Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಯಾಣಿಕರಿದ್ದ ಪಾಕ್​ ವಿಮಾನವನ್ನು ಸೀಜ್​ ಮಾಡಿದ ಮಲೇಷ್ಯಾ ಸರ್ಕಾರ, ಯಾಕೆ?

ಬೋಯಿಂಗ್​-777 ಸೇರಿ ಎರಡು ವಿಮಾನವನ್ನು ಪಿಐಎ ಮಲೇಷಿಯಾದಿಂದ ಗುತ್ತಿಗೆ ಪಡೆದಿತ್ತು. ಆದರೆ, ಗುತ್ತಿಗೆ ಹಣ ಪಾವತಿಸದೇ ಪಾಕಿಸ್ತಾನ ಸತಾಯಿಸುತ್ತಲೇ ಬಂದಿತ್ತು. ಈಗ ಸ್ಥಳೀಯ ಕೋರ್ಟ್​ ವಿಮಾನ ವಶಕ್ಕೆ ಪಡೆಯುವಂತೆ ಆದೇಶಿಸಿತ್ತು.

ಪ್ರಯಾಣಿಕರಿದ್ದ ಪಾಕ್​ ವಿಮಾನವನ್ನು ಸೀಜ್​ ಮಾಡಿದ ಮಲೇಷ್ಯಾ ಸರ್ಕಾರ, ಯಾಕೆ?
ಸಾಂದರ್ಭಿಕ ಚಿತ್ರ
Follow us
ರಾಜೇಶ್ ದುಗ್ಗುಮನೆ
|

Updated on: Jan 16, 2021 | 4:33 PM

ಪಾಕಿಸ್ತಾನದ ಆರ್ಥಿಕ ಪರಿಸ್ಥಿತಿ ದಿನದಿಂದ ದಿನಕ್ಕೆ ಹೀನಾಯ ಸ್ಥಿತಿ ತಲುಪುತ್ತಿದೆ. ಈ ಮೊದಲು ಚೀನಾಗೆ ಕತ್ತೆಗಳನ್ನು ಮಾರಿ ಪಾಕಿಸ್ತಾನ ದುಡ್ಡು ಸಂಪಾದಿಸಿದ ವಿಚಾರ ದೊಡ್ಡ ಮಟ್ಟದಲ್ಲಿ ಸುದ್ದಿ ಆಗಿತ್ತು. ಈಗ ಮತ್ತೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪಾಕಿಸ್ತಾನದ ಮಾನ ಹರಾಜಾಗಿದೆ. ಗುತ್ತಿಗೆ ಹಣ ಪಾವತಿ ಮಾಡದ ಪಾಕಿಸ್ತಾನ ಇಂಟರ್​ನ್ಯಾಷನಲ್​ ಏರ್​​ಲೈನ್ಸನ್​​ (ಪಿಐಎ) ವಿಮಾನ ಒಂದನ್ನು ಮಲೇಷ್ಯಾ ಅಧಿಕಾರಿಗಳು ಸೀಜ್​ ಮಾಡಿದ್ದಾರೆ. ವಿಮಾನದಲ್ಲಿ ಪ್ರಯಾಣಿಕರು ಇರುವಾಗಲೇ ಅಧಿಕಾರಿಗಳು ಸೀಜ್​ ಮಾಡಿದ್ದಾರೆ.

ಅಂದ ಹಾಗೆ, ಬೋಯಿಂಗ್​-777 ಸೇರಿ ಎರಡು ವಿಮಾನಗಳನ್ನು ಪಿಐಎ ಮಲೇಷ್ಯಾದಿಂದ ಗುತ್ತಿಗೆ ಪಡೆದಿತ್ತು. ಆದರೆ, ಗುತ್ತಿಗೆ ಹಣ ಪಾವತಿಸದೇ ಪಾಕಿಸ್ತಾನ ಸತಾಯಿಸುತ್ತಲೇ ಬಂದಿತ್ತು. ಈಗ ಸ್ಥಳೀಯ ಕೋರ್ಟ್​ ವಿಮಾನ ವಶಕ್ಕೆ ಪಡೆಯುವಂತೆ ಆದೇಶಿಸಿದ ಹಿನ್ನೆಲೆಯಲ್ಲಿ ಬೋಯಿಂಗ್​-777 ವಿಮಾನವನ್ನು ಕೌಲಾಲಂಪುರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಅಧಿಕಾರಿಗಳು ಈ ಕ್ರಮ ಕೈಗೊಂಡಿದ್ದಾರೆ.

ಇನ್ನು, ವಿಮಾನವನ್ನು ವಶಕ್ಕೆ ಪಡೆಯುವಾಗ ಪ್ರಯಾಣಿಕರು ವಿಮಾನದಲ್ಲಿ ಉಪಸ್ಥಿತರಿದ್ದರು. ಏರ್​ಲೈನ್ಸ್​ನ ಸಿಬ್ಬಂದಿ ಕೂಡ ಇದ್ದರು. ಈಗ ಮಲೇಷ್ಯಾ ಸರ್ಕಾರ ಇವರ ಪ್ರಯಾಣಕ್ಕೆ ಬೇರೆ ವ್ಯವಸ್ಥೆ ಮಾಡಿದೆ ಎನ್ನಲಾಗಿದೆ.

ಇನ್ನು, ಘಟನೆ ಕುರಿತು ಪಾಕಿಸ್ತಾನ್​ ಇಂಟರ್​ನ್ಯಾಷನಲ್​ ಏರ್​ಲೈನ್​ ಆಕ್ರೋಶ ಹೊರಹಾಕಿದೆ. ಬಾಕಿ ಮೊತ್ತ ಹಿಂದಿರುಗಿಸುವ ಪ್ರಕರಣದ ವಿಚಾರಣೆ ಇಂಗ್ಲೆಂಡ್​ ಕೋರ್ಟ್​​ನಲ್ಲಿ ನಡೆಯುತ್ತಿದೆ. ಹೀಗಿರುವಾಗಲೇ, ಮಲೇಷ್ಯಾ ಸರ್ಕಾರ ಒಮ್ಮುಖವಾಗಿ ನಿರ್ಧಾರ ತೆಗೆದುಕೊಂಡಿದೆ ಎಂದು ಆರೋಪಿಸಿದೆ.

ಸೌದಿ ಅರೇಬಿಯಾದ ಹಳೇ ಸಾಲ ತೀರಿಸಲು ಚೀನಾದಿಂದ ದೊಡ್ಡ ಮೊತ್ತದ ಹೊಸ ಸಾಲ ಪಡೆದ ಪಾಕಿಸ್ತಾನ

ಭಯೋತ್ಪಾದಕರ ದಾಳಿ ಪಾಕಿಸ್ತಾನದ ಹತಾಷೆಯ ಪ್ರತೀಕ: ಬಸನಗೌಡ ಯತ್ನಾಳ್
ಭಯೋತ್ಪಾದಕರ ದಾಳಿ ಪಾಕಿಸ್ತಾನದ ಹತಾಷೆಯ ಪ್ರತೀಕ: ಬಸನಗೌಡ ಯತ್ನಾಳ್
ಪಹಲ್ಗಾಮ್​ ಉಗ್ರರ ದಾಳಿ: ಗುಪ್ತಚರ ಇಲಾಖೆ ವೈಫಲ್ಯ ಎಂದ ಸಿದ್ದರಾಮಯ್ಯ
ಪಹಲ್ಗಾಮ್​ ಉಗ್ರರ ದಾಳಿ: ಗುಪ್ತಚರ ಇಲಾಖೆ ವೈಫಲ್ಯ ಎಂದ ಸಿದ್ದರಾಮಯ್ಯ
ಕುರಿ ಮೇಯಿಸುತ್ತಿರುವಾಗಲೇ ಬಂತು UPSC ಫಲಿತಾಂಶ: ಕುರಿ ಹೊತ್ತು ಕುಣಿದ ಯುವಕ
ಕುರಿ ಮೇಯಿಸುತ್ತಿರುವಾಗಲೇ ಬಂತು UPSC ಫಲಿತಾಂಶ: ಕುರಿ ಹೊತ್ತು ಕುಣಿದ ಯುವಕ
ವಯಸ್ಸಾದವರು ಅಪಾಯದಿಂದ ಪಾರಾಗಲು ಬಹಳ ಕಷ್ಟಪಟ್ಟರು: ದೊಡ್ಡಬಸಯ್ಯ
ವಯಸ್ಸಾದವರು ಅಪಾಯದಿಂದ ಪಾರಾಗಲು ಬಹಳ ಕಷ್ಟಪಟ್ಟರು: ದೊಡ್ಡಬಸಯ್ಯ
ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ್ದ ಪಹಲ್ಗಾಮ್​ಗೆ ಅಮಿತ್​ ಶಾ ಭೇಟಿ
ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ್ದ ಪಹಲ್ಗಾಮ್​ಗೆ ಅಮಿತ್​ ಶಾ ಭೇಟಿ
ಉಗ್ರರ ಮನಸ್ಥಿತಿ, ಉದ್ದೇಶ ಏನಾಗಿತ್ತು ಅಂತ ಈಗಲೇ ಹೇಳಲಾಗದು: ಜಾರಕಿಹೊಳಿ
ಉಗ್ರರ ಮನಸ್ಥಿತಿ, ಉದ್ದೇಶ ಏನಾಗಿತ್ತು ಅಂತ ಈಗಲೇ ಹೇಳಲಾಗದು: ಜಾರಕಿಹೊಳಿ
ಹೆಂಡತಿ, ಮಕ್ಕಳೊಂದಿಗೆ ಮಧುಸೂದನ್ ಭಾನುವಾರ ಕಾಶ್ಮೀರ ಪ್ರವಾಸ ತೆರಳಿದ್ದರು
ಹೆಂಡತಿ, ಮಕ್ಕಳೊಂದಿಗೆ ಮಧುಸೂದನ್ ಭಾನುವಾರ ಕಾಶ್ಮೀರ ಪ್ರವಾಸ ತೆರಳಿದ್ದರು
ಉಗ್ರರು ಹಿಂದೂಗಳನ್ನೇ ಹುಡುಕಿ ದಾಳಿ ಮಾಡಿದ್ದು ಆಘಾತಕಾರಿ ಎಂದ ಪರಮೇಶ್ವರ್
ಉಗ್ರರು ಹಿಂದೂಗಳನ್ನೇ ಹುಡುಕಿ ದಾಳಿ ಮಾಡಿದ್ದು ಆಘಾತಕಾರಿ ಎಂದ ಪರಮೇಶ್ವರ್
ಫಾರ್ಮ್​ಹೌಸ್​ನಲ್ಲಿ ಎತ್ತಿನಗಾಡಿ ಓಡಿಸಿದ ನಟ ದರ್ಶನ್; ದಾಸನ ಜಾಲಿ ಮೂಡ್
ಫಾರ್ಮ್​ಹೌಸ್​ನಲ್ಲಿ ಎತ್ತಿನಗಾಡಿ ಓಡಿಸಿದ ನಟ ದರ್ಶನ್; ದಾಸನ ಜಾಲಿ ಮೂಡ್
VIDEO: ಝಹೀರ್ ಖಾನ್ - ರಿಷಭ್ ಪಂತ್ ನಡುವೆ ಮಾತಿನ ಚಕಮಕಿ
VIDEO: ಝಹೀರ್ ಖಾನ್ - ರಿಷಭ್ ಪಂತ್ ನಡುವೆ ಮಾತಿನ ಚಕಮಕಿ