AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India-Maldives Row: ಮಾಲ್ಡೀವ್ಸ್​ ಅಧ್ಯಕ್ಷ ಮೊಹಮ್ಮದ್ ಮುಯಿಝು ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಗೆ ಸಿದ್ಧತೆ

ಮಾಲ್ಡೀವ್ಸ್​ ಸಚಿವರು ಪ್ರಧಾನಿ ನರೇಂದ್ರ ಮೋದಿ(Narendra Modi) ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವುದು ಅಧ್ಯಕ್ಷ ಮೊಹಮ್ಮದ್ ಮುಯಿಝು(Mohamed Muizzu)ಗೆ ಭಾರಿ ದುಬಾರಿಯಾಗಿ ಪರಿಣಮಿಸಿದೆ.  ಭಾರತದೊಂದಿಗಿನ ಸಂಬಂಧವನ್ನು ಹದಗೆಡಿಸುತ್ತಿದೆ ಎಂದು ಮಾಲ್ಡೀವ್ಸ್​ನ ಪ್ರತಿಪಕ್ಷಗಳು ಅಲ್ಲಿನ ಸರ್ಕಾರವನ್ನು ದೂಷಿಸಿವೆ, ಜತೆಗೆ ಅಧ್ಯಕ್ಷ ಮುಯಿಝು ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಗೂ ತಯಾರಿ ನಡೆದಿದೆ.

India-Maldives Row: ಮಾಲ್ಡೀವ್ಸ್​ ಅಧ್ಯಕ್ಷ ಮೊಹಮ್ಮದ್ ಮುಯಿಝು ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಗೆ ಸಿದ್ಧತೆ
ಮಾಲ್ಡೀವ್ಸ್​ ಅಧ್ಯಕ್ಷ ಮೊಹಮ್ಮದ್ ಮುಯಿಝು
ನಯನಾ ರಾಜೀವ್
|

Updated on: Jan 09, 2024 | 11:24 AM

Share

ಮಾಲ್ಡೀವ್ಸ್​ ಸಚಿವರು ಪ್ರಧಾನಿ ನರೇಂದ್ರ ಮೋದಿ(Narendra Modi) ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವುದು ಅಧ್ಯಕ್ಷ ಮೊಹಮ್ಮದ್ ಮುಯಿಝು(Mohamed Muizzu)ಗೆ ಭಾರಿ ದುಬಾರಿಯಾಗಿ ಪರಿಣಮಿಸಿದೆ.  ಭಾರತದೊಂದಿಗಿನ ಸಂಬಂಧವನ್ನು ಹದಗೆಡಿಸುತ್ತಿದೆ ಎಂದು ಮಾಲ್ಡೀವ್ಸ್​ನ ಪ್ರತಿಪಕ್ಷಗಳು ಅಲ್ಲಿನ ಸರ್ಕಾರವನ್ನು ದೂಷಿಸಿವೆ, ಜತೆಗೆ ಅಧ್ಯಕ್ಷ ಮುಯಿಝು ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಗೂ ತಯಾರಿ ನಡೆದಿದೆ.

ಮುಯಿಝು ಅವರನ್ನು ಪದಚ್ಯುತಿಗೊಳಿಸುವ ನಿರ್ಧಾರವನ್ನು ಸಂಸದೀಯ ಅಲ್ಪಸಂಖ್ಯಾತ ನಾಯಕ ಅಲಿ ಅಜೀಮ್ ತೆಗೆದುಕೊಂಡಿದ್ದಾರೆ. ಮುಯಿಝು ಅವರನ್ನು ಕುರ್ಚಿಯಿಂದ ಕೆಳಗಿಳಿಸಲೇಬೇಕು ಎಂದು ಮಾಲ್ಡೀವ್ಸ್​ ನಾಯಕರ ಬಳಿ ಮನವಿ ಮಾಡಿಕೊಳ್ಳುತ್ತಿದ್ದಾರೆ. ವಿದೇಶಾಂಗ ನೀತಿಯಲ್ಲಿ ಸ್ಥಿರತೆ ಕಾಪಾಡಿಕೊಳ್ಳಲು ನಮ್ಮ ಮಾಲ್ಡೀವಿಯನ್ ಡೆಮಾಕ್ರೆಟಿಕ್ ಪಕ್ಷ ಬದ್ಧವಾಗಿದೆ ಎಂದು ಅಜೀಮ್ ಹೇಳಿದ್ದಾರೆ.

ಹೆಚ್ಚಿನ ಸಂಖ್ಯೆಯ ಭಾರತೀಯ ಪ್ರವಾಸಿಗರು ಬುಕಿಂಗ್​ ಅನ್ನು ರದ್ದುಗೊಳಿಸುತ್ತಿದ್ದಾರೆ. ಟ್ರಾವೆಲ್​ ಕಂಪನಿಗಳು ಕೂಡ ಪ್ರತಿಭಟನೆಗಳಿದಿವೆ. ಮಾಲ್ಡೀವ್ಸ್​ ಪ್ರವಾಸೋದ್ಯಮ ಅಸೋಸಿಯೇಷನ್ ಕೂಡ ಸಚಿವರ ಹೇಳಿಕೆಯನ್ನು ಟೀಕಿಸಿವೆ.

ಮತ್ತಷ್ಟು ಓದಿ: India Maldives Row: ಶೀಘ್ರ ಭಾರತಕ್ಕೆ ಆಗಮಿಸಲಿದ್ದಾರೆ ಮಾಲ್ಡೀವ್ಸ್​ ಅಧ್ಯಕ್ಷ ಮೊಹಮ್ಮದ್ ಮುಯಿಝು

ಹಾಗೆಯೇ ಭಾರತ ನಮ್ಮ ಹತ್ತಿರದ ನೆರೆಯ ಮತ್ತು ಮಿತ್ರ ರಾಷ್ಟ್ರವಾಗಿದೆ, ಇತಿಹಾಸದಲ್ಲಿ ನಮ್ಮ ದೇಶವು ಬಿಕ್ಕಟ್ಟಿನಿಂದ ಕೂಡಿದ್ದಾಗ ಭಾರತವು ಸಹಾಯಕ್ಕೆ ಬಂದಿತ್ತು, ಮಾಲ್ಡೀವ್ಸ್​ನ ಪ್ರವಾಸೋದ್ಯಮ ಕ್ಷೇತ್ರದಲ್ಲೂ ಭಾರತ ಪ್ರಮುಖ ಪಾತ್ರವಹಿಸಿದೆ. ಹಾಗೆಯೇ ಕೋವಿಡ್ ಸಂದರ್ಭದಲ್ಲಿ ಪ್ರವಾಸೋದ್ಯಮ ಕ್ಷೇತ್ರ ಚೇತರಿಸಿಕೊಳ್ಳುವಲ್ಲಿಯೂ ಸಾಕಷ್ಟು ಸಹಾಯ ಮಾಡಿದೆ.

ಇದಾದ ಬಳಿಕ ಮಾಜಿ ಉಪಾಧ್ಯಕ್ಷ ಅದೀಬ್ ಮಾತನಾಡಿ, ಸಚಿವರು ಭಾರತದ ಕ್ಷಮೆಯಾಚಿಸಬೇಕು, ಈ ರಾಜತಾಂತ್ರಿಕ ಬಿಕ್ಕಟ್ಟನ್ನು ಎದುರಿಸಲು ಅಧ್ಯಕ್ಷ ಮುಯಿಝು ಪ್ರಧಾನಿ ಮೋದಿ ಬಳಿ ಹೋಗಬೇಕು ಎಂದು ಅದೀಬ್ ಹೇಳಿದ್ದಾರೆ.

ಘಟನೆ ಹಿನ್ನೆಲೆ ಏನು?

ಮಾಲ್ಡೀವ್ಸ್​ ಸರ್ಕಾರದ ಮೂವರು ಸಚಿವರು ಪ್ರಧಾನಿ ನರೇಂದ್ರ ಮೋದಿ ಲಕ್ಷದ್ವೀಪ ಭೇಟಿ ಕುರಿತು ಲೇವಡಿ ಮಾಡಿದ್ದರು. ಲಕ್ಷದ್ವೀಪವನ್ನು ಮಾಲ್ಡೀವ್ಸ್​ ಮಾಡುವುದು ನಿಮ್ಮ ಭ್ರಮೆಯಷ್ಟೆ, ಮಾಲ್ಡೀವ್ಸ್​ನಲ್ಲಿ ಸಿಗುವ ಮೂಲ ಸೌಕರ್ಯಗಳು ಲಕ್ಷದ್ವೀಪದಲ್ಲಿ ಸಿಗಲು ಸಾಧ್ಯವಿಲ್ಲ ಎಂದು ಸಚಿವರು ಹೇಳಿದ್ದರು. ಇದಾದ ಬಳಿಕ ಮೂವರನ್ನು ಸರ್ಕಾರ ಅಮಾನತುಗೊಳಿಸಿತ್ತು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್