AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವಾಸಿಗರಿಲ್ಲದೆ ಕಂಗೆಟ್ಟ ಮಾಲ್ಡೀವ್ಸ್​, ಜನರ ಸೆಳೆಯಲು ಭಾರತದಲ್ಲಿ ರೋಡ್​ ಶೋಗೆ ಸಜ್ಜು

ಪ್ರಧಾನಿ ನರೇಂದ್ರ ಮೋದಿ ಹಾಗೂ ಲಕ್ಷದ್ವೀಪದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ ಭಾರತೀಯರ ಕೆಂಗಣ್ಣಿಗೆ ಗುರಿಯಾಗಿದ್ದ ಮಾಲ್ಡೀವ್ಸ್​ ಇದೀಗ ಭಾರತೀಯರನ್ನು ಸೆಳೆಯಲು ಭಾರತದಲ್ಲಿ ರೋಡ್​ ಶೋ ನಡೆಸಲು ಸಿದ್ಧತೆ ನಡೆಸಿದೆ. ಲಕ್ಷದ್ವೀಪವನ್ನು ಅಭಿವೃದ್ಧಿ ಮಾಡಿದಾಕ್ಷಣ ಅದು ಮಾಲ್ಡೀವ್ಸ್​ ಆಗುವುದಿಲ್ಲ ಎಂದು ಮಾಲ್ಡೀವ್ಸ್​ನ ಸಚಿವರು ಹೇಳಿಕೆ ನೀಡಿದ್ದರು. ಇದಾದ ಬಳಿಕ ಭಾರತದ ಹಲವು ಮಂದಿ ಮಾಲ್ಡೀವ್ಸ್​ಗೆ ಹೋಗಬೇಕೆಂದುಕೊಂಡವರು ಕೂಡ ತಮ್ಮ ಪ್ರವಾಸ ರದ್ದುಗೊಳಿಸಿ ಲಕ್ಷದ್ವೀಪಕ್ಕೆ ತೆರಳಿದ್ದರು

ಪ್ರವಾಸಿಗರಿಲ್ಲದೆ ಕಂಗೆಟ್ಟ ಮಾಲ್ಡೀವ್ಸ್​, ಜನರ ಸೆಳೆಯಲು ಭಾರತದಲ್ಲಿ ರೋಡ್​ ಶೋಗೆ ಸಜ್ಜು
ಮಲ್ಡೀವ್ಸ್​
ನಯನಾ ರಾಜೀವ್
|

Updated on: Apr 12, 2024 | 2:53 PM

Share

ಪ್ರಧಾನಿ ನರೇಂದ್ರ ಮೋದಿ(Narendra Modi) ಹಾಗೂ ಲಕ್ಷದ್ವೀಪ( Lakshadweep)ದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ ಭಾರತೀಯರ ಕೆಂಗಣ್ಣಿಗೆ ಗುರಿಯಾಗಿದ್ದ ಮಾಲ್ಡೀವ್ಸ್(Maldives)​ ಇದೀಗ ಭಾರತೀಯರನ್ನು ಸೆಳೆಯಲು ಭಾರತದಲ್ಲಿ ರೋಡ್​ ಶೋ ನಡೆಸಲು ಸಿದ್ಧತೆ ನಡೆಸಿದೆ. ಲಕ್ಷದ್ವೀಪವನ್ನು ಅಭಿವೃದ್ಧಿ ಮಾಡಿದಾಕ್ಷಣ ಅದು ಮಾಲ್ಡೀವ್ಸ್​ ಆಗುವುದಿಲ್ಲ ಎಂದು ಮಾಲ್ಡೀವ್ಸ್​ನ ಸಚಿವರು ಹೇಳಿಕೆ ನೀಡಿದ್ದರು. ಇದಾದ ಬಳಿಕ ಭಾರತದ ಹಲವು ಮಂದಿ ಮಾಲ್ಡೀವ್ಸ್​ಗೆ ಹೋಗಬೇಕೆಂದುಕೊಂಡವರು ಕೂಡ ತಮ್ಮ ಪ್ರವಾಸ ರದ್ದುಗೊಳಿಸಿ ಲಕ್ಷದ್ವೀಪಕ್ಕೆ ತೆರಳಿದ್ದರು.

ಇಷ್ಟು ವರ್ಷ ಮಾಲ್ಡೀವ್ಸ್​ಗೆ ಭೇಟಿ ನೀಡುವವರ ಸಂಖ್ಯೆಯಲ್ಲಿ ಭಾರತದವರೇ ಹೆಚ್ಚು, ಮಾಲ್ಡೀವ್ಸ್ ಪ್ರವಾಸೋದ್ಯಮವನ್ನೇ ನಂಬಿಕೊಂಡಿದೆ. ಹಾಗಾಗಿ ಪ್ರವಾಸಿಗರಿಲ್ಲದೆ ಹೊಡೆತ ಬಿದ್ದಿರುವ ಹಿನ್ನೆಲೆಯಲ್ಲಿ ಭಾರತೀಯರನ್ನು ಸೆಳೆಯಲು ಮುಂದಾಗಿದೆ.

ಮಾಲ್ಡೀವ್ಸ್​ ಅಸೋಸಿಯೇಷನ್ ಆಫ್​ ಟ್ರಾವೆಲ್​ ಏಜೆಂಟ್ಸ್​ ಆ್ಯಂಡ್ ಟೂರ್ ಆಪರೇಟರ್ಸ್​, ಪ್ರಮುಖ ಪ್ರವಾಸೋದ್ಯಮ ಸಂಸ್ಥೆಯು ಈ ಘೋಷಣೆ ಮಾಡಿದೆ. ಆದರೆ ಯಾವ ಯಾವ ನಗರಗಳಲ್ಲಿ ಮತ್ತು ಯಾವಾಗ ರೋಡ್​ ಶೋ ನಡೆಯಲಿದೆ ಎನ್ನುವ ಮಾಹಿತಿ ನೀಡಿಲ್ಲ.

ಮತ್ತಷ್ಟು ಓದಿ: ಭಾರತದ ಧ್ವಜಕ್ಕೆ ಅಗೌರವ, ಕೊನೆಗೂ ಕ್ಷಮೆಯಾಚಿಸಿದ ಅಮಾನತುಗೊಂಡ ಮಾಲ್ಡೀವ್ಸ್​ ಸಚಿವೆ ಮರಿಯಮ್

ಭಾರತೀಯ ಪ್ರವಾಸಿಗರ ಕೊರತೆಯ ನಡುವೆ, ಎರಡು ದೇಶಗಳ ನಡುವಿನ ಪ್ರಯಾಣ ಮತ್ತು ಪ್ರವಾಸೋದ್ಯಮ ಸಹಕಾರವನ್ನು ಹೆಚ್ಚಿಸುವ ಕುರಿತು ಭಾರತದ ಹೈಕಮಿಷನ್ ಮುನು ಮಹಾವರ್ ಅವರೊಂದಿಗೆ ಮಾಟಾಟೊ ಚರ್ಚೆ ನಡೆಸಿದರು.

ಪ್ರಧಾನಿ ನರೇಂದ್ರ ಮೋದಿಯವರು ಜನವರಿ 3 ರಂದು ಲಕ್ಷದ್ವೀಪಕ್ಕೆ ಭೇಟಿ ನೀಡಿದ್ದರು. ಜನವರಿ 6ರಂದು ಅಲ್ಲಿನ ಕೆಲವು ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ಪ್ರಕೃತಿ ಸೌಂದರ್ಯದ ಜತೆಗೆ ಲಕ್ಷದ್ವೀಪದ ಶಾಂತಿಯೂ ಮೈಮರೆತಿದೆ ಎಂದಿದ್ದಾರೆ.

ಇದರ ನಂತರ ಲಕ್ಷದ್ವೀಪ ಮತ್ತು ಮಾಲ್ಡೀವ್ಸ್​ ನಡುವೆ ಹೋಲಿಕೆ ಪ್ರಾರಂಭವಾಯಿತು, ಈ ಕುರಿತು ಮಾಲ್ಡೀವ್ಸ್​ನ ಕೆಲವು ಸಚಿವರು ಭಾರತದ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್