AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತೀಯರ ಕೋಪ ನ್ಯಾಯಯುತವಾಗಿದೆ: ಮಾಲ್ಡೀವ್ಸ್​ ಸಂಸದೆ ಇವಾ ಅಬ್ದುಲ್ಲಾ

ಭಾರತೀಯರ ಕೋಪ ನ್ಯಾಯಯುತವಾಗಿದೆ ಎಂದು ಮಾಲ್ಡೀವ್ಸ್​ ಸಂಸದೆ ಇವಾ​ ಅಬ್ದುಲ್ಲಾ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಲಕ್ಷದ್ವೀಪ ಭೇಟಿ ಕುರಿತು ಮಾಲ್ಡೀವ್ಸ್​ ಸರ್ಕಾರದ ಮೂವರು ಸಚಿವರು ಲೇವಡಿ ಮಾಡಿದ್ದರು. ಲಕ್ಷದ್ವೀಪವನ್ನು ಮಾಲ್ಡೀವ್ಸ್​ನಂತೆ ಮಾಡುತ್ತೀರಿ ಎಂಬುದು ನಿಮ್ಮ ಭ್ರಮೆ, ನಿಮ್ಮಲ್ಲಿ ಮಾಲ್ಡೀವ್ಸ್​ನಲ್ಲಿರುವ ಮೂಲಸೌಕರ್ಯಗಳಿಲ್ಲ ಎಂದೆಲ್ಲಾ ಹೇಳಿಕೆ ನೀಡಿದ್ದರು.

ಭಾರತೀಯರ ಕೋಪ ನ್ಯಾಯಯುತವಾಗಿದೆ: ಮಾಲ್ಡೀವ್ಸ್​ ಸಂಸದೆ ಇವಾ ಅಬ್ದುಲ್ಲಾ
ಇವಾ
ನಯನಾ ರಾಜೀವ್
|

Updated on: Jan 08, 2024 | 10:24 AM

Share

ಭಾರತೀಯರ ಕೋಪ ನ್ಯಾಯಯುತವಾಗಿದೆ ಎಂದು ಮಾಲ್ಡೀವ್ಸ್​ ಸಂಸದೆ ಇವಾ​ ಅಬ್ದುಲ್ಲಾ(Iva Abdullah) ಹೇಳಿದ್ದಾರೆ. ಅಷ್ಟೇ ಅಲ್ಲದೆ ಭಾರತೀಯರ ಬಳಿ ಕ್ಷಮೆಯಾಚಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಲಕ್ಷದ್ವೀಪ ಭೇಟಿ ಕುರಿತು ಮಾಲ್ಡೀವ್ಸ್​ ಸರ್ಕಾರದ ಮೂವರು ಸಚಿವರು ಲೇವಡಿ ಮಾಡಿದ್ದರು. ಲಕ್ಷದ್ವೀಪವನ್ನು ಮಾಲ್ಡೀವ್ಸ್​ನಂತೆ ಮಾಡುತ್ತೀರಿ ಎಂಬುದು ನಿಮ್ಮ ಭ್ರಮೆ, ನಿಮ್ಮಲ್ಲಿ ಮಾಲ್ಡೀವ್ಸ್​ನಲ್ಲಿರುವ ಮೂಲಸೌಕರ್ಯಗಳಿಲ್ಲ ಎಂದೆಲ್ಲಾ ಹೇಳಿಕೆ ನೀಡಿದ್ದರು.

ಈ ಹಿನ್ನೆಲೆಯಲ್ಲಿ ಮಾಲ್ಡೀವ್ಸ್​ ಸರ್ಕಾರ ಈ ಸಚಿವರ ಹೇಳಿಕೆಗೂ ಸರ್ಕಾರಕ್ಕೂ ಏನು ಸಂಬಂಧವಿಲ್ಲ ಎಂದು ಹೇಳಿ, ಮರ್ಯಾಮ್ ಶಿಯುನಾ, ಮಲ್ಶಾ ಶರೀಫ್ ಮತ್ತು ಮಹಜೂಮ್ ಮಜೀದ್ ಅವರನ್ನು ನಂತರ ಅಮಾನತುಗೊಳಿಸಿದೆ. ಇದೀಗ ಇದೇ ವಿಚಾರ ಕುರಿತು ಮಾಲ್ಡೀವ್ಸ್​ ಸಂಸದೆ ಈವಾ ಅಬ್ದುಲ್ಲಾ ಮಾತನಾಡಿದ್ದಾರೆ, ಭಾರತೀಯರ ಕೋಪ ನ್ಯಾಯಯುತವಾಗಿದೆ, ಯಾರೂ ಕೂಡ ಇಂಥಾ ಹೇಳಿಕೆಯನ್ನು ಸಹಿಸುವುದಿಲ್ಲ, ಈ ಹೇಳಿಕೆಗಾಗಿ ನಾನು ಭಾರತೀಯರಲ್ಲಿ ಕ್ಷಮೆಯಾಚಿಸುತ್ತೇನೆ ಎಂದು ಹೇಳಿದ್ದಾರೆ.

ಸಚಿವರ ಹೇಳಿಕೆ ಹೊರಬಿದ್ದ ತಕ್ಷಣವೇ ಭಾರತದಲ್ಲಿ #BoycottMaldives ಅಭಿಯಾನ ಶುರುವಾಗಿತ್ತು, ಸಾಕಷ್ಟು ಸೆಲೆಬ್ರಿಟಿಗಳು, ಕ್ರಿಕೆಟಿಗರು ಸೇರಿ ಸಾರ್ವಜನಿಕರು ಕೂಡ ಈ ಅಭಿಯಾನಕ್ಕೆ ಬೆಂಬಲ ಸೂಚಿಸಿದ್ದಾರೆ.

ಮತ್ತಷ್ಟು ಓದಿ: ಪ್ರಧಾನಿ ಮೋದಿ ವಿರುದ್ಧ ಲೇವಡಿ, ಮಾಲ್ಡೀವ್ಸ್​ಗೆ ತೆರಳುವ ಎಲ್ಲಾ ವಿಮಾನಗಳನ್ನು ರದ್ದುಗೊಳಿಸಿದ EaseMyTrip

ಎಷ್ಟೋ ಮಂದಿ ಮಾಲ್ಡೀವ್ಸ್​ಗೆ ಬುಕ್​ ಮಾಡಿದ್ದ ವಿಮಾನ ಟಿಕೆಟ್​ ಅನ್ನು ರದ್ದುಪಡಿಸಿದ್ದಾರೆ. ಅಷ್ಟೇ ಅಲ್ಲದೆ ಮಾಲ್ಡೀವ್ಸ್​ಗೆ ತೆರಳುವ ಎಲ್ಲಾ ವಿಮಾನಗಳನ್ನು EaseMyTrip ರದ್ದುಗೊಳಿಸಿದೆ. ನಿಶಾಂತ್ ಪಿಟ್ಟಿ ಎಕ್ಸ್​ನಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದು, ಅದರಲ್ಲಿ EaseMyTrip ಎಲ್ಲಾ ಮಾಲ್ಡೀವ್ಸ್ ವಿಮಾನ ಬುಕಿಂಗ್ ಅನ್ನು ರದ್ದುಗೊಳಿಸಿದೆ, ಇದರೊಂದಿಗೆ EaseMyTrip #ChaloLakshadweep ಅಭಿಯಾನವನ್ನು ಪ್ರಾರಂಭಿಸಿದೆ ಎಂಬುದಾಗಿ ತಿಳಿಸಿದ್ದಾರೆ.

ಲಕ್ಷದ್ವೀಪದ ನೀರು ಮತ್ತು ಕಡಲತೀರಗಳು ಮಾಲ್ಡೀವ್ಸ್‌ನಂತೆಯೇ ಉತ್ತಮವಾಗಿವೆ. ನಮ್ಮ ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ಭೇಟಿ ನೀಡಿದ ಈ ತಾಣವನ್ನು ನಾವು ಮತ್ತಷ್ಟು ಪ್ರಚಾರ ಮಾಡಲಿದ್ದೇವೆ ಜತೆಗೆ ವಿಶೇಷ ಕೊಡುಗೆಯನ್ನೂ ಕೂಡ ನೀಡಲಿದ್ದೇವೆ ಎಂದು ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರ ಲಕ್ಷದ್ವೀಪ ಭೇಟಿಯ ಸಂದರ್ಭದಲ್ಲಿ ಮಾಲ್ಡೀವ್ಸ್ ಸರ್ಕಾರದ ಸಚಿವೆ ಮರಿಯಮ್ ಶಿಯುನಾ ಮತ್ತು ಇತರ ನಾಯಕರ ಆಕ್ಷೇಪಾರ್ಹ ಹೇಳಿಕೆಗಳ ನಂತರ ರಾಜತಾಂತ್ರಿಕ ಉದ್ವಿಗ್ನತೆಗೆ ಸಾಕ್ಷಿಯಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ