AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಲೈಂಗಿಕ ಕ್ರಿಯೆ ಮುನ್ನ ಹಣ ಕೇಳ್ತಿದ್ದ ಪತ್ನಿ; ಬೇಸತ್ತು ವಿಚ್ಛೇದನ ನೀಡಿದ ಪತಿ

ಲೈಂಗಿಕ ಕ್ರಿಯೆಗೂ ಮುನ್ನ ನನ್ನ ಪತ್ನಿ ಹಣ ಕೇಳುತ್ತಾಳೆ ಎಂಬ ಕಾರಣಕ್ಕೆ ವ್ಯಕ್ತಿಯೊರ್ವ ವಿಚ್ಛೇದನ ನೀಡಿರುವ ಘಟನೆ ತೈವಾನ್‌ನಲ್ಲಿ ನಡೆದಿದೆ. ಇದೀಗ ಪತಿಯ ದೂರನ್ನು ಗಂಭೀರವಾಗಿ ಪರಿಗಣಿಸಿದ ಸ್ಥಳೀಯ ನ್ಯಾಯಾಲಯ ಆತನಿಗೆ ಆತನ ಹೆಂಡತಿಯಿಂದ ಡೈವೋರ್ಸ್‌ ನೀಡಿದೆ.

Viral News: ಲೈಂಗಿಕ ಕ್ರಿಯೆ ಮುನ್ನ ಹಣ ಕೇಳ್ತಿದ್ದ ಪತ್ನಿ; ಬೇಸತ್ತು ವಿಚ್ಛೇದನ ನೀಡಿದ ಪತಿ
ಲೈಂಗಿಕ ಕ್ರಿಯೆ ಮುನ್ನ ಹಣ ಕೇಳ್ತಿದ್ದ ಪತ್ನಿ; ಬೇಸತ್ತು ವಿಚ್ಛೇದನ ನೀಡಿದ ಪತಿ
ಅಕ್ಷತಾ ವರ್ಕಾಡಿ
|

Updated on: Aug 09, 2024 | 3:20 PM

Share

ತೈವಾನ್‌ನ ವ್ಯಕ್ತಿಯೊಬ್ಬ ತನ್ನ ಹೆಂಡತಿಯಿಂದ ವಿಚ್ಛೇದನವನ್ನು ಪಡೆದಿರುವ ಪ್ರಕರಣವೊಂದು ಎಲ್ಲೆಡೆ ಭಾರೀ ಸುದ್ದಿಯಲ್ಲಿದೆ. ವಿಚ್ಛೇದನ ಪಡೆಯುವುದರಲ್ಲಿ ಸುದ್ದಿಯಾಗುವಂತಹ ವಿಶೇಷತೆ ಏನಿದೆ ಅಂತ ನೀವು ಅಂದುಕೊಳ್ಳಬಹುದು. ಆದರೆ ವಿಚ್ಛೇದನಕ್ಕೆ ಪತಿ ನೀಡಿರುವ ಕಾರಣ ತಿಳಿದರೆ ನೀವು ಶಾಕ್​​​ ಆಗುವುದಂತೂ ಖಂಡಿತಾ. ಹೌದು, ಪ್ರತಿ ಬಾರಿ ಲೈಂಗಿಕ ಕ್ರಿಯೆಗೂ ಮುನ್ನ ಪತ್ನಿ ತನ್ನಿಂದ ಹಣದ ಬೇಡಿಕೆ ಇಡುತ್ತಾಳೆ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬ ಬೇಸತ್ತು ಪತ್ನಿಗೆ ವಿಚ್ಛೇದನ ನೀಡಿದ್ದಾನೆ.

2014 ರಲ್ಲಿ ಮದುವೆಯಾದ ಈ ಜೋಡಿಗೆ ಇಬ್ಬರು ಮಕ್ಕಳಿದ್ದಾರೆ. ಪ್ರಾರಂಭದಲ್ಲಿ ಎಲ್ಲವೂ ಚೆನ್ನಾಗಿದ್ದು, ಆದರೆ ವರ್ಷಗಳು ಕಳೆಯುತ್ತಿದ್ದಂತೆ ಪತಿ ಪತ್ನಿಯರಿಬ್ಬರ ನಡುವೆ ಮಾತುಕತೆ ಕಡಿಮೆಯಾಗಿದೆ. ಇದಲ್ಲದೇ ಪತಿ ದೈಹಿಕ ಸಂಪರ್ಕಕ್ಕಾಗಿ ಹತ್ತಿರ ಬಂದಾಗ ಪತ್ನಿ ದೂರವಾಗುತ್ತಿದ್ದಳು. ಆದರೆ ಇತ್ತೀಚಿನ ದಿನಗಳಲ್ಲಿ ಮಾತುಕತೆಯಿಂದ ಹಿಡಿದು ಲೈಂಗಿಕ ಕ್ರಿಯೆ ನಡೆಸಬೇಕಾದರೂ ಆಕೆ ಹಣದ ಬೇಡಿಕೆ ಇಡುತ್ತಿದ್ದಳು ಎಂಬುದು ತಿಳಿದುಬಂದಿದೆ.

ಇದನ್ನೂ ಓದಿ: ಏಕಕಾಲದಲ್ಲಿ ಇಬ್ಬರು ವೈದ್ಯರನ್ನು ಪ್ರೀತಿಯ ಬಲೆಗೆ ಬೀಳಿಸಿದ ನರ್ಸ್; ವಿಷಯ ತಿಳಿದು ಐಸಿಯುಗೆ ದಾಖಲಾದ ಡಾಕ್ಟರ್ಸ್

ಇದೀಗ ಪತಿಯ ದೂರಿನ ಆಧಾರದ ಮೇಲೆ ಸ್ಥಳೀಯ ನ್ಯಾಯಾಲಯ ಆತನಿಗೆ ಪತ್ನಿಯಿಂದ ಡೈವೋರ್ಸ್‌ ನೀಡಿದೆ. ಪ್ರತಿ ಬಾರಿ ಲೈಂಗಿಕತೆಯನ್ನು ಬಯಸಿದಾಗ ಅಥವಾ ಅವಳೊಂದಿಗೆ ಮಾತನಾಡಲು ಬಯಸಿದಾಗ ಆಕೆ NT$500 (Rs 1,260) ಬೇಡಿಕೆಯಿಡುತ್ತಿದ್ದಳು ಎಂದು ವರದಿಯಾಗಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?