Sign In

By signing in or creating an account, you agree with Associated Broadcasting Company's Terms & Conditions and Privacy Policy.

Maldives controversy: ಪ್ರಧಾನಿ ಮೋದಿ ಮತ್ತು ಭಾರತೀಯರಿಗೆ ಲೇವಡಿ; ಭಾರತದಿಂದ ತಗಾದೆ; ಮಾಲ್ಡೀವ್ಸ್​ನ ಮೂವರು ಸಚಿವರ ತಲೆದಂಡ

Three Maldives Ministers Suspended: ನರೇಂದ್ರ ಮೋದಿ ಹಾಗೂ ಭಾರತೀಯರ ಬಗ್ಗೆ ಅವಹೇಳನಕಾನಿ ಪ್ರತಿಕ್ರಿಯೆ ವ್ಯಕ್ತಪಡಿಸಿದ ಮಾಲ್ಡೀವ್ಸ್​​ನ ಮೂವರು ಸಚಿವರನ್ನು ಅಲ್ಲಿನ ಸರ್ಕಾರ ಅಮಾನತುಗೊಳಿಸಿದೆ. ವಜಾಗೊಂಡ ಸಚಿವರು ಮಾರಿಯಂ ಶಿಯುನಾ, ಮಾಲ್ಶಾ ಮತ್ತು ಹಸನ್ ಜಿಹಾನ್ ಎನ್ನಲಾಗಿದೆ. ಲಕ್ಷದ್ವೀಪಕ್ಕೆ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭೇಟಿ ಬಗ್ಗೆ ಈ ಮೂವರು ಲೇವಡಿ ಮಾಡಿದ್ದರು. ಈ ಬಗ್ಗೆ ಭಾರತ ರಾಜತಾಂತ್ರಿಕ ಮಟ್ಟದಲ್ಲಿ ಆಕ್ಷೇಪಿಸಿದೆ.

Maldives controversy: ಪ್ರಧಾನಿ ಮೋದಿ ಮತ್ತು ಭಾರತೀಯರಿಗೆ ಲೇವಡಿ; ಭಾರತದಿಂದ ತಗಾದೆ; ಮಾಲ್ಡೀವ್ಸ್​ನ ಮೂವರು ಸಚಿವರ ತಲೆದಂಡ
ಮಾರಿಯಂ ಶಿಯುನಾ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Jan 07, 2024 | 6:09 PM

ಮಾಲೆ, ಜನವರಿ 7: ಲಕ್ಷದ್ವೀಪಕ್ಕೆ ಭೇಟಿ ನೀಡಿ ಫೋಟೋಶೂಟ್​ನಲ್ಲಿ ಭಾಗಿಯಾಗಿದ್ದ ನರೇಂದ್ರ ಮೋದಿ ಹಾಗೂ ಭಾರತೀಯರ ಬಗ್ಗೆ ಅವಹೇಳನಕಾರಿ ಪ್ರತಿಕ್ರಿಯೆ ವ್ಯಕ್ತಪಡಿಸಿದ ಮಾಲ್ಡೀವ್ಸ್​ನ ಮೂವರು ಸಚಿವರನ್ನು ಅಲ್ಲಿನ ಸರ್ಕಾರ ಭಾನುವಾರ (ಜ. 7) ಅಮಾನತುಗೊಳಿಸಿದೆ. ವಜಾಗೊಂಡ ಸಚಿವರು ಮಾರಿಯಂ ಶಿಯುನಾ, ಮಾಲ್ಶಾ ಮತ್ತು ಹಸನ್ ಜಿಹಾನ್ ಎನ್ನಲಾಗಿದೆ.

ಇದಕ್ಕೂ ಮುನ್ನ, ಪ್ರಧಾನಿ ಮೋದಿ ಬಗ್ಗೆ ಮಾಲ್ಡೀವ್ಸ್ ಸಚಿವರಿಂದ ಅವಹೇಳನಕಾರಿ ಹೇಳಿಕೆ ಬಂದಿದ್ದಕ್ಕೆ ಭಾರತ ತಗಾದೆ ವ್ಯಕ್ತಪಡಿಸಿದೆ. ಅಧಿಕೃತವಾಗಿ ತನ್ನ ಆಕ್ಷೇಪ ವ್ಯಕ್ತಪಡಿಸಿದೆ. ಮಾಧ್ಯಮ ವರದಿಗಳ ಪ್ರಕಾರ ರಾಜತಾಂತ್ರಿಕ ಮಟ್ಟದಲ್ಲಿ ಭಾರತ ಸರ್ಕಾರ ಈ ಬಗ್ಗೆ ತನ್ನ ಧ್ವನಿ ಎತ್ತಿರುವುದು ತಿಳಿದುಬಂದಿದೆ.

ಮಾಲ್ಡೀವ್ಸ್​ನ ಯುವ ಸಬಲೀಕರಣ, ಮಾಹಿತಿ ಮತ್ತು ಕಲೆ ಖಾತೆಯ ಉಪ ಸಚಿವೆ ಆಗಿದ್ದ ಮಾರಿಯಂ ಶಿಯುನಾ ಅವರು ನರೇಂದ್ರ ಮೋದಿ ಅವರನ್ನು ಕ್ಲೌನ್ (ವಿದೂಷಕ) ಹಾಗು ಇಸ್ರೇಲ್​ನ ಕೈಗೊಂಬೆ ಎಂದು ಲೇವಡಿ ಮಾಡಿ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದರು. ವಿವಾದ ಎದ್ದ ಬಳಿಕ ಅವರು ಆ ಪೋಸ್ಟ್ ಅಳಿಸಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಮೋದಿ ವಿರುದ್ಧ ಸಚಿವರ ಅವಹೇಳನಕಾರಿ ಹೇಳಿಕೆ, ಈ ವಿಚಾರದಿಂದ ಅಂತರ ಕಾಯ್ದುಕೊಂಡ ಮಾಲ್ಡೀವ್ಸ್​ ಸರ್ಕಾರ

ಮಾರಿಯಂ ಮಾತ್ರವಲ್ಲ, ಇತರಿಬ್ಬರು ಸಚಿವರಾದ ಮಾಲ್ಷಾ ಮತ್ತು ಹಸನ್ ಜಿಹಾನ್ ಕೂಡ ಪ್ರಧಾನಿ ಮೋದಿ ಹಾಗೂ ಭಾರತದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದರು. ಅಲ್ಲಿನ ಕೆಲ ಸಂಸದರೂ ಕೂಡ ಈ ವಿಚಾರದಲ್ಲಿ ಹಿಂದುಳಿದಿಲ್ಲ.

ಪ್ರಧಾನಿ ನರೇಂದ್ರ ಮೋದಿ ಹಾಗೂ ಭಾರತೀಯರ ಬಗ್ಗೆ ಮಾಲ್ಡೀವ್ಸ್ ಸಚಿವರು ಅವಹೇಳನಕಾರಿ ಮಾತುಗಳನ್ನು ಆಡಿದ ಬಳಿಕ ಭಾರತದಲ್ಲಿ ಬಾಯ್ಕಾಟ್ ಮಾಲ್ಡೀವ್ಸ್ ಟ್ರೆಂಡ್ ಆಗಿದೆ. ಸಾವಿರಾರು ಭಾರತೀಯರು ಮಾಲ್ಡೀವ್ಸ್ ಪ್ರವಾಸವನ್ನು ರದ್ದು ಮಾಡಿದ್ದಾರೆ. ಮಾಲ್ಡೀವ್ಸ್​ಗೆ ಅದರ ಪ್ರವಾಸೋದ್ಯಮ ಪ್ರಮುಖ ಆದಾಯ ಮೂಲವಾಗಿದೆ. ಚೀನೀಯರ ಬಳಿಕ ಭಾರತೀಯರೇ ಮಾಲ್ಡೀವ್ಸ್ ಪ್ರವಾಸಿಗರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಹೀಗಾಗಿ, ಭಾರತೀಯರ ಪ್ರವಾಸಿಗರು ಬರುವುದು ನಿಂತದರೆ ಮಾಲ್ಡೀವ್ಸ್ ಆದಾಯಕ್ಕೆ ಒಂದಷ್ಟು ನಷ್ಟ ಬರಬಹುದು.

ಇದನ್ನೂ ಓದಿ: ಮೋದಿಗೆ ಲೇವಡಿ ಮಾಡಿದ ಎಫೆಕ್ಟ್..! ಮಾಲ್ಡೀವ್ಸ್​ಗೆ 8000 ಹೋಟೆಲ್ ಬುಕಿಂಗ್ಸ್, 2500 ಫ್ಲೈಟ್ ಟಿಕೆಟ್ ರದ್ದು ಮಾಡಿದ ಭಾರತೀಯರು; ಆ ದೇಶದ ಪ್ರವಾಸೋದ್ಯಮ ಹೇಗಿದೆ?

ಮಾಲ್ಡೀವ್ಸ್ ಅಧ್ಯಕ್ಷರೇ ಭಾರತ ವಿರೋಧಿ…

ಮಾಲ್ಡೀವ್ಸ್​ನ ಈಗಿನ ಅಧ್ಯಕ್ಷ ಮೊಹಮ್ಮದ್ ಮುಯಿಜು ಅಧಿಕಾರಕ್ಕೆ ಬಂದ ಬಳಿಕ ಭಾರತ ಮತ್ತು ಮಾಲ್ಡೀವ್ಸ್ ಸಂಬಂಧ ಹದಗೆಟ್ಟಿದೆ. ಮುಯಿಜು ವೈಯಕ್ತಿಕವಾಗಿ ಭಾರತ ವಿರೋಧಿ ಹಾಗೂ ಚೀನೀ ಪರ ಅಭಿಪ್ರಾಯ ಇರುವ ನಾಯಕ. ಅವರ ಸರ್ಕಾರದ ನೀತಿಗಳೂ ಅದೇ ರೀತಿ ಇವೆ. ಮಾಲ್ಡೀವ್ಸ್​ನಲ್ಲಿ ನೆಲೆ ಇದ್ದ ಭಾರತೀಯ ಸೇನೆಗಳನ್ನು ವಾಪಸ್ ಕಳಿಸುವ ಅಜೆಂಡಾ ಇಟ್ಟುಕೊಂಡೇ ಚುನಾವಣೆ ಎದುರಿಸಿ ಈಗ ಗೆದ್ದು ಅಧಿಕಾರಕ್ಕೆ ಬಂದಿದೆ.

ಮಾಲ್ಡೀವ್ಸ್ ಅಧ್ಯಕ್ಷರು ಬಹಿರಂಗವಾಗಿಯೇ ಭಾರತ ವಿರೋಧಿ ಹೇಳಿಕೆಗಳನ್ನು ನೀಡಿದ್ದಿದೆ. ಅಷ್ಟೇ ಬಹಿರಂಗವಾಗಿ ಚೀನಾಗೆ ಬೆಂಬಲ ನೀಡುತ್ತಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 5:43 pm, Sun, 7 January 24

ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು