AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೃದ್ಧನ ಮೃತದೇಹವನ್ನು ಫ್ರೀಜರ್​ನಲ್ಲಿರಿಸಿ, ಪಿಂಚಣಿ ಹಣದಲ್ಲಿ ಶಾಪಿಂಗ್ ಮಾಡುತ್ತಾ ಕಾಲ ಕಳೆಯುತ್ತಿದ್ದ ವ್ಯಕ್ತಿ ಕೊನೆಗೂ ತಪ್ಪೊಪ್ಪಿಕೊಂಡ್ರು

ವೃದ್ಧರೊಬ್ಬರ ಮೃತದೇಹವನ್ನು ಎರಡು ವರ್ಷಗಳ ಕಾಲ ಫ್ರೀಜರ್​ನಲ್ಲಿ ಇರಿಸಿದ್ದಾಗಿ ವ್ಯಕ್ತಿಯೊಬ್ಬರು ತಪ್ಪೊಪ್ಪಿಕೊಂಡಿದ್ದಾರೆ. ಜಾನ್​ ವೈನ್​ರೈಟ್​(71) 2018ರ ಸೆಪ್ಟೆಂಬರ್​ನಲ್ಲಿ ನಿಧನರಾಗಿದ್ದರು.

ವೃದ್ಧನ ಮೃತದೇಹವನ್ನು ಫ್ರೀಜರ್​ನಲ್ಲಿರಿಸಿ, ಪಿಂಚಣಿ ಹಣದಲ್ಲಿ ಶಾಪಿಂಗ್ ಮಾಡುತ್ತಾ ಕಾಲ ಕಳೆಯುತ್ತಿದ್ದ ವ್ಯಕ್ತಿ ಕೊನೆಗೂ ತಪ್ಪೊಪ್ಪಿಕೊಂಡ್ರು
ಮೃತದೇಹ
ನಯನಾ ರಾಜೀವ್
|

Updated on: May 04, 2023 | 8:56 AM

Share

ವೃದ್ಧರೊಬ್ಬರ ಮೃತದೇಹವನ್ನು ಎರಡು ವರ್ಷಗಳ ಕಾಲ ಫ್ರೀಜರ್​ನಲ್ಲಿ ಇರಿಸಿದ್ದಾಗಿ ವ್ಯಕ್ತಿಯೊಬ್ಬರು ತಪ್ಪೊಪ್ಪಿಕೊಂಡಿದ್ದಾರೆ. ಜಾನ್​ ವೈನ್​ರೈಟ್​(71) 2018ರ ಸೆಪ್ಟೆಂಬರ್​ನಲ್ಲಿ ನಿಧನರಾಗಿದ್ದರು. ಯುಕೆಯಲ್ಲಿ ಈ ಘಟನೆ ನಡೆದಿದೆ, ಅವರ ದೇಹವನ್ನು 2020ರ ಆಗಸ್ಟ್ 22ರವರೆಗೆ ವ್ಯಕ್ತಿಯೊಬ್ಬ ಫ್ರೀಜರ್​ನಲ್ಲಿ ಇರಿಸಲಾಗಿತ್ತು. ಡೇಮಿಯನ್ ಜಾನ್ಸನ್, 52 ಈ ಆರೋಪವನ್ನು ಈಗ ಒಪ್ಪಿಕೊಂಡಿದ್ದಾರೆ, ವೃದ್ಧರ ಮೃತದೇಹವನ್ನು ಫ್ರೀಜರ್​ನಲ್ಲಿರಿಸಿ ಅವರ ಹಣವನ್ನು ನಾನು ಉಪಯೋಗಿಸುತ್ತಿದ್ದೆ, ಶಾಪಿಂಗ್ ಮಾಡುತ್ತಿದ್ದೆ ಎಂದು ಹೇಳಿದ್ದಾರೆ.

ವೈನ್​ರೈಟ್ ಅವರ ಸಾವಿಗೆ ಏನು ಕಾರಣ ಎಂದು ಇನ್ನೂ ಬಹಿರಂಗವಾಗಿಲ್ಲ. ಇಬ್ಬರೂ ಬರ್ಮಿಂಗ್‌ಹ್ಯಾಮ್‌ನ ಡೌನ್‌ಟೌನ್ ಕ್ಲೀವ್‌ಲ್ಯಾಂಡ್ ಟವರ್, ಹೋಲಿವೆಲ್ ಹೆಡ್‌ನಲ್ಲಿರುವ ಫ್ಲಾಟ್‌ನಲ್ಲಿ ವಾಸಿಸುತ್ತಿದ್ದಾಗ ಅಪರಾಧ ನಡೆದಿದೆ ಎಂದು ಅಂದಾಜಿಸಲಾಗಿದೆ.

ಮತ್ತಷ್ಟು ಓದಿ: ಶ್ರದ್ಧಾ ರೀತಿಯಲ್ಲೇ ಮತ್ತೊಂದು ಕೊಲೆ: ಢಾಬಾದ ಫ್ರಿಡ್ಜ್‌ನಲ್ಲಿ ಬಾಲಕಿಯ ಶವ ಪತ್ತೆ

ಮತ್ತೊಂದು ಘಟನೆ: ಇತ್ತೀಚೆಗೆ ದೆಹಲಿಯ ಢಾಬಾದಲ್ಲಿ ಫ್ರೀಜರ್​ನಲ್ಲಿ ಮಹಿಳೆಯ ಶವ ಪತ್ತೆಯಾಗಿತ್ತು. 25 ವರ್ಷದ ಯುವತಿಯ ಶವ ಧಾಬಾದ ಫ್ರೀಜರ್‌ನಲ್ಲಿ ಪತ್ತೆಯಾಗಿದೆ. ಈ ಪ್ರಕರಣದಲ್ಲಿ ಪೊಲೀಸರು ಪ್ರೇಮ ಕೋನವನ್ನು ಶಂಕಿಸಿದ್ದು, ಮಹಿಳೆ ಸ್ವತಃ ಉತ್ತರನಗರದ ನಿವಾಗಿಯಾಗಿದ್ದಳು.

ದೆಹಲಿ ಪೊಲೀಸರ ಪ್ರಕಾರ, ಮಹಿಳೆಯನ್ನು ಎರಡು-ಮೂರು ದಿನಗಳ ಹಿಂದೆ ಕೊಂದಿರಬಹುದು ಮತ್ತು ಆಕೆಯ ದೇಹವನ್ನು ಢಾಬಾದ ಫ್ರೀಜರ್‌ನಲ್ಲಿ ಇರಿಸಿರಬಹುದು ಎಂದು ಪೊಲೀಸರು ಹೇಳಿದ್ದರು. ಆಘಾತಕಾರಿ ಪ್ರಕರಣ ಬೆಳಕಿಗೆ ಬಂದ ನಂತರ, ಡಾಬಾ ಮಾಲೀಕ ಸಾಹಿಲ್ ಗೆಹ್ಲೋಟ್ ಅವರನ್ನು ಬಂಧಿಸಲಾಗಿತ್ತು ಮತ್ತು ಪ್ರಮುಖ ಶಂಕಿತ ಎಂದು ಪರಿಗಣಿಸಲಾಗಿತ್ತು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್