AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಯಾಣಿಕರಿದ್ದ ಪಾಕ್​ ವಿಮಾನವನ್ನು ಸೀಜ್​ ಮಾಡಿದ ಮಲೇಷ್ಯಾ ಸರ್ಕಾರ, ಯಾಕೆ?

ಬೋಯಿಂಗ್​-777 ಸೇರಿ ಎರಡು ವಿಮಾನವನ್ನು ಪಿಐಎ ಮಲೇಷಿಯಾದಿಂದ ಗುತ್ತಿಗೆ ಪಡೆದಿತ್ತು. ಆದರೆ, ಗುತ್ತಿಗೆ ಹಣ ಪಾವತಿಸದೇ ಪಾಕಿಸ್ತಾನ ಸತಾಯಿಸುತ್ತಲೇ ಬಂದಿತ್ತು. ಈಗ ಸ್ಥಳೀಯ ಕೋರ್ಟ್​ ವಿಮಾನ ವಶಕ್ಕೆ ಪಡೆಯುವಂತೆ ಆದೇಶಿಸಿತ್ತು.

ಪ್ರಯಾಣಿಕರಿದ್ದ ಪಾಕ್​ ವಿಮಾನವನ್ನು ಸೀಜ್​ ಮಾಡಿದ ಮಲೇಷ್ಯಾ ಸರ್ಕಾರ, ಯಾಕೆ?
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
|

Updated on: Jan 16, 2021 | 4:33 PM

Share

ಪಾಕಿಸ್ತಾನದ ಆರ್ಥಿಕ ಪರಿಸ್ಥಿತಿ ದಿನದಿಂದ ದಿನಕ್ಕೆ ಹೀನಾಯ ಸ್ಥಿತಿ ತಲುಪುತ್ತಿದೆ. ಈ ಮೊದಲು ಚೀನಾಗೆ ಕತ್ತೆಗಳನ್ನು ಮಾರಿ ಪಾಕಿಸ್ತಾನ ದುಡ್ಡು ಸಂಪಾದಿಸಿದ ವಿಚಾರ ದೊಡ್ಡ ಮಟ್ಟದಲ್ಲಿ ಸುದ್ದಿ ಆಗಿತ್ತು. ಈಗ ಮತ್ತೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪಾಕಿಸ್ತಾನದ ಮಾನ ಹರಾಜಾಗಿದೆ. ಗುತ್ತಿಗೆ ಹಣ ಪಾವತಿ ಮಾಡದ ಪಾಕಿಸ್ತಾನ ಇಂಟರ್​ನ್ಯಾಷನಲ್​ ಏರ್​​ಲೈನ್ಸನ್​​ (ಪಿಐಎ) ವಿಮಾನ ಒಂದನ್ನು ಮಲೇಷ್ಯಾ ಅಧಿಕಾರಿಗಳು ಸೀಜ್​ ಮಾಡಿದ್ದಾರೆ. ವಿಮಾನದಲ್ಲಿ ಪ್ರಯಾಣಿಕರು ಇರುವಾಗಲೇ ಅಧಿಕಾರಿಗಳು ಸೀಜ್​ ಮಾಡಿದ್ದಾರೆ.

ಅಂದ ಹಾಗೆ, ಬೋಯಿಂಗ್​-777 ಸೇರಿ ಎರಡು ವಿಮಾನಗಳನ್ನು ಪಿಐಎ ಮಲೇಷ್ಯಾದಿಂದ ಗುತ್ತಿಗೆ ಪಡೆದಿತ್ತು. ಆದರೆ, ಗುತ್ತಿಗೆ ಹಣ ಪಾವತಿಸದೇ ಪಾಕಿಸ್ತಾನ ಸತಾಯಿಸುತ್ತಲೇ ಬಂದಿತ್ತು. ಈಗ ಸ್ಥಳೀಯ ಕೋರ್ಟ್​ ವಿಮಾನ ವಶಕ್ಕೆ ಪಡೆಯುವಂತೆ ಆದೇಶಿಸಿದ ಹಿನ್ನೆಲೆಯಲ್ಲಿ ಬೋಯಿಂಗ್​-777 ವಿಮಾನವನ್ನು ಕೌಲಾಲಂಪುರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಅಧಿಕಾರಿಗಳು ಈ ಕ್ರಮ ಕೈಗೊಂಡಿದ್ದಾರೆ.

ಇನ್ನು, ವಿಮಾನವನ್ನು ವಶಕ್ಕೆ ಪಡೆಯುವಾಗ ಪ್ರಯಾಣಿಕರು ವಿಮಾನದಲ್ಲಿ ಉಪಸ್ಥಿತರಿದ್ದರು. ಏರ್​ಲೈನ್ಸ್​ನ ಸಿಬ್ಬಂದಿ ಕೂಡ ಇದ್ದರು. ಈಗ ಮಲೇಷ್ಯಾ ಸರ್ಕಾರ ಇವರ ಪ್ರಯಾಣಕ್ಕೆ ಬೇರೆ ವ್ಯವಸ್ಥೆ ಮಾಡಿದೆ ಎನ್ನಲಾಗಿದೆ.

ಇನ್ನು, ಘಟನೆ ಕುರಿತು ಪಾಕಿಸ್ತಾನ್​ ಇಂಟರ್​ನ್ಯಾಷನಲ್​ ಏರ್​ಲೈನ್​ ಆಕ್ರೋಶ ಹೊರಹಾಕಿದೆ. ಬಾಕಿ ಮೊತ್ತ ಹಿಂದಿರುಗಿಸುವ ಪ್ರಕರಣದ ವಿಚಾರಣೆ ಇಂಗ್ಲೆಂಡ್​ ಕೋರ್ಟ್​​ನಲ್ಲಿ ನಡೆಯುತ್ತಿದೆ. ಹೀಗಿರುವಾಗಲೇ, ಮಲೇಷ್ಯಾ ಸರ್ಕಾರ ಒಮ್ಮುಖವಾಗಿ ನಿರ್ಧಾರ ತೆಗೆದುಕೊಂಡಿದೆ ಎಂದು ಆರೋಪಿಸಿದೆ.

ಸೌದಿ ಅರೇಬಿಯಾದ ಹಳೇ ಸಾಲ ತೀರಿಸಲು ಚೀನಾದಿಂದ ದೊಡ್ಡ ಮೊತ್ತದ ಹೊಸ ಸಾಲ ಪಡೆದ ಪಾಕಿಸ್ತಾನ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್