ಭಾರತೀಯರ ಕೋಪ ನ್ಯಾಯಯುತವಾಗಿದೆ: ಮಾಲ್ಡೀವ್ಸ್​ ಸಂಸದೆ ಇವಾ ಅಬ್ದುಲ್ಲಾ

ಭಾರತೀಯರ ಕೋಪ ನ್ಯಾಯಯುತವಾಗಿದೆ ಎಂದು ಮಾಲ್ಡೀವ್ಸ್​ ಸಂಸದೆ ಇವಾ​ ಅಬ್ದುಲ್ಲಾ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಲಕ್ಷದ್ವೀಪ ಭೇಟಿ ಕುರಿತು ಮಾಲ್ಡೀವ್ಸ್​ ಸರ್ಕಾರದ ಮೂವರು ಸಚಿವರು ಲೇವಡಿ ಮಾಡಿದ್ದರು. ಲಕ್ಷದ್ವೀಪವನ್ನು ಮಾಲ್ಡೀವ್ಸ್​ನಂತೆ ಮಾಡುತ್ತೀರಿ ಎಂಬುದು ನಿಮ್ಮ ಭ್ರಮೆ, ನಿಮ್ಮಲ್ಲಿ ಮಾಲ್ಡೀವ್ಸ್​ನಲ್ಲಿರುವ ಮೂಲಸೌಕರ್ಯಗಳಿಲ್ಲ ಎಂದೆಲ್ಲಾ ಹೇಳಿಕೆ ನೀಡಿದ್ದರು.

ಭಾರತೀಯರ ಕೋಪ ನ್ಯಾಯಯುತವಾಗಿದೆ: ಮಾಲ್ಡೀವ್ಸ್​ ಸಂಸದೆ ಇವಾ ಅಬ್ದುಲ್ಲಾ
ಇವಾ

Updated on: Jan 08, 2024 | 10:24 AM

ಭಾರತೀಯರ ಕೋಪ ನ್ಯಾಯಯುತವಾಗಿದೆ ಎಂದು ಮಾಲ್ಡೀವ್ಸ್​ ಸಂಸದೆ ಇವಾ​ ಅಬ್ದುಲ್ಲಾ(Iva Abdullah) ಹೇಳಿದ್ದಾರೆ. ಅಷ್ಟೇ ಅಲ್ಲದೆ ಭಾರತೀಯರ ಬಳಿ ಕ್ಷಮೆಯಾಚಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಲಕ್ಷದ್ವೀಪ ಭೇಟಿ ಕುರಿತು ಮಾಲ್ಡೀವ್ಸ್​ ಸರ್ಕಾರದ ಮೂವರು ಸಚಿವರು ಲೇವಡಿ ಮಾಡಿದ್ದರು. ಲಕ್ಷದ್ವೀಪವನ್ನು ಮಾಲ್ಡೀವ್ಸ್​ನಂತೆ ಮಾಡುತ್ತೀರಿ ಎಂಬುದು ನಿಮ್ಮ ಭ್ರಮೆ, ನಿಮ್ಮಲ್ಲಿ ಮಾಲ್ಡೀವ್ಸ್​ನಲ್ಲಿರುವ ಮೂಲಸೌಕರ್ಯಗಳಿಲ್ಲ ಎಂದೆಲ್ಲಾ ಹೇಳಿಕೆ ನೀಡಿದ್ದರು.

ಈ ಹಿನ್ನೆಲೆಯಲ್ಲಿ ಮಾಲ್ಡೀವ್ಸ್​ ಸರ್ಕಾರ ಈ ಸಚಿವರ ಹೇಳಿಕೆಗೂ ಸರ್ಕಾರಕ್ಕೂ ಏನು ಸಂಬಂಧವಿಲ್ಲ ಎಂದು ಹೇಳಿ, ಮರ್ಯಾಮ್ ಶಿಯುನಾ, ಮಲ್ಶಾ ಶರೀಫ್ ಮತ್ತು ಮಹಜೂಮ್ ಮಜೀದ್ ಅವರನ್ನು ನಂತರ ಅಮಾನತುಗೊಳಿಸಿದೆ.
ಇದೀಗ ಇದೇ ವಿಚಾರ ಕುರಿತು ಮಾಲ್ಡೀವ್ಸ್​ ಸಂಸದೆ ಈವಾ ಅಬ್ದುಲ್ಲಾ ಮಾತನಾಡಿದ್ದಾರೆ, ಭಾರತೀಯರ ಕೋಪ ನ್ಯಾಯಯುತವಾಗಿದೆ, ಯಾರೂ ಕೂಡ ಇಂಥಾ ಹೇಳಿಕೆಯನ್ನು ಸಹಿಸುವುದಿಲ್ಲ, ಈ ಹೇಳಿಕೆಗಾಗಿ ನಾನು ಭಾರತೀಯರಲ್ಲಿ ಕ್ಷಮೆಯಾಚಿಸುತ್ತೇನೆ ಎಂದು ಹೇಳಿದ್ದಾರೆ.

ಸಚಿವರ ಹೇಳಿಕೆ ಹೊರಬಿದ್ದ ತಕ್ಷಣವೇ ಭಾರತದಲ್ಲಿ #BoycottMaldives ಅಭಿಯಾನ ಶುರುವಾಗಿತ್ತು, ಸಾಕಷ್ಟು ಸೆಲೆಬ್ರಿಟಿಗಳು, ಕ್ರಿಕೆಟಿಗರು ಸೇರಿ ಸಾರ್ವಜನಿಕರು ಕೂಡ ಈ ಅಭಿಯಾನಕ್ಕೆ ಬೆಂಬಲ ಸೂಚಿಸಿದ್ದಾರೆ.

ಮತ್ತಷ್ಟು ಓದಿ: ಪ್ರಧಾನಿ ಮೋದಿ ವಿರುದ್ಧ ಲೇವಡಿ, ಮಾಲ್ಡೀವ್ಸ್​ಗೆ ತೆರಳುವ ಎಲ್ಲಾ ವಿಮಾನಗಳನ್ನು ರದ್ದುಗೊಳಿಸಿದ EaseMyTrip

ಎಷ್ಟೋ ಮಂದಿ ಮಾಲ್ಡೀವ್ಸ್​ಗೆ ಬುಕ್​ ಮಾಡಿದ್ದ ವಿಮಾನ ಟಿಕೆಟ್​ ಅನ್ನು ರದ್ದುಪಡಿಸಿದ್ದಾರೆ. ಅಷ್ಟೇ ಅಲ್ಲದೆ ಮಾಲ್ಡೀವ್ಸ್​ಗೆ ತೆರಳುವ ಎಲ್ಲಾ ವಿಮಾನಗಳನ್ನು EaseMyTrip ರದ್ದುಗೊಳಿಸಿದೆ. ನಿಶಾಂತ್ ಪಿಟ್ಟಿ ಎಕ್ಸ್​ನಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದು, ಅದರಲ್ಲಿ EaseMyTrip ಎಲ್ಲಾ ಮಾಲ್ಡೀವ್ಸ್ ವಿಮಾನ ಬುಕಿಂಗ್ ಅನ್ನು ರದ್ದುಗೊಳಿಸಿದೆ, ಇದರೊಂದಿಗೆ EaseMyTrip #ChaloLakshadweep ಅಭಿಯಾನವನ್ನು ಪ್ರಾರಂಭಿಸಿದೆ ಎಂಬುದಾಗಿ ತಿಳಿಸಿದ್ದಾರೆ.

ಲಕ್ಷದ್ವೀಪದ ನೀರು ಮತ್ತು ಕಡಲತೀರಗಳು ಮಾಲ್ಡೀವ್ಸ್‌ನಂತೆಯೇ ಉತ್ತಮವಾಗಿವೆ. ನಮ್ಮ ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ಭೇಟಿ ನೀಡಿದ ಈ ತಾಣವನ್ನು ನಾವು ಮತ್ತಷ್ಟು ಪ್ರಚಾರ ಮಾಡಲಿದ್ದೇವೆ ಜತೆಗೆ ವಿಶೇಷ ಕೊಡುಗೆಯನ್ನೂ ಕೂಡ ನೀಡಲಿದ್ದೇವೆ ಎಂದು ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರ ಲಕ್ಷದ್ವೀಪ ಭೇಟಿಯ ಸಂದರ್ಭದಲ್ಲಿ ಮಾಲ್ಡೀವ್ಸ್ ಸರ್ಕಾರದ ಸಚಿವೆ ಮರಿಯಮ್ ಶಿಯುನಾ ಮತ್ತು ಇತರ ನಾಯಕರ ಆಕ್ಷೇಪಾರ್ಹ ಹೇಳಿಕೆಗಳ ನಂತರ ರಾಜತಾಂತ್ರಿಕ ಉದ್ವಿಗ್ನತೆಗೆ ಸಾಕ್ಷಿಯಾಗಿದೆ.

 

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us