಲ್ಲಿ ಪ್ರಯಾಣಿಕರು ಇರುವಾಗಲೇ ಅಧಿಕಾರಿಗಳು ಸೀಜ್​ ಮಾಡಿದ್ದಾರೆ.

ಅಂದ ಹಾಗೆ, ಬೋಯಿಂಗ್​-777 ಸೇರಿ ಎರಡು ವಿಮಾನಗಳನ್ನು ಪಿಐಎ ಮಲೇಷ್ಯಾದಿಂದ ಗುತ್ತಿಗೆ ಪಡೆದಿತ್ತು. ಆದರೆ, ಗುತ್ತಿಗೆ ಹಣ ಪಾವತಿಸದೇ ಪಾಕಿಸ್ತಾನ ಸತಾಯಿಸುತ್ತಲೇ ಬಂದಿತ್ತು. ಈಗ ಸ್ಥಳೀಯ ಕೋರ್ಟ್​ ವಿಮಾನ ವಶಕ್ಕೆ ಪಡೆಯುವಂತೆ ಆದೇಶಿಸಿದ ಹಿನ್ನೆಲೆಯಲ್ಲಿ ಬೋಯಿಂಗ್​-777 ವಿಮಾನವನ್ನು ಕೌಲಾಲಂಪುರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಅಧಿಕಾರಿಗಳು ಈ ಕ್ರಮ ಕೈಗೊಂಡಿದ್ದಾರೆ.

ಇನ್ನು, ವಿಮಾನವನ್ನು ವಶಕ್ಕೆ ಪಡೆಯುವಾಗ ಪ್ರಯಾಣಿಕರು ವಿಮಾನದಲ್ಲಿ ಉಪಸ್ಥಿತರಿದ್ದರು. ಏರ್​ಲೈನ್ಸ್​ನ ಸಿಬ್ಬಂದಿ ಕೂಡ ಇದ್ದರು. ಈಗ ಮಲೇಷ್ಯಾ ಸರ್ಕಾರ ಇವರ ಪ್ರಯಾಣಕ್ಕೆ ಬೇರೆ ವ್ಯವಸ್ಥೆ ಮಾಡಿದೆ ಎನ್ನಲಾಗಿದೆ.

ಇನ್ನು, ಘಟನೆ ಕುರಿತು ಪಾಕಿಸ್ತಾನ್​ ಇಂಟರ್​ನ್ಯಾಷನಲ್​ ಏರ್​ಲೈನ್​ ಆಕ್ರೋಶ ಹೊರಹಾಕಿದೆ. ಬಾಕಿ ಮೊತ್ತ ಹಿಂದಿರುಗಿಸುವ ಪ್ರಕರಣದ ವಿಚಾರಣೆ ಇಂಗ್ಲೆಂಡ್​ ಕೋರ್ಟ್​​ನಲ್ಲಿ ನಡೆಯುತ್ತಿದೆ. ಹೀಗಿರುವಾಗಲೇ, ಮಲೇಷ್ಯಾ ಸರ್ಕಾರ ಒಮ್ಮುಖವಾಗಿ ನಿರ್ಧಾರ ತೆಗೆದುಕೊಂಡಿದೆ ಎಂದು ಆರೋಪಿಸಿದೆ.

ಸೌದಿ ಅರೇಬಿಯಾದ ಹಳೇ ಸಾಲ ತೀರಿಸಲು ಚೀನಾದಿಂದ ದೊಡ್ಡ ಮೊತ್ತದ ಹೊಸ ಸಾಲ ಪಡೆದ ಪಾಕಿಸ್ತಾನ

Follow Us
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು