India-Maldives Row: ಮಾಲ್ಡೀವ್ಸ್​ ಅಧ್ಯಕ್ಷ ಮೊಹಮ್ಮದ್ ಮುಯಿಝು ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಗೆ ಸಿದ್ಧತೆ

|

Updated on: Jan 09, 2024 | 11:24 AM

ಮಾಲ್ಡೀವ್ಸ್​ ಸಚಿವರು ಪ್ರಧಾನಿ ನರೇಂದ್ರ ಮೋದಿ(Narendra Modi) ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವುದು ಅಧ್ಯಕ್ಷ ಮೊಹಮ್ಮದ್ ಮುಯಿಝು(Mohamed Muizzu)ಗೆ ಭಾರಿ ದುಬಾರಿಯಾಗಿ ಪರಿಣಮಿಸಿದೆ.  ಭಾರತದೊಂದಿಗಿನ ಸಂಬಂಧವನ್ನು ಹದಗೆಡಿಸುತ್ತಿದೆ ಎಂದು ಮಾಲ್ಡೀವ್ಸ್​ನ ಪ್ರತಿಪಕ್ಷಗಳು ಅಲ್ಲಿನ ಸರ್ಕಾರವನ್ನು ದೂಷಿಸಿವೆ, ಜತೆಗೆ ಅಧ್ಯಕ್ಷ ಮುಯಿಝು ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಗೂ ತಯಾರಿ ನಡೆದಿದೆ.

India-Maldives Row: ಮಾಲ್ಡೀವ್ಸ್​ ಅಧ್ಯಕ್ಷ ಮೊಹಮ್ಮದ್ ಮುಯಿಝು ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಗೆ ಸಿದ್ಧತೆ
ಮಾಲ್ಡೀವ್ಸ್​ ಅಧ್ಯಕ್ಷ ಮೊಹಮ್ಮದ್ ಮುಯಿಝು
Follow us on

ಮಾಲ್ಡೀವ್ಸ್​ ಸಚಿವರು ಪ್ರಧಾನಿ ನರೇಂದ್ರ ಮೋದಿ(Narendra Modi) ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವುದು ಅಧ್ಯಕ್ಷ ಮೊಹಮ್ಮದ್ ಮುಯಿಝು(Mohamed Muizzu)ಗೆ ಭಾರಿ ದುಬಾರಿಯಾಗಿ ಪರಿಣಮಿಸಿದೆ.  ಭಾರತದೊಂದಿಗಿನ ಸಂಬಂಧವನ್ನು ಹದಗೆಡಿಸುತ್ತಿದೆ ಎಂದು ಮಾಲ್ಡೀವ್ಸ್​ನ ಪ್ರತಿಪಕ್ಷಗಳು ಅಲ್ಲಿನ ಸರ್ಕಾರವನ್ನು ದೂಷಿಸಿವೆ, ಜತೆಗೆ ಅಧ್ಯಕ್ಷ ಮುಯಿಝು ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಗೂ ತಯಾರಿ ನಡೆದಿದೆ.

ಮುಯಿಝು ಅವರನ್ನು ಪದಚ್ಯುತಿಗೊಳಿಸುವ ನಿರ್ಧಾರವನ್ನು ಸಂಸದೀಯ ಅಲ್ಪಸಂಖ್ಯಾತ ನಾಯಕ ಅಲಿ ಅಜೀಮ್ ತೆಗೆದುಕೊಂಡಿದ್ದಾರೆ. ಮುಯಿಝು ಅವರನ್ನು ಕುರ್ಚಿಯಿಂದ ಕೆಳಗಿಳಿಸಲೇಬೇಕು ಎಂದು ಮಾಲ್ಡೀವ್ಸ್​ ನಾಯಕರ ಬಳಿ ಮನವಿ ಮಾಡಿಕೊಳ್ಳುತ್ತಿದ್ದಾರೆ. ವಿದೇಶಾಂಗ ನೀತಿಯಲ್ಲಿ ಸ್ಥಿರತೆ ಕಾಪಾಡಿಕೊಳ್ಳಲು ನಮ್ಮ ಮಾಲ್ಡೀವಿಯನ್ ಡೆಮಾಕ್ರೆಟಿಕ್ ಪಕ್ಷ ಬದ್ಧವಾಗಿದೆ ಎಂದು ಅಜೀಮ್ ಹೇಳಿದ್ದಾರೆ.

ಹೆಚ್ಚಿನ ಸಂಖ್ಯೆಯ ಭಾರತೀಯ ಪ್ರವಾಸಿಗರು ಬುಕಿಂಗ್​ ಅನ್ನು ರದ್ದುಗೊಳಿಸುತ್ತಿದ್ದಾರೆ. ಟ್ರಾವೆಲ್​ ಕಂಪನಿಗಳು ಕೂಡ ಪ್ರತಿಭಟನೆಗಳಿದಿವೆ. ಮಾಲ್ಡೀವ್ಸ್​ ಪ್ರವಾಸೋದ್ಯಮ ಅಸೋಸಿಯೇಷನ್ ಕೂಡ ಸಚಿವರ ಹೇಳಿಕೆಯನ್ನು ಟೀಕಿಸಿವೆ.

ಮತ್ತಷ್ಟು ಓದಿ: India Maldives Row: ಶೀಘ್ರ ಭಾರತಕ್ಕೆ ಆಗಮಿಸಲಿದ್ದಾರೆ ಮಾಲ್ಡೀವ್ಸ್​ ಅಧ್ಯಕ್ಷ ಮೊಹಮ್ಮದ್ ಮುಯಿಝು

ಹಾಗೆಯೇ ಭಾರತ ನಮ್ಮ ಹತ್ತಿರದ ನೆರೆಯ ಮತ್ತು ಮಿತ್ರ ರಾಷ್ಟ್ರವಾಗಿದೆ, ಇತಿಹಾಸದಲ್ಲಿ ನಮ್ಮ ದೇಶವು ಬಿಕ್ಕಟ್ಟಿನಿಂದ ಕೂಡಿದ್ದಾಗ ಭಾರತವು ಸಹಾಯಕ್ಕೆ ಬಂದಿತ್ತು, ಮಾಲ್ಡೀವ್ಸ್​ನ ಪ್ರವಾಸೋದ್ಯಮ ಕ್ಷೇತ್ರದಲ್ಲೂ ಭಾರತ ಪ್ರಮುಖ ಪಾತ್ರವಹಿಸಿದೆ. ಹಾಗೆಯೇ ಕೋವಿಡ್ ಸಂದರ್ಭದಲ್ಲಿ ಪ್ರವಾಸೋದ್ಯಮ ಕ್ಷೇತ್ರ ಚೇತರಿಸಿಕೊಳ್ಳುವಲ್ಲಿಯೂ ಸಾಕಷ್ಟು ಸಹಾಯ ಮಾಡಿದೆ.

ಇದಾದ ಬಳಿಕ ಮಾಜಿ ಉಪಾಧ್ಯಕ್ಷ ಅದೀಬ್ ಮಾತನಾಡಿ, ಸಚಿವರು ಭಾರತದ ಕ್ಷಮೆಯಾಚಿಸಬೇಕು, ಈ ರಾಜತಾಂತ್ರಿಕ ಬಿಕ್ಕಟ್ಟನ್ನು ಎದುರಿಸಲು ಅಧ್ಯಕ್ಷ ಮುಯಿಝು ಪ್ರಧಾನಿ ಮೋದಿ ಬಳಿ ಹೋಗಬೇಕು ಎಂದು ಅದೀಬ್ ಹೇಳಿದ್ದಾರೆ.

ಘಟನೆ ಹಿನ್ನೆಲೆ ಏನು?

ಮಾಲ್ಡೀವ್ಸ್​ ಸರ್ಕಾರದ ಮೂವರು ಸಚಿವರು ಪ್ರಧಾನಿ ನರೇಂದ್ರ ಮೋದಿ ಲಕ್ಷದ್ವೀಪ ಭೇಟಿ ಕುರಿತು ಲೇವಡಿ ಮಾಡಿದ್ದರು. ಲಕ್ಷದ್ವೀಪವನ್ನು ಮಾಲ್ಡೀವ್ಸ್​ ಮಾಡುವುದು ನಿಮ್ಮ ಭ್ರಮೆಯಷ್ಟೆ, ಮಾಲ್ಡೀವ್ಸ್​ನಲ್ಲಿ ಸಿಗುವ ಮೂಲ ಸೌಕರ್ಯಗಳು ಲಕ್ಷದ್ವೀಪದಲ್ಲಿ ಸಿಗಲು ಸಾಧ್ಯವಿಲ್ಲ ಎಂದು ಸಚಿವರು ಹೇಳಿದ್ದರು. ಇದಾದ ಬಳಿಕ ಮೂವರನ್ನು ಸರ್ಕಾರ ಅಮಾನತುಗೊಳಿಸಿತ್ತು.

 

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ