AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಲ್ಡೀವ್ಸ್​​ ಪರಿಸರ ಸಚಿವ ಅಲಿ ಸೋಲಿಹ್​​ಗೆ ಇರಿತ ; ಹಲ್ಲೆಕೋರನ ಬಂಧನ

ರಾಜಧಾನಿ ಮಾಲೇಯಲ್ಲಿ ಈ ಘಟನೆ ನಡೆದಿದ್ದು, ಸಚಿವರ ಎಡ ಭುಜಕ್ಕೆ ಗಾಯವಾಗಿದೆ. ಹಲ್ಲೆಕೋರನನ್ನು ತಕ್ಷಣವೇ ಬಂಧಿಸಲಾಗಿದೆ.

ಮಾಲ್ಡೀವ್ಸ್​​ ಪರಿಸರ ಸಚಿವ ಅಲಿ ಸೋಲಿಹ್​​ಗೆ ಇರಿತ ; ಹಲ್ಲೆಕೋರನ ಬಂಧನ
ಸಚಿವರ ಮೇಲೆ ಹಲ್ಲೆ ನಡೆಸುತ್ತಿರುವ ದುಷ್ಕರ್ಮಿ
TV9 Web
| Edited By: |

Updated on:Aug 24, 2022 | 12:46 PM

Share

ಮಾಲೆ: ಮಾಲ್ಡೀವ್ಸ್​​ನ (Maldives) ಪರಿಸರ ಸಚಿವ ಅಲಿ ಸೋಲಿಹ್ (Ali Solih) ಮೇಲೆ ಸೋಮವಾರ ಮಧ್ಯಾಹ್ನ ಹಲ್ಲೆ ನಡೆದಿದ್ದು, ದುಷ್ಕರ್ಮಿಯೊಬ್ಬ ಸಚಿವರಿಗೆ ಕತ್ತಿಯಿಂದ ಇರಿದಿದ್ದಾನೆ. ರಾಜಧಾನಿ ಮಾಲೆೇಯಲ್ಲಿ ಈ ಘಟನೆ ನಡೆದಿದ್ದು, ಸಚಿವರ ಎಡ ಭುಜಕ್ಕೆ ಗಾಯವಾಗಿದೆ. ಹಲ್ಲೆಕೋರನನ್ನು ತಕ್ಷಣವೇ ಬಂಧಿಸಲಾಗಿದೆ. ಪರಿಸರ, ಹವಾಮಾನ ಬದಲಾವಣೆ ಮತ್ತು ತಂತ್ರಜ್ಞಾನ ಸಚಿವರಾಗಿದ್ದಾರೆ ಸೋಲಿಹ್. ಜುಮ್ಹೂರಿ ಪಕ್ಷದ ವಕ್ತಾರರೂ ಆಗಿದ್ದಾರೆ ಇವರು. ಮಾಲ್ಡೀವ್ಸ್ ಅಧ್ಯಕ್ಷ ಇಬ್ರಾಹಿಂ ಸೋಲಿಹ್ ನೇತೃತ್ವದ ಆಡಳಿತಾರೂಡ ಮಾಲ್ಡೀವಿಯನ್ ಡೆಮಾಕ್ರಟಿಕ್ ಪಾರ್ಟಿಯೊಂದಿಗೆ ಜಮ್ಹೂರಿ ಪಾರ್ಟಿ ಸರ್ಕಾರದಲ್ಲಿ ಪಾಲುದಾರರಾಗಿದ್ದಾರೆ.ದಿ ಟೈಮ್ಸ್ ಆಫ್ ಅಬ್ದು ಪ್ರಕಾರ ಸೋಲಿಹ್ ಹಲ್ಹುಮಾಲೆ ರಸ್ತೆಯಲ್ಲಿ ಮೊಟಾರ್ ಸೈಕಲ್ ಓಡಿಸುಕೊಂಡು ಹೋಗುತ್ತಿದ್ದಾಗ ಈ ದಾಳಿ ನಡೆದಿದೆ. ಸೋಲಿಹ್​​ನ ಕುತ್ತಿಗೆ ಮೇಲೆ ಇರಿಯುವ ಮುನ್ನ ಹಲ್ಲೆಕೋರ ಕುರಾನ್​​ನ ಕೆಲವು ಸಾಲುಗಳನ್ನು ಹೇಳಿದ್ದಾನೆ. ಕುತ್ತಿಗೆಗೆ ಇರಿಯಲು ನೋಡಿದ್ದರೂ ಅದು ಗುರಿ ತಪ್ಪಿ ಎಡಟ ಭುಜಕ್ಕೆ ತಾಗಿದೆ.

ದಾಳಿಕೋರನಿಂದ ರಕ್ಷಿಸಿಕೊಳ್ಳಲು ಸೋಲಿಹ್ ಮೋಟಾರ್‌ಸೈಕಲ್‌ನಿಂದ ಇಳಿದು ಓಡಿಹೋಗಿದ್ದು ಹುಲ್ಹುಮಾಲೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಾಲ್ಡೀವ್ಸ್, ಹಿಂದೂ ಮಹಾಸಾಗರದ ದ್ವೀಪಸಮೂಹ.  ಮೇ 2021 ರಲ್ಲಿ  ರಾಜಧಾನಿ ಮಾಲೆಯಲ್ಲಿ ಮಾಜಿ ಅಧ್ಯಕ್ಷ ಮೊಹಮ್ಮದ್ ನಶೀದ್ ಮನೆಯ ಹೊರಗೆ ಬಾಂಬ್ ಸ್ಫೋಟವಾಗಿದ್ದು ಅದರಲ್ಲಿ ಅವರು ಗಂಭೀರ ಗಾಯಗೊಂಡಿದ್ದರು.  ನಶೀದ್ ಅವರ ಕಾರಿನ ಬಳಿ ನಿಲ್ಲಿಸಿದ್ದ ಬೈಕ್‌ನಲ್ಲಿ ಸ್ಫೋಟಕವನ್ನು ಅಳವಡಿಸಲಾಗಿತ್ತು. ನಶೀದ್‌ಗೆ ಚಿಕಿತ್ಸೆ ನೀಡಿದ ನಂತರ, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಜರ್ಮನಿಗೆ ವಿಮಾನದಲ್ಲಿ ಸಾಗಿಸಲಾಯಿತು. ಹೆಚ್ಚುತ್ತಿರುವ ಇಸ್ಲಾಮಿಕ್ ಮೂಲಭೂತವಾದ ಮತ್ತು ಜಾಗತಿಕ ಉಗ್ರಗಾಮಿ ಸಂಘಟನೆಗಳಿಗೆ ನೇಮಕಾತಿಯಿಂದ ಮಾಲ್ಡೀವ್ಸ್ ಬೆದರಿಕೆಯನ್ನು ಎದುರಿಸುತ್ತಿದೆ.

ಸ್ಪೀಕರ್ ನಶೀದ್ ಜೊತೆಗೆ ಅಧ್ಯಕ್ಷ ಸೋಲಿಹ್ ನೇತೃತ್ವದ ಪ್ರಸ್ತುತ ಸರ್ಕಾರವು ಆಡಳಿತ ಮತ್ತು ಸಾಮಾಜಿಕ ನಿಯಮಗಳ ಕಡೆಗೆ ಅದರ ವಿಧಾನದಲ್ಲಿ ಪ್ರಜಾಪ್ರಭುತ್ವ ಮತ್ತು ಉದಾರವಾದಿಯಾಗಿದೆ. ಅಂತಾರಾಷ್ಟ್ರೀಯ ಬೆಂಬಲದೊಂದಿಗೆ ಹಿಂದೂ ಮಹಾಸಾಗರದ ರಾಷ್ಟ್ರದಲ್ಲಿ ಉಗ್ರ ಕೃತ್ಯಗಳ ಬೆಳವಣಿಗೆಯ ವಿರುದ್ಧ ಎಂಡಿಪಿ ಸುದೀರ್ಘ ಹೋರಾಟವನ್ನು ನಡೆಸುತ್ತಿದೆ.

Published On - 12:46 pm, Wed, 24 August 22

Follow Us
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ