AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕಿಕ್ಕಿರಿದು ನಿಂತ ಮೆಟ್ರೋ ರೈಲಿನಲ್ಲಿ ಸೀಟು ಪಡೆಯಲು ಯುವಕನ ಸಕತ್​ ಪ್ಲಾನ್​! ವಿಡಿಯೋ ವೈರಲ್​

ಯುಟ್ಯೂಬ್​ ಇಂಡಿಯನ್​ ಎಂಬ ಖಾತೆಯಿಂದ ವಿಡಿಯೋ ಹಂಚಿಕೊಳ್ಳಲಾಗಿದ್ದು ಲಕ್ಷಾಂತರ ವೀಕ್ಷಣೆಗಳನ್ನು ಪಡೆದುಕೊಂಡಿದೆ. ನೂರಾರು ಕಾಮೆಂಟ್​ಗಳು ಕೂಡಾ ಲಭ್ಯವಾಗಿದೆ.

Viral Video: ಕಿಕ್ಕಿರಿದು ನಿಂತ ಮೆಟ್ರೋ ರೈಲಿನಲ್ಲಿ ಸೀಟು ಪಡೆಯಲು ಯುವಕನ ಸಕತ್​ ಪ್ಲಾನ್​! ವಿಡಿಯೋ ವೈರಲ್​
ಜನಜಂಗುಳಿಯಲ್ಲಿ ಸೀಟು ಪಡೆಯಲು ಯುವಕನ ಪ್ಲಾನ್​!
TV9 Web
| Edited By: |

Updated on:Jun 13, 2021 | 5:11 PM

Share

ಬಸ್​, ರೈಲುಗಳಲ್ಲಿ ಜನಸಾಗರ. ಸೀಟು ಇಲ್ಲದೇ ಅದೆಷ್ಟೋ ದಿನ ನಿಂತೆ ಸಾಗಿದ್ದಿದೆ. ಕುಳಿತುಕೊಳ್ಳಲು ಒಂದು ಸೀಟು ಸಹ ಇರುವುದಿಲ್ಲ. ಅಷ್ಟೊಂದು ಜನಜಂಗುಳಿ ಎಂದು ಕೆಲವು ಬಾರಿ ಹೇಳಿರುವುದೂ ಇದೆ. ಹಾಗಿರುವಾಗ ಮುಂದಿನ ನಿಲ್ದಾಣದಲ್ಲಿ ಯಾರು ಇಳಿಯುತ್ತಾರೆ ಎಂದು ಕಾಯುತ್ತಾ ನಿಂತಿರುತ್ತೇವೆ. ಹಾಗೆಯೇ ಈ ಯುವಕನ ಪರಿಸ್ಥಿತಿ ಕೂಡಾ! ಕುಳಿತುಕೊಳ್ಳಲು ಮಾತ್ರ ಆಸನವೇ ಸಿಕ್ಕಿರುವುದಿಲ್ಲ. ಹಾಗಾಗಿ ಸೀಟು ಪಡೆದುಕೊಳ್ಳಲು ಯುವಕ ಸಕ್ಕತ್​​ ಪ್ಲಾನ್​ ಮಾಡಿ ಯಶಸ್ವಿಯಾಗಿದ್ದಾನೆ. ಈತನ ಪ್ಲಾನ್​ ನೋಡಿದ ನೆಟ್ಟಿಗರು ಬಾರೀ ಚಾಣಾಕಿ ಈತ ಎಂದು ತಮಾಷೆಯಾಗಿ ಹೇಳಿದ್ದಾರೆ.

ಸೋಷಿಯಲ್​ ಮಿಡಿಯಾದಲ್ಲಿ ಹರಿದಾಡುತ್ತಿದ್ದಂತೆಯೇ ಯುವಕನ ಪರ ಮತ್ತು ವಿರೋಧ ಚರ್ಚೆಗಳು ಕೇಳಿಬಂದಿವೆ. ಕೆಲವರು ಈತನ ಪ್ಲಾನ್​ ಸಕತ್ತಾಗಿದೆ ಎಂದು ಹೇಳಿದರೆ, ಇನ್ನು ಕೆಲವರು ಈತ ಮೋಸ ಮಾಡಿದಂತೆ ಆಗಿಲ್ವೇ? ಎಂದು ಪ್ರಶ್ನೆ ಮಾಡಿದ್ದಾರೆ. ಅದೇನೇ ಆಗಿದ್ದರೂ ಸಹ ಕಾಮೆಂಟ್ಸ್​ ವಿಭಾಗದಲ್ಲಿ ಹೆಚ್ಚು ಉಲ್ಲಾಸದ ಪ್ರತಿಕ್ರಿಯೆಗಳೇ ಬಂದಿವೆ.

ಈ ಯುವಕ ಮಾಡಿ ಪ್ಲಾನ್​ ಆದ್ರೂ ಏನು? ಎಂಬ ಕುತೂಹಲ ಕೆಣಕಿರಬೇಕಲ್ವೆ? ವಿಡಿಯೋದಲ್ಲಿ ನೀವು ನೋಡುವಂತೆ ಸುತ್ತಲೂ ಜನರು. ಕುಳಿತುಕೊಳ್ಳಲು ಒಂದು ಸೀಟ್​ ಕೂಡಾ ಇಲ್ಲ. ಪಕ್ಕದಲ್ಲಿ ಮಹಿಳೆಯರ ದಂಡೇ ನಿಂತಿದೆ. ತುಂಬಾ ಹೊತ್ತಿನಿಂದ ನಿಂತೇ ಇದ್ದ ಆ ಯುವಕ ಇದ್ದಕ್ಕಿದ್ದಂತೆಯೇ ನಡುಗಲು ಪ್ರಾರಂಭಿಸುತ್ತಾನೆ. ಆತನ ತಲೆಯ ಮೇಲಿರುವ ಟೋಪಿ ಕೆಳಗೆ ಬೀಳುತ್ತದೆ. ಇದನ್ನು ನೋಡಿದ ಸುತ್ತಮುತ್ತ ಕೂತ ಜನ ಕಂಗಾಲಾಗುತ್ತಾರೆ. ಎದುರಿಗೆ ಕೂತಿದ್ದ ಮಹಿಳೆಯೋರ್ವರು ಆತನನ್ನು ನೋಡಿ ಭಯಗೊಂಡು ದೂರ ಹೋಗುತ್ತಾರೆ.

ಯುಟ್ಯೂಬ್​ ಇಂಡಿಯನ್​ ಎಂಬ ಖಾತೆಯಿಂದ ವಿಡಿಯೋ ಹಂಚಿಕೊಳ್ಳಲಾಗಿದ್ದು ಲಕ್ಷಾಂತರ ವೀಕ್ಷಣೆಗಳನ್ನು ಪಡೆದುಕೊಂಡಿದೆ. ನೂರಾರು ಕಾಮೆಂಟ್​ಗಳು ಕೂಡಾ ಲಭ್ಯವಾಗಿದೆ. ಕೆಲವರು ಯುವಕನ ಪ್ಲಾನ್​ ನೋಡಿದ್ರೆ ನಗುಬರುತ್ತಿದೆ ಎಂದು ಪ್ರತಿಕ್ರಿಯೆ ಹಂಚಿಕೊಂಡಿದ್ದರೆ, ಇನ್ನು ಕೆಲವರು ಜನರಿಗೆ ಮೋಸಮಾಡಿದ್ದಾನೆ ಎಂದು ಅಭಿಪ್ರಾಯ ಕೇಳಿಬಂದಿದೆ.

ಇದನ್ನೂ ಓದಿ: 

Viral Video: ಮನೆ ಮುಂದೆ ನಿಲ್ಲಿಸಿದ ಕಾರು ನೋಡನೋಡುತ್ತಿದ್ದಂತೆಯೇ ಮಾಯ!

Viral Video: ನೀರು ತುಂಬಿ ಹರಿಯುತ್ತಿರುವ ರಸ್ತೆ ಮೇಲೆ ಗುತ್ತಿಗೆದಾರನ ಕೂರಿಸಿ, ತಲೆ ಮೇಲೆ ಕಸ ಸುರಿಸಿದ ಶಾಸಕ !

Published On - 5:09 pm, Sun, 13 June 21

Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ