AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವಾಸಿಗರಿಲ್ಲದೆ ಕಂಗೆಟ್ಟ ಮಾಲ್ಡೀವ್ಸ್​, ಜನರ ಸೆಳೆಯಲು ಭಾರತದಲ್ಲಿ ರೋಡ್​ ಶೋಗೆ ಸಜ್ಜು

ಪ್ರಧಾನಿ ನರೇಂದ್ರ ಮೋದಿ ಹಾಗೂ ಲಕ್ಷದ್ವೀಪದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ ಭಾರತೀಯರ ಕೆಂಗಣ್ಣಿಗೆ ಗುರಿಯಾಗಿದ್ದ ಮಾಲ್ಡೀವ್ಸ್​ ಇದೀಗ ಭಾರತೀಯರನ್ನು ಸೆಳೆಯಲು ಭಾರತದಲ್ಲಿ ರೋಡ್​ ಶೋ ನಡೆಸಲು ಸಿದ್ಧತೆ ನಡೆಸಿದೆ. ಲಕ್ಷದ್ವೀಪವನ್ನು ಅಭಿವೃದ್ಧಿ ಮಾಡಿದಾಕ್ಷಣ ಅದು ಮಾಲ್ಡೀವ್ಸ್​ ಆಗುವುದಿಲ್ಲ ಎಂದು ಮಾಲ್ಡೀವ್ಸ್​ನ ಸಚಿವರು ಹೇಳಿಕೆ ನೀಡಿದ್ದರು. ಇದಾದ ಬಳಿಕ ಭಾರತದ ಹಲವು ಮಂದಿ ಮಾಲ್ಡೀವ್ಸ್​ಗೆ ಹೋಗಬೇಕೆಂದುಕೊಂಡವರು ಕೂಡ ತಮ್ಮ ಪ್ರವಾಸ ರದ್ದುಗೊಳಿಸಿ ಲಕ್ಷದ್ವೀಪಕ್ಕೆ ತೆರಳಿದ್ದರು

ಪ್ರವಾಸಿಗರಿಲ್ಲದೆ ಕಂಗೆಟ್ಟ ಮಾಲ್ಡೀವ್ಸ್​, ಜನರ ಸೆಳೆಯಲು ಭಾರತದಲ್ಲಿ ರೋಡ್​ ಶೋಗೆ ಸಜ್ಜು
ಮಲ್ಡೀವ್ಸ್​
ನಯನಾ ರಾಜೀವ್
|

Updated on: Apr 12, 2024 | 2:53 PM

Share

ಪ್ರಧಾನಿ ನರೇಂದ್ರ ಮೋದಿ(Narendra Modi) ಹಾಗೂ ಲಕ್ಷದ್ವೀಪ( Lakshadweep)ದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ ಭಾರತೀಯರ ಕೆಂಗಣ್ಣಿಗೆ ಗುರಿಯಾಗಿದ್ದ ಮಾಲ್ಡೀವ್ಸ್(Maldives)​ ಇದೀಗ ಭಾರತೀಯರನ್ನು ಸೆಳೆಯಲು ಭಾರತದಲ್ಲಿ ರೋಡ್​ ಶೋ ನಡೆಸಲು ಸಿದ್ಧತೆ ನಡೆಸಿದೆ. ಲಕ್ಷದ್ವೀಪವನ್ನು ಅಭಿವೃದ್ಧಿ ಮಾಡಿದಾಕ್ಷಣ ಅದು ಮಾಲ್ಡೀವ್ಸ್​ ಆಗುವುದಿಲ್ಲ ಎಂದು ಮಾಲ್ಡೀವ್ಸ್​ನ ಸಚಿವರು ಹೇಳಿಕೆ ನೀಡಿದ್ದರು. ಇದಾದ ಬಳಿಕ ಭಾರತದ ಹಲವು ಮಂದಿ ಮಾಲ್ಡೀವ್ಸ್​ಗೆ ಹೋಗಬೇಕೆಂದುಕೊಂಡವರು ಕೂಡ ತಮ್ಮ ಪ್ರವಾಸ ರದ್ದುಗೊಳಿಸಿ ಲಕ್ಷದ್ವೀಪಕ್ಕೆ ತೆರಳಿದ್ದರು.

ಇಷ್ಟು ವರ್ಷ ಮಾಲ್ಡೀವ್ಸ್​ಗೆ ಭೇಟಿ ನೀಡುವವರ ಸಂಖ್ಯೆಯಲ್ಲಿ ಭಾರತದವರೇ ಹೆಚ್ಚು, ಮಾಲ್ಡೀವ್ಸ್ ಪ್ರವಾಸೋದ್ಯಮವನ್ನೇ ನಂಬಿಕೊಂಡಿದೆ. ಹಾಗಾಗಿ ಪ್ರವಾಸಿಗರಿಲ್ಲದೆ ಹೊಡೆತ ಬಿದ್ದಿರುವ ಹಿನ್ನೆಲೆಯಲ್ಲಿ ಭಾರತೀಯರನ್ನು ಸೆಳೆಯಲು ಮುಂದಾಗಿದೆ.

ಮಾಲ್ಡೀವ್ಸ್​ ಅಸೋಸಿಯೇಷನ್ ಆಫ್​ ಟ್ರಾವೆಲ್​ ಏಜೆಂಟ್ಸ್​ ಆ್ಯಂಡ್ ಟೂರ್ ಆಪರೇಟರ್ಸ್​, ಪ್ರಮುಖ ಪ್ರವಾಸೋದ್ಯಮ ಸಂಸ್ಥೆಯು ಈ ಘೋಷಣೆ ಮಾಡಿದೆ. ಆದರೆ ಯಾವ ಯಾವ ನಗರಗಳಲ್ಲಿ ಮತ್ತು ಯಾವಾಗ ರೋಡ್​ ಶೋ ನಡೆಯಲಿದೆ ಎನ್ನುವ ಮಾಹಿತಿ ನೀಡಿಲ್ಲ.

ಮತ್ತಷ್ಟು ಓದಿ: ಭಾರತದ ಧ್ವಜಕ್ಕೆ ಅಗೌರವ, ಕೊನೆಗೂ ಕ್ಷಮೆಯಾಚಿಸಿದ ಅಮಾನತುಗೊಂಡ ಮಾಲ್ಡೀವ್ಸ್​ ಸಚಿವೆ ಮರಿಯಮ್

ಭಾರತೀಯ ಪ್ರವಾಸಿಗರ ಕೊರತೆಯ ನಡುವೆ, ಎರಡು ದೇಶಗಳ ನಡುವಿನ ಪ್ರಯಾಣ ಮತ್ತು ಪ್ರವಾಸೋದ್ಯಮ ಸಹಕಾರವನ್ನು ಹೆಚ್ಚಿಸುವ ಕುರಿತು ಭಾರತದ ಹೈಕಮಿಷನ್ ಮುನು ಮಹಾವರ್ ಅವರೊಂದಿಗೆ ಮಾಟಾಟೊ ಚರ್ಚೆ ನಡೆಸಿದರು.

ಪ್ರಧಾನಿ ನರೇಂದ್ರ ಮೋದಿಯವರು ಜನವರಿ 3 ರಂದು ಲಕ್ಷದ್ವೀಪಕ್ಕೆ ಭೇಟಿ ನೀಡಿದ್ದರು. ಜನವರಿ 6ರಂದು ಅಲ್ಲಿನ ಕೆಲವು ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ಪ್ರಕೃತಿ ಸೌಂದರ್ಯದ ಜತೆಗೆ ಲಕ್ಷದ್ವೀಪದ ಶಾಂತಿಯೂ ಮೈಮರೆತಿದೆ ಎಂದಿದ್ದಾರೆ.

ಇದರ ನಂತರ ಲಕ್ಷದ್ವೀಪ ಮತ್ತು ಮಾಲ್ಡೀವ್ಸ್​ ನಡುವೆ ಹೋಲಿಕೆ ಪ್ರಾರಂಭವಾಯಿತು, ಈ ಕುರಿತು ಮಾಲ್ಡೀವ್ಸ್​ನ ಕೆಲವು ಸಚಿವರು ಭಾರತದ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ