ಕಚೇರಿಯಲ್ಲಿ ಹೆಚ್ಚು ಹೊತ್ತು ಬ್ರೇಕ್​ ತೆಗೆದುಕೊಳ್ತಾರೆ ಎಂದು ಮಹಿಳಾ ಸಹೋದ್ಯೋಗಿಯನ್ನು ಕೊಂದ ವ್ಯಕ್ತಿ

 ಕಚೇರಿಯಲ್ಲಿ ಹೆಚ್ಚು ಹೊತ್ತು ಬ್ರೇಕ್​ ತೆಗೆದುಕೊಳ್ಳುತ್ತಾರೆ ಎಂದು ಕೋಪಗೊಂಡ ವ್ಯಕ್ತಿಯೊಬ್ಬ ಮಹಿಳಾ ಸಹೋದ್ಯೋಗಿಯನ್ನು ಕೊಲೆ ಮಾಡಿರುವ ಘಟನೆ ಅಮೆರಿಕದಲ್ಲಿ ನಡೆದಿದೆ. ಟ್ರಾವಿಸ್ ಮೆರಿಲ್ ಎಂಬಾತ ತಮ್ಹರಾ ಕೊಲಾಜೋ ಎಂಬುವವರನ್ನು ಹತ್ಯೆ ಮಾಡಿದ್ದಾರೆ. ಕೊಲಾಜೋ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿದ್ದು, ಆಕೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಕಚೇರಿಯಲ್ಲಿ ಹೆಚ್ಚು ಹೊತ್ತು ಬ್ರೇಕ್​ ತೆಗೆದುಕೊಳ್ತಾರೆ ಎಂದು ಮಹಿಳಾ ಸಹೋದ್ಯೋಗಿಯನ್ನು ಕೊಂದ ವ್ಯಕ್ತಿ
Follow us
|

Updated on:Oct 24, 2024 | 8:13 PM

ಆಫೀಸ್ ಎಂದ ಮೇಲೆ ಕೆಲವರು ಕೆಡಿಮೆ ಹೊತ್ತು, ಇನ್ನೂ ಕೆಲವರು ಹೆಚ್ಚು ಹೊತ್ತು ಬ್ರೇಕ್​ಗಳನ್ನು ತೆಗೆದುಕೊಳ್ಳುವುದು ಸಾಮಾನ್ಯ, ಕೆಲವರು ಊಟ ಮಾಡಿ ಕೂಡಲೇ ತಮ್ಮ ಸ್ಥಳಕ್ಕೆ ಬಂದರೆ ಇನ್ನೂ ಕೆಲವರು ವಾಕಿಂಗ್ ಮಾಡುವ ಅಭ್ಯಾಸವೂ ಇರುತ್ತದೆ. ಆದರೆ ಅದೇ ಕಾರಣಕ್ಕೆ ಒಂದು ಕೊಲೆಯೇ ನಡೆಯುತ್ತದೆ ಎಂದರೆ ಅದು ಆಶ್ಚರ್ಯಕರ ಸಂಗತಿ.

ಕಚೇರಿಯಲ್ಲಿ ಹೆಚ್ಚು ಹೊತ್ತು ಬ್ರೇಕ್​ ತೆಗೆದುಕೊಳ್ಳುತ್ತಾರೆ ಎಂದು ಕೋಪಗೊಂಡ ವ್ಯಕ್ತಿಯೊಬ್ಬ ಮಹಿಳಾ ಸಹೋದ್ಯೋಗಿಯನ್ನು ಕೊಲೆ ಮಾಡಿರುವ ಘಟನೆ ಅಮೆರಿಕದಲ್ಲಿ ನಡೆದಿದೆ. ಟ್ರಾವಿಸ್ ಮೆರಿಲ್ ಎಂಬಾತ ತಮ್ಹರಾ ಕೊಲಾಜೋ ಎಂಬುವವರನ್ನು ಹತ್ಯೆ ಮಾಡಿದ್ದಾರೆ. ಕೊಲಾಜೋ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿದ್ದು, ಆಕೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಮೆರಿಲ್‌ನನ್ನು ಬಂಧಿಸಿ ಕೊಲಾಜೊ ಅವರ ಜೀವವನ್ನು ಉಳಿಸಲು ಪ್ರಯತ್ನಿಸಿದರೂ ಅದು ಸಾಧ್ಯವಾಗಿಲ್ಲ. ಆಕೆ ಹೆಚ್ಚೆಚ್ಚು ಹೊತ್ತು ಬ್ರೇಕ್​ ತೆಗೆದುಕೊಳ್ಳುವುದು ಮತ್ತು ಕೆಲಸದ ಮೇಲೆ ಗಮನ ಕಡಿಮೆಯಾಗಿದ್ದರ ಹಿನ್ನೆಲೆಯಲ್ಲಿ ಕೋಪಗೊಂಡು ತಾನು ಈ ಕೆಲಸ ಮಾಡಿದ್ದೇನೆ ಎಂದು ಆರೋಪಿ ಒಪ್ಪಿಕೊಂಡಿದ್ದಾನೆ.

ಅಷ್ಟೇ ಅಲ್ಲದೆ ಬ್ರೇಕ್ ತೆಗೆದುಕೊಂಡು ಊಟಕ್ಕೆ ಹೋದಾಗಲೂ ಕೂಡ ಆತ ಆಕೆಯನ್ನೇ ನೋಡುತ್ತಾ ಕುಳಿತಿರುತ್ತಿದ್ದ ಹೀಗಾಗಿ ಆಕೆ ಒಮ್ಮೆ ಬೈದಿದ್ದಳು. ಅಷ್ಟೇ ಅಲ್ಲದೆ ಎಚ್​ಆರ್ ಬಳಿ ದೂರು ಕೂಡ ನೀಡಿದ್ದಳು. ಆತನಿಗೆ ಎಚ್​ಆರ್​ ಬೈದಿದ್ದ ಕಾರಣ ಕೋಪಗೊಂಡ ಆತ ಗನ್ ಖರೀದಿಸಿ ಮನೆಯಲ್ಲೇ ಪ್ರಾಕ್ಟೀಸ್ ಕೂಡ ಮಾಡಿದ್ದ.

ಕೊಲಾಜೋ ಊಟಕ್ಕೆ ಹೋಗುವಾಗ ಆತ ಕೂಡ ಆಕೆಯನ್ನು ಹಿಂಬಾಲಿಸಿದ್ದ, ಜತೆಗೆ ಕೂತು ಊಟ ಮಾಡಿದ್ದಾರೆ, ಇನ್ನೇನು ಹೊರಡಬೇಕು ಎನ್ನುವಷ್ಟರಲ್ಲಿ ಬಂದೂಕಿನಿಂದ ಹಲವು ಬಾರಿ ಗುಂಡು ಹಾರಿಸಿದ್ದಾನೆ. ಆತನನ್ನು ಪೊಲೀಸರು ಕೂಡಲೇ ಬಂಧಿಸಿದ್ದು, ಜೈಲಿಗೆ ಕಳುಹಿಸಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:13 pm, Thu, 24 October 24

ಯೋಗೇಶ್ವರ್​ರನ್ನು ಬಿಜೆಪಿಯಲ್ಲಿ ಚೆನ್ನಾಗಿ ನೋಡಿಕೊಳ್ಳಲಿಲ್ಲ: ಸೋಮಶೇಖರ್
ಯೋಗೇಶ್ವರ್​ರನ್ನು ಬಿಜೆಪಿಯಲ್ಲಿ ಚೆನ್ನಾಗಿ ನೋಡಿಕೊಳ್ಳಲಿಲ್ಲ: ಸೋಮಶೇಖರ್
ಪಕ್ಷಾಂತರಿ ಯೋಗೇಶ್ವರ್ ಬಿಜೆಪಿಯಲ್ಲಿ ಒಬ್ಬ ನೆಂಟನಂತಿದ್ದರು: ಆರ್ ಅಶೋಕ
ಪಕ್ಷಾಂತರಿ ಯೋಗೇಶ್ವರ್ ಬಿಜೆಪಿಯಲ್ಲಿ ಒಬ್ಬ ನೆಂಟನಂತಿದ್ದರು: ಆರ್ ಅಶೋಕ
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಚಾರ ಮಾಡುವ ಅವಕಾಶ ಎಲ್ಲರಿಗೂ ಇದೆ: ಶಾಸಕ
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಚಾರ ಮಾಡುವ ಅವಕಾಶ ಎಲ್ಲರಿಗೂ ಇದೆ: ಶಾಸಕ
ಕುಸಿದು ಬಿದ್ದ ಹನುಮಂತ; ಟಾಸ್ಕ್​ ವೇಳೆ ನಡೆಯಿತು ಅವಘಡ
ಕುಸಿದು ಬಿದ್ದ ಹನುಮಂತ; ಟಾಸ್ಕ್​ ವೇಳೆ ನಡೆಯಿತು ಅವಘಡ
ಅಪ್ಪನನ್ನು ಕೂರಿಸಿಕೊಂಡು ಸ್ಕೂಟಿ ಓಡಿಸಿದ ಬಾಲಕಿ; ವಿಡಿಯೋಗೆ ಭಾರೀ ವಿರೋಧ
ಅಪ್ಪನನ್ನು ಕೂರಿಸಿಕೊಂಡು ಸ್ಕೂಟಿ ಓಡಿಸಿದ ಬಾಲಕಿ; ವಿಡಿಯೋಗೆ ಭಾರೀ ವಿರೋಧ
ಚನ್ನಪಟ್ಟಣಕ್ಕೆ 2 ಬಾರಿ ಶಾಸಕನಾಗಿದ್ದ ಕುಮಾರಸ್ವಾಮಿ ಕೊಡುಗೆ ಏನು?ಶಿವಕುಮಾರ್
ಚನ್ನಪಟ್ಟಣಕ್ಕೆ 2 ಬಾರಿ ಶಾಸಕನಾಗಿದ್ದ ಕುಮಾರಸ್ವಾಮಿ ಕೊಡುಗೆ ಏನು?ಶಿವಕುಮಾರ್
ಗ್ಯಾರಂಟಿ ಯೋಜನೆಗಳನ್ನು ಮುಂದಿಟ್ಟುಕೊಂಡು ವೋಟು ಕೇಳುತ್ತೇನೆ: ಅನ್ನಪೂರ್ಣ
ಗ್ಯಾರಂಟಿ ಯೋಜನೆಗಳನ್ನು ಮುಂದಿಟ್ಟುಕೊಂಡು ವೋಟು ಕೇಳುತ್ತೇನೆ: ಅನ್ನಪೂರ್ಣ
ಕಾಡಿಬೇಡಿ ರೋಹಿತ್ ಶರ್ಮಾರನ್ನು ಒಪ್ಪಿಸಿ ಔಟ್ ಮಾಡಿದ ಸರ್ಫರಾಝ್ ಖಾನ್
ಕಾಡಿಬೇಡಿ ರೋಹಿತ್ ಶರ್ಮಾರನ್ನು ಒಪ್ಪಿಸಿ ಔಟ್ ಮಾಡಿದ ಸರ್ಫರಾಝ್ ಖಾನ್
ಜನ ಕುಮಾರಸ್ವಾಮಿ ಹೊರಗಿನವ ಅಂದುಕೊಂಡಿದ್ದರೆ 2 ಬಾರಿ ಗೆಲ್ಲಿಸುತ್ತಿದ್ವರೇ?
ಜನ ಕುಮಾರಸ್ವಾಮಿ ಹೊರಗಿನವ ಅಂದುಕೊಂಡಿದ್ದರೆ 2 ಬಾರಿ ಗೆಲ್ಲಿಸುತ್ತಿದ್ವರೇ?
ಬಾಬುಸಾಬ್​ ​ಪಾಳ್ಯ ದುರಂತ: ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿದ್ದರಾಮಯ್ಯ
ಬಾಬುಸಾಬ್​ ​ಪಾಳ್ಯ ದುರಂತ: ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿದ್ದರಾಮಯ್ಯ