AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಯಾಣಿಕರಿದ್ದ ಪಾಕ್​ ವಿಮಾನವನ್ನು ಸೀಜ್​ ಮಾಡಿದ ಮಲೇಷ್ಯಾ ಸರ್ಕಾರ, ಯಾಕೆ?

ಬೋಯಿಂಗ್​-777 ಸೇರಿ ಎರಡು ವಿಮಾನವನ್ನು ಪಿಐಎ ಮಲೇಷಿಯಾದಿಂದ ಗುತ್ತಿಗೆ ಪಡೆದಿತ್ತು. ಆದರೆ, ಗುತ್ತಿಗೆ ಹಣ ಪಾವತಿಸದೇ ಪಾಕಿಸ್ತಾನ ಸತಾಯಿಸುತ್ತಲೇ ಬಂದಿತ್ತು. ಈಗ ಸ್ಥಳೀಯ ಕೋರ್ಟ್​ ವಿಮಾನ ವಶಕ್ಕೆ ಪಡೆಯುವಂತೆ ಆದೇಶಿಸಿತ್ತು.

ಪ್ರಯಾಣಿಕರಿದ್ದ ಪಾಕ್​ ವಿಮಾನವನ್ನು ಸೀಜ್​ ಮಾಡಿದ ಮಲೇಷ್ಯಾ ಸರ್ಕಾರ, ಯಾಕೆ?
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
|

Updated on: Jan 16, 2021 | 4:33 PM

Share

ಪಾಕಿಸ್ತಾನದ ಆರ್ಥಿಕ ಪರಿಸ್ಥಿತಿ ದಿನದಿಂದ ದಿನಕ್ಕೆ ಹೀನಾಯ ಸ್ಥಿತಿ ತಲುಪುತ್ತಿದೆ. ಈ ಮೊದಲು ಚೀನಾಗೆ ಕತ್ತೆಗಳನ್ನು ಮಾರಿ ಪಾಕಿಸ್ತಾನ ದುಡ್ಡು ಸಂಪಾದಿಸಿದ ವಿಚಾರ ದೊಡ್ಡ ಮಟ್ಟದಲ್ಲಿ ಸುದ್ದಿ ಆಗಿತ್ತು. ಈಗ ಮತ್ತೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪಾಕಿಸ್ತಾನದ ಮಾನ ಹರಾಜಾಗಿದೆ. ಗುತ್ತಿಗೆ ಹಣ ಪಾವತಿ ಮಾಡದ ಪಾಕಿಸ್ತಾನ ಇಂಟರ್​ನ್ಯಾಷನಲ್​ ಏರ್​​ಲೈನ್ಸನ್​​ (ಪಿಐಎ) ವಿಮಾನ ಒಂದನ್ನು ಮಲೇಷ್ಯಾ ಅಧಿಕಾರಿಗಳು ಸೀಜ್​ ಮಾಡಿದ್ದಾರೆ. ವಿಮಾನದಲ್ಲಿ ಪ್ರಯಾಣಿಕರು ಇರುವಾಗಲೇ ಅಧಿಕಾರಿಗಳು ಸೀಜ್​ ಮಾಡಿದ್ದಾರೆ.

ಅಂದ ಹಾಗೆ, ಬೋಯಿಂಗ್​-777 ಸೇರಿ ಎರಡು ವಿಮಾನಗಳನ್ನು ಪಿಐಎ ಮಲೇಷ್ಯಾದಿಂದ ಗುತ್ತಿಗೆ ಪಡೆದಿತ್ತು. ಆದರೆ, ಗುತ್ತಿಗೆ ಹಣ ಪಾವತಿಸದೇ ಪಾಕಿಸ್ತಾನ ಸತಾಯಿಸುತ್ತಲೇ ಬಂದಿತ್ತು. ಈಗ ಸ್ಥಳೀಯ ಕೋರ್ಟ್​ ವಿಮಾನ ವಶಕ್ಕೆ ಪಡೆಯುವಂತೆ ಆದೇಶಿಸಿದ ಹಿನ್ನೆಲೆಯಲ್ಲಿ ಬೋಯಿಂಗ್​-777 ವಿಮಾನವನ್ನು ಕೌಲಾಲಂಪುರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಅಧಿಕಾರಿಗಳು ಈ ಕ್ರಮ ಕೈಗೊಂಡಿದ್ದಾರೆ.

ಇನ್ನು, ವಿಮಾನವನ್ನು ವಶಕ್ಕೆ ಪಡೆಯುವಾಗ ಪ್ರಯಾಣಿಕರು ವಿಮಾನದಲ್ಲಿ ಉಪಸ್ಥಿತರಿದ್ದರು. ಏರ್​ಲೈನ್ಸ್​ನ ಸಿಬ್ಬಂದಿ ಕೂಡ ಇದ್ದರು. ಈಗ ಮಲೇಷ್ಯಾ ಸರ್ಕಾರ ಇವರ ಪ್ರಯಾಣಕ್ಕೆ ಬೇರೆ ವ್ಯವಸ್ಥೆ ಮಾಡಿದೆ ಎನ್ನಲಾಗಿದೆ.

ಇನ್ನು, ಘಟನೆ ಕುರಿತು ಪಾಕಿಸ್ತಾನ್​ ಇಂಟರ್​ನ್ಯಾಷನಲ್​ ಏರ್​ಲೈನ್​ ಆಕ್ರೋಶ ಹೊರಹಾಕಿದೆ. ಬಾಕಿ ಮೊತ್ತ ಹಿಂದಿರುಗಿಸುವ ಪ್ರಕರಣದ ವಿಚಾರಣೆ ಇಂಗ್ಲೆಂಡ್​ ಕೋರ್ಟ್​​ನಲ್ಲಿ ನಡೆಯುತ್ತಿದೆ. ಹೀಗಿರುವಾಗಲೇ, ಮಲೇಷ್ಯಾ ಸರ್ಕಾರ ಒಮ್ಮುಖವಾಗಿ ನಿರ್ಧಾರ ತೆಗೆದುಕೊಂಡಿದೆ ಎಂದು ಆರೋಪಿಸಿದೆ.

ಸೌದಿ ಅರೇಬಿಯಾದ ಹಳೇ ಸಾಲ ತೀರಿಸಲು ಚೀನಾದಿಂದ ದೊಡ್ಡ ಮೊತ್ತದ ಹೊಸ ಸಾಲ ಪಡೆದ ಪಾಕಿಸ್ತಾನ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ