AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುರಾನ್​ಗೆ ಅವಮಾನ ಆರೋಪ, ಪೊಲೀಸ್​ ಠಾಣೆ ಎದುರೇ ವ್ಯಕ್ತಿಯನ್ನು ಜೀವಂತವಾಗಿ ದಹಿಸಿದ ಜನರು

ಕುರಾನ್​ನ ಕೆಲವು ಪುಟಗಳನ್ನು ಸುಟ್ಟುಹಾಕಿದ್ದಾರೆ ಎಂದು ಆರೋಪಿಸಿ ಜನರ ಗುಂಪೊಂದು ವ್ಯಕ್ತಿಯೊಬ್ಬನ ಮೇಲೆ ಹಲ್ಲೆ ಮಾಡಿ, ಆತನನ್ನು ಜೀವಂತವಾಗಿ ಸುಟ್ಟು ಹಾಕಿರುವ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ.

ಕುರಾನ್​ಗೆ ಅವಮಾನ ಆರೋಪ, ಪೊಲೀಸ್​ ಠಾಣೆ ಎದುರೇ ವ್ಯಕ್ತಿಯನ್ನು ಜೀವಂತವಾಗಿ ದಹಿಸಿದ ಜನರು
TV9 Web
| Updated By: ನಯನಾ ರಾಜೀವ್|

Updated on: Jun 21, 2024 | 3:22 PM

Share

ಕುರಾನ್​(Quran)ಗೆ ಅವಮಾನ ಮಾಡಿದ್ದಾನೆಂದು ಆರೋಪಿಸಿ ಜನರು ವ್ಯಕ್ತಿಯೊಬ್ಬನನ್ನು ಪೊಲೀಸ್​ ಠಾಣೆ ಎದುರೇ ಜೀವಂತವಾಗಿ ದಹಿಸಿರುವ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ. ಕುರಾನ್​ಗೆ ಅವಮಾನ ಮಾಡಿದ್ದಾನೆಂದು ಸುಮಾರು 20 ಜನರು ಸೇರಿ ವ್ಯಕ್ತಿಗೆ ಬೆಂಕಿ ಹಚ್ಚಿ ಹತ್ಯೆ ಮಾಡಿದ್ದಾರೆ, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಕೋಪಗೊಂಡ ಜನರು ಮಸೀದಿಯಲ್ಲಿ ಮೈಕ್​ನಲ್ಲಿ ಘೋಷಣೆ ಮಾಡಿ ಎಲ್ಲರೂ ಸೇರುವಂತೆ ಮಾಡಿದರು, ಪೊಲೀಸ್​ ಠಾಣೆಯ ಸುತ್ತ ಜನರ ಗುಂಪು ಸುತ್ತುವರೆಯಿತು. ಪೊಲೀಸ್​ ಕಸ್ಟಡಿಯಲ್ಲಿರುವ ವ್ಯಕ್ತಿಯನ್ನು ಎಳೆದುತಂದು ಪೊಲೀಸರೆದುರೇ ಬೆಂಕಿ ಹಚ್ಚಿ ಹತ್ಯೆ ಮಾಡಲಾಗಿದೆ.

ಕುರಾನ್‌ಗೆ ಅವಮಾನ ಮಾಡಲಾಗಿದೆ ಎಂಬ ಸುದ್ದಿ ಜನರಲ್ಲಿ ಹರಡಿದ ತಕ್ಷಣ ಅವರು ಪೊಲೀಸ್ ಠಾಣೆಗೆ ಆಗಮಿಸಿ ಪೊಲೀಸ್​ ಠಾಣೆಯಲ್ಲಿದ್ದ ವ್ಯಕ್ತಿಯನ್ನು ಎಳೆದುತಂದು ಹತ್ಯೆ ಮಾಡಿದ್ದಾರೆ. ಪೊಲೀಸ್​ ಅಧಿಕಾರಿ ಮಾತನಾಡಿ, ಮೃತರು ಸಿಯಾಲ್‌ಕೋಟ್‌ನ ನಿವಾಸಿಯಾಗಿದ್ದು, ಮಾದಯನ್ ತೆಹಸಿಲ್‌ನಲ್ಲಿ ಪವಿತ್ರ ಕುರಾನ್‌ನ ಕೆಲವು ಪುಟಗಳನ್ನು ಸುಟ್ಟುಹಾಕಿದ್ದಾರೆ ಎಂದು ಆರೋಪಿಸಲಾಗಿದೆ.

ಮತ್ತಷ್ಟು ಓದಿ: ಏ 20ರಂದು ಬೇಲೂರಿನ ಶ್ರೀಚನ್ನಕೇಶವ ಸ್ವಾಮಿ ರಥೋತ್ಸವ: ಕುರಾನ್ ಪಠಣಕ್ಕೆ ಅವಕಾಶ ನೀಡದಂತೆ ಒತ್ತಾಯ

ಜನರನ್ನು ನಿಯಂತ್ರಿಸಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ, ಆದರೂ ಅಷ್ಟು ದೊಡ್ಡ ಗುಂಪನ್ನು ನಿಯಂತ್ರಿಸಲು ಪೊಲೀಸರು ವಿಫಲರಾಗಿದ್ದಾರೆ. ಗುಂಪು ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ನಡೆಸಿ ಬೆಂಕಿ ಹಚ್ಚಿ ವ್ಯಕ್ತಿಯನ್ನು ಥಳಿಸಿ ಹೊರಗೆ ಕರೆದೊಯ್ದಿದೆ. ವ್ಯಕ್ತಿಯ ಸಾವಿನ ನಂತರ, ಗುಂಪು ಅವನ ದೇಹಕ್ಕೆ ಬೆಂಕಿ ಹಚ್ಚಿತು.

ಜನರು ವ್ಯಕ್ತಿ ಸಾಯುವವರೆಗೂ ದೊಡ್ಡಯಿಂದ ಹೊಡೆದಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಪಾಕಿಸ್ತಾನದ ಹಲವರು ಇದನ್ನು ಖಂಡಿಸಿದ್ದಾರೆ.

ಖೈಬರ್ ಪಖ್ತುಂಖ್ವಾ ಮುಖ್ಯಮಂತ್ರಿ ಅಲಿ ಅಮೀನ್ ಈ ಘಟನೆಯ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ ಮತ್ತು ಪ್ರದೇಶದಲ್ಲಿ ಪರಿಸ್ಥಿತಿಯನ್ನು ನಿಯಂತ್ರಿಸಲು ತುರ್ತು ಕ್ರಮಗಳನ್ನು ತೆಗೆದುಕೊಳ್ಳುವಂತೆ ಪೊಲೀಸರಿಗೆ ಸೂಚಿಸಿದ್ದಾರೆ. ಜನರು ಪೊಲೀಸ್​ ಠಾಣೆಗೆ ಬೆಂಕಿ ಹಚ್ಚಿದ್ದರಿಂದ ಪೊಲೀಸರು ಕೂಡ ತಮ್ಮ ಜೀವವನ್ನು ಉಳಿಸಿಕೊಳ್ಳಲು ಓಡಿಹೋಗಬೇಕಾಯಿತು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!