AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕದಲ್ಲಿ ಹಂದಿ ಹೃದಯ ಕಸಿಗೊಳಗಾಗಿದ್ದ ವ್ಯಕ್ತಿ ಶಸ್ತ್ರಚಿಕಿತ್ಸೆ ನಡೆದು 2 ತಿಂಗಳ ನಂತರ ಸಾವು

ಅಮೆರಿಕ ವೈದ್ಯರು 2022ರ ಜನವರಿ 11 ರಂದು ವ್ಯಕ್ತಿಗೆ ಹಂದಿ ಹೃದಯ ಕಸಿ ಮಾಡಿದ್ದರು. ಆದರೆ ಹೃದಯ ಕಸಿ ಅಳವಡಿಕೆ ಯಶಸ್ವಿಯಾಗಿದ್ದರೂ ಡೇವಿಡ್ ಸಾವನ್ನಪ್ಪಿದ್ದಾರೆ. ಹೃದಯ ಕಸಿ ಆದ ಬಳಿಕ ಆರೋಗ್ಯ ಹದಗೆಡುತ್ತಾ ಬಂದಿತ್ತು ಎಂದು ಅಮೆರಿಕದ ಮೇರಿಲ್ಯಾಂಡ್ ಮೆಡಿಕಲ್ ಸೆಂಟರ್ ವಿವಿ ಪ್ರಕಟಣೆ ಹೊರಡಿಸಿದೆ.

ಅಮೆರಿಕದಲ್ಲಿ ಹಂದಿ ಹೃದಯ ಕಸಿಗೊಳಗಾಗಿದ್ದ ವ್ಯಕ್ತಿ ಶಸ್ತ್ರಚಿಕಿತ್ಸೆ ನಡೆದು 2 ತಿಂಗಳ ನಂತರ ಸಾವು
ಡೇವಿಡ್ ಬೆನೆಟ್(58)
TV9 Web
| Edited By: |

Updated on:Mar 09, 2022 | 11:01 PM

Share

ವಿಶ್ವದಲ್ಲೇ ಮೊದಲ ಬಾರಿಗೆ ಹಂದಿ ಹೃದಯ (Pig heart) ಕಸಿಗೊಳಗಾಗಿದ್ದ ವ್ಯಕ್ತಿ ಇಂದು ಸಾವನ್ನಪ್ಪಿದ್ದಾರೆ. ಹಂದಿ ಹೃದಯ ಕಸಿಗೊಳಗಾಗಿದ್ದ ಡೇವಿಡ್ ಬೆನೆಟ್(58) ಶಸ್ತ್ರಚಿಕಿತ್ಸೆ (Surgery) ನಡೆದು 2 ತಿಂಗಳ ನಂತರ ಮೃತಪಟ್ಟಿದ್ದಾರೆ. ಅಮೆರಿಕ ವೈದ್ಯರು(Doctor) 2022ರ ಜನವರಿ 11 ರಂದು ವ್ಯಕ್ತಿಗೆ ಹಂದಿ ಹೃದಯ ಕಸಿ ಮಾಡಿದ್ದರು. ಆದರೆ ಹೃದಯ ಕಸಿ ಅಳವಡಿಕೆ ಯಶಸ್ವಿಯಾಗಿದ್ದರೂ ಡೇವಿಡ್ ಸಾವನ್ನಪ್ಪಿದ್ದಾರೆ. ಹೃದಯ ಕಸಿ ಆದ ಬಳಿಕ ಆರೋಗ್ಯ ಹದಗೆಡುತ್ತಾ ಬಂದಿತ್ತು ಎಂದು ಅಮೆರಿಕದ ಮೇರಿಲ್ಯಾಂಡ್ ಮೆಡಿಕಲ್ ಸೆಂಟರ್ ವಿವಿ ಪ್ರಕಟಣೆ ಹೊರಡಿಸಿದೆ.

ತಳೀಯವಾಗಿ ಮಾರ್ಪಾಡಿಸಲಾದ ಹಂದಿಯೊಂದರ ಹೃದಯವನ್ನು 58 ವರ್ಷದ ವ್ಯಕ್ತಿಗೆ ಯಶಸ್ವಿಯಾಗಿ ಕಸಿ ಮಾಡುವ ಮೂಲಕ ಯುಎಸ್​ನ ಶಸ್ತ್ರಚಿಕಿತ್ಸಕರು ಇತಿಹಾಸ ಸೃಷ್ಟಿಸಿದ್ದರು. ಇದು ವೈದ್ಯಕೀಯ ಲೋಕದಲ್ಲಿಯೇ ಪ್ರಥಮವಾಗಿದೆ. ಹಾಗೇ, ಮುಂದೊಂದು ದಿನ ಅಂಗಾಂಗ ದಾನ ಕೊರತೆಯ ಗಂಭೀರತೆಯನ್ನು ಕಡಿಮೆ ಮಾಡಬಲ್ಲದು ಎಂಬ ಆಶಯವನ್ನೂ ಮೂಡಿಸಿತ್ತು. ಅಂದಹಾಗೆ, ಈ ಐತಿಹಾಸಿಕ ವೈದ್ಯಕೀಯ ಪ್ರಕ್ರಿಯೆ ನಡೆದಿದ್ದು ಯುಎಸ್​ನ ಮೇರಿಲ್ಯಾಂಡ್​ ಯೂನಿವರ್ಸಿಟಿಯ ಮೆಡಿಕಲ್ ಸ್ಕೂಲ್​​ನಲ್ಲಿ ಆದರೆ ಈಗ ಶಸ್ತ್ರಚಿಕಿತ್ಸೆ ನಡೆದ ಎರಡು ತಿಂಗಳ ನಂತರ ವ್ಯಕ್ತಿ ಮೃತಪಟ್ಟಿದ್ದಾರೆ ಎಂಬ ವಿಷಯ ಹೊರಬಿದ್ದಿದೆ.

ಮೇರಿಲ್ಯಾಂಡ್​ ನಿವಾಸಿ ಬೆನೆಟ್​ ಹೃದಯ ಮತ್ತು ಶ್ವಾಸಕೋಶ ಬೈಪಾಸ್​​ ಕಾರಣದಿಂದ ಹಲವು ತಿಂಗಳುಗಳಿಂದಲೂ ಹಾಸಿಗೆಯಲ್ಲೇ ಮಲಗಿದ್ದರು. ಇವರ ಆರೋಗ್ಯ ತುಂಬ ಕ್ಷೀಣವಾಗಿದ್ದ ಕಾರಣ, ಮತ್ತೊಂದು ಮನುಷ್ಯ ಹೃದಯವನ್ನೇ ಕಸಿ ಮಾಡಲು ಸಾಧ್ಯವಾಗಿರಲಿಲ್ಲ. ಹೀಗಾಗಿ ತಳಿ ಮಾರ್ಪಾಡು ಮಾಡಿದ ಹಂದಿಯ ಹೃದಯವನ್ನು ಕಸಿ ಮಾಡಲಾಗಿತ್ತು. ಆದರೆ 2 ತಿಂಗಳಲ್ಲಿಯೇ ಡೇವಿಡ್​ ಬೆನೆಟ್ ಮೃತಪಟ್ಟಿದ್ದಾರೆ.

ಇದು ಮಾಡು ಇಲ್ಲವೇ ಮಡಿ ಎಂಬಂಥ ಸರ್ಜರಿಯಾಗಿತ್ತು. ಕತ್ತಲಲ್ಲಿ ಹೊಡೆವ ಗುಂಡು. ತಾಗಿದರೆ ತಾಗಿತು-ಇಲ್ಲದಿದ್ದರೆ ಇಲ್ಲವೆಂಬಂಥ ಕಸಿಯಾಗಿತ್ತು. ಆದರೆ ನಾನು ಬದುಕಲು ಇರುವ ಕೊನೇ ಅವಕಾಶವೂ ಆಗಿತ್ತು. ಹಾಗಾಗಿ ಒಪ್ಪಿಕೊಂಡೆ ಎಂದು ಡೇವಿಡ್​ ಬೆನೆಟ್ ಸರ್ಜರಿ ಬಳಿಕ ಹೇಳಿದ್ದರು.

ಇದನ್ನೂ ಓದಿ: ಶಸ್ತ್ರಚಿಕಿತ್ಸೆ ಮಾಡದೇ ರೋಗಿಯನ್ನು ವೈದ್ಯರು ಸತಾಯಿಸುತ್ತಿರುವ ಆರೋಪ; ಜಿಮ್ಸ್ ಆಸ್ಪತ್ರೆಯಲ್ಲೊಂದು ಅಮಾನವೀಯ ಘಟನೆ

ಹುಚ್ಚು ನಾಯಿ ಕಚ್ಚಿರುವ ವಿಚಾರ ಮುಚ್ಚಿಟ್ಟ ಅಜ್ಜಿ -ಮೊಮ್ಮಗಳು ಬಲಿ, ಮದುವೆ ಮನೆಯಲ್ಲಿ ಚಿಕನ್ ಪೀಸ್ ಗಾಗಿ ಜಗಳ -ಒಬ್ಬನ ಸಾವು

Published On - 10:52 pm, Wed, 9 March 22

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು