AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವಾಸಿಗರಿಲ್ಲದೆ ಕಂಗೆಟ್ಟ ಮಾಲ್ಡೀವ್ಸ್​, ಜನರ ಸೆಳೆಯಲು ಭಾರತದಲ್ಲಿ ರೋಡ್​ ಶೋಗೆ ಸಜ್ಜು

ಪ್ರಧಾನಿ ನರೇಂದ್ರ ಮೋದಿ ಹಾಗೂ ಲಕ್ಷದ್ವೀಪದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ ಭಾರತೀಯರ ಕೆಂಗಣ್ಣಿಗೆ ಗುರಿಯಾಗಿದ್ದ ಮಾಲ್ಡೀವ್ಸ್​ ಇದೀಗ ಭಾರತೀಯರನ್ನು ಸೆಳೆಯಲು ಭಾರತದಲ್ಲಿ ರೋಡ್​ ಶೋ ನಡೆಸಲು ಸಿದ್ಧತೆ ನಡೆಸಿದೆ. ಲಕ್ಷದ್ವೀಪವನ್ನು ಅಭಿವೃದ್ಧಿ ಮಾಡಿದಾಕ್ಷಣ ಅದು ಮಾಲ್ಡೀವ್ಸ್​ ಆಗುವುದಿಲ್ಲ ಎಂದು ಮಾಲ್ಡೀವ್ಸ್​ನ ಸಚಿವರು ಹೇಳಿಕೆ ನೀಡಿದ್ದರು. ಇದಾದ ಬಳಿಕ ಭಾರತದ ಹಲವು ಮಂದಿ ಮಾಲ್ಡೀವ್ಸ್​ಗೆ ಹೋಗಬೇಕೆಂದುಕೊಂಡವರು ಕೂಡ ತಮ್ಮ ಪ್ರವಾಸ ರದ್ದುಗೊಳಿಸಿ ಲಕ್ಷದ್ವೀಪಕ್ಕೆ ತೆರಳಿದ್ದರು

ಪ್ರವಾಸಿಗರಿಲ್ಲದೆ ಕಂಗೆಟ್ಟ ಮಾಲ್ಡೀವ್ಸ್​, ಜನರ ಸೆಳೆಯಲು ಭಾರತದಲ್ಲಿ ರೋಡ್​ ಶೋಗೆ ಸಜ್ಜು
ಮಲ್ಡೀವ್ಸ್​
ನಯನಾ ರಾಜೀವ್
|

Updated on: Apr 12, 2024 | 2:53 PM

Share

ಪ್ರಧಾನಿ ನರೇಂದ್ರ ಮೋದಿ(Narendra Modi) ಹಾಗೂ ಲಕ್ಷದ್ವೀಪ( Lakshadweep)ದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ ಭಾರತೀಯರ ಕೆಂಗಣ್ಣಿಗೆ ಗುರಿಯಾಗಿದ್ದ ಮಾಲ್ಡೀವ್ಸ್(Maldives)​ ಇದೀಗ ಭಾರತೀಯರನ್ನು ಸೆಳೆಯಲು ಭಾರತದಲ್ಲಿ ರೋಡ್​ ಶೋ ನಡೆಸಲು ಸಿದ್ಧತೆ ನಡೆಸಿದೆ. ಲಕ್ಷದ್ವೀಪವನ್ನು ಅಭಿವೃದ್ಧಿ ಮಾಡಿದಾಕ್ಷಣ ಅದು ಮಾಲ್ಡೀವ್ಸ್​ ಆಗುವುದಿಲ್ಲ ಎಂದು ಮಾಲ್ಡೀವ್ಸ್​ನ ಸಚಿವರು ಹೇಳಿಕೆ ನೀಡಿದ್ದರು. ಇದಾದ ಬಳಿಕ ಭಾರತದ ಹಲವು ಮಂದಿ ಮಾಲ್ಡೀವ್ಸ್​ಗೆ ಹೋಗಬೇಕೆಂದುಕೊಂಡವರು ಕೂಡ ತಮ್ಮ ಪ್ರವಾಸ ರದ್ದುಗೊಳಿಸಿ ಲಕ್ಷದ್ವೀಪಕ್ಕೆ ತೆರಳಿದ್ದರು.

ಇಷ್ಟು ವರ್ಷ ಮಾಲ್ಡೀವ್ಸ್​ಗೆ ಭೇಟಿ ನೀಡುವವರ ಸಂಖ್ಯೆಯಲ್ಲಿ ಭಾರತದವರೇ ಹೆಚ್ಚು, ಮಾಲ್ಡೀವ್ಸ್ ಪ್ರವಾಸೋದ್ಯಮವನ್ನೇ ನಂಬಿಕೊಂಡಿದೆ. ಹಾಗಾಗಿ ಪ್ರವಾಸಿಗರಿಲ್ಲದೆ ಹೊಡೆತ ಬಿದ್ದಿರುವ ಹಿನ್ನೆಲೆಯಲ್ಲಿ ಭಾರತೀಯರನ್ನು ಸೆಳೆಯಲು ಮುಂದಾಗಿದೆ.

ಮಾಲ್ಡೀವ್ಸ್​ ಅಸೋಸಿಯೇಷನ್ ಆಫ್​ ಟ್ರಾವೆಲ್​ ಏಜೆಂಟ್ಸ್​ ಆ್ಯಂಡ್ ಟೂರ್ ಆಪರೇಟರ್ಸ್​, ಪ್ರಮುಖ ಪ್ರವಾಸೋದ್ಯಮ ಸಂಸ್ಥೆಯು ಈ ಘೋಷಣೆ ಮಾಡಿದೆ. ಆದರೆ ಯಾವ ಯಾವ ನಗರಗಳಲ್ಲಿ ಮತ್ತು ಯಾವಾಗ ರೋಡ್​ ಶೋ ನಡೆಯಲಿದೆ ಎನ್ನುವ ಮಾಹಿತಿ ನೀಡಿಲ್ಲ.

ಮತ್ತಷ್ಟು ಓದಿ: ಭಾರತದ ಧ್ವಜಕ್ಕೆ ಅಗೌರವ, ಕೊನೆಗೂ ಕ್ಷಮೆಯಾಚಿಸಿದ ಅಮಾನತುಗೊಂಡ ಮಾಲ್ಡೀವ್ಸ್​ ಸಚಿವೆ ಮರಿಯಮ್

ಭಾರತೀಯ ಪ್ರವಾಸಿಗರ ಕೊರತೆಯ ನಡುವೆ, ಎರಡು ದೇಶಗಳ ನಡುವಿನ ಪ್ರಯಾಣ ಮತ್ತು ಪ್ರವಾಸೋದ್ಯಮ ಸಹಕಾರವನ್ನು ಹೆಚ್ಚಿಸುವ ಕುರಿತು ಭಾರತದ ಹೈಕಮಿಷನ್ ಮುನು ಮಹಾವರ್ ಅವರೊಂದಿಗೆ ಮಾಟಾಟೊ ಚರ್ಚೆ ನಡೆಸಿದರು.

ಪ್ರಧಾನಿ ನರೇಂದ್ರ ಮೋದಿಯವರು ಜನವರಿ 3 ರಂದು ಲಕ್ಷದ್ವೀಪಕ್ಕೆ ಭೇಟಿ ನೀಡಿದ್ದರು. ಜನವರಿ 6ರಂದು ಅಲ್ಲಿನ ಕೆಲವು ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ಪ್ರಕೃತಿ ಸೌಂದರ್ಯದ ಜತೆಗೆ ಲಕ್ಷದ್ವೀಪದ ಶಾಂತಿಯೂ ಮೈಮರೆತಿದೆ ಎಂದಿದ್ದಾರೆ.

ಇದರ ನಂತರ ಲಕ್ಷದ್ವೀಪ ಮತ್ತು ಮಾಲ್ಡೀವ್ಸ್​ ನಡುವೆ ಹೋಲಿಕೆ ಪ್ರಾರಂಭವಾಯಿತು, ಈ ಕುರಿತು ಮಾಲ್ಡೀವ್ಸ್​ನ ಕೆಲವು ಸಚಿವರು ಭಾರತದ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ