AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಂಜೋ ಅಬೆಗೆ ಸರ್ಕಾರೀ ಗೌರವದ ಅಂತಿಮಸಂಸ್ಕಾರ ವಿರೋಧಿಸಿ ವ್ಯಕ್ತಿಯೊಬ್ಬ ಬೆಂಕಿ ಹೊತ್ತಿಸಿಕೊಂಡು ಆತ್ಮಹತ್ಯೆಗೆ ಪ್ರಯತ್ನಿಸಿದ!

ಹಾಗೆ ನೋಡಿದರೆ, ಜಪಾನಿನಲ್ಲಿ ಸರ್ಕಾರೀ ಗೌರವಗಳೊಂದಿಗೆ ಮೃತ ಗಣ್ಯರ ಅಂತ್ಯ ಸಂಸ್ಕಾರ ನಡೆಸುವುದು ಬಹಳ ಅಪರೂಪ. ಅಬೆಯವರ ಅಂತಿಮ ವಿಧಿ ವಿಧಾನಗಳು ಹಾಗೆ ನಡೆಸಲು ನಿರ್ಧರಿಸಿದ್ದು ವಿವಾದಕ್ಕೀಡಾಗಿದೆ.

ಶಿಂಜೋ ಅಬೆಗೆ ಸರ್ಕಾರೀ ಗೌರವದ ಅಂತಿಮಸಂಸ್ಕಾರ ವಿರೋಧಿಸಿ ವ್ಯಕ್ತಿಯೊಬ್ಬ ಬೆಂಕಿ ಹೊತ್ತಿಸಿಕೊಂಡು ಆತ್ಮಹತ್ಯೆಗೆ ಪ್ರಯತ್ನಿಸಿದ!
ಸಾಂದರ್ಭಿಕ ಚಿತ್ರ
TV9 Web
| Updated By: ಅರುಣ್​ ಕುಮಾರ್​ ಬೆಳ್ಳಿ|

Updated on: Sep 21, 2022 | 12:09 PM

Share

ಕಳೆದ ಬುಧವಾರದಂದು ಜಪಾನ್ ಪ್ರಧಾನ ಮಂತ್ರಿ ಫುಮಿಯೋ ಕಿಶಿದಾ (Fumio Kishida) ಅವರ ಕಚೇರಿ ಎದುರುಗಡೆ ಬೆಂಕಿ ಹೊತ್ತಿಸಿಕೊಂಡು ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದ ವ್ಯಕ್ತಿಯೊಬ್ಬನನ್ನು ಮೂರ್ಛಾವಸ್ಥೆಯ (unconscious) ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಿರುವ ಪ್ರಕರಣ ತಡವಾಗಿ ವರದಿಯಾಗಿದೆ. ಆದರೆ, ಪ್ರಧಾನ ಮಂತ್ರಿಗಳ ಕಚೇರಿಯು (PMO) ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಮಾಹಿತಿಯನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಿಲ್ಲ.

ಆತ್ಮಹತ್ಯೆಗೆ ಪ್ರಯತ್ನಿಸಿದ ವ್ಯಕ್ತಿ ಅಲ್ಲಿದ್ದ ಪೊಲೀಸ್ ಅಧಿಕಾರಿಯೊಬ್ಬರಿಗೆ, ಹತ್ಯೆಗೊಳಗಾದ ಮಾಜಿ ಪ್ರಧಾನಮಂತ್ರಿ ಶಿಂಜೋ ಅಬೆ ಅವರ ಅಂತಿಮ ಸಂಸ್ಕಾರವನ್ನು ಸರ್ಕಾರೀ ಗೌರವಗಳೊಂದಿಗೆ ನೆರವೇರಿಸುತ್ತಿರುವುದನ್ನು ವಿರೋಧಿಸಿ ಪ್ರಾಣತ್ಯಾಗ ಮಾಡುತ್ತಿರುವುದಾಗಿ ಹೇಳಿದನೆಂದು ಅಸಾಹಿ ಟಿವಿ ಚ್ಯಾನೆಲ್ ವರದಿ ಮಾಡಿದೆ.

ಹಾಗೆ ನೋಡಿದರೆ, ಜಪಾನಿನಲ್ಲಿ ಸರ್ಕಾರೀ ಗೌರವಗಳೊಂದಿಗೆ ಮೃತ ಗಣ್ಯರ ಅಂತ್ಯ ಸಂಸ್ಕಾರ ನಡೆಸುವುದು ಬಹಳ ಅಪರೂಪ. ಅಬೆಯವರ ಅಂತಿಮ ವಿಧಿ ವಿಧಾನಗಳು ಹಾಗೆ ನಡೆಸಲು ನಿರ್ಧರಿಸಿದ್ದು ವಿವಾದಕ್ಕೀಡಾಗಿದೆ. ಜಪಾನಿನಲ್ಲಿ ನಡೆಸಲಾದ ಜನಮತವೊಂದರ ಪ್ರಕಾರ ಅರ್ಧಕ್ಕಿಂತ ಹೆಚ್ಚು ಜನ ಸಕಲ ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನೆರವೇರಿಸುವುದನ್ನು ವಿರೋಧಿಸಿದ್ದಾರೆ.

ಆತ್ಮಹತ್ಯೆಗೆ ಪ್ರಯತ್ನಿಸಿದ ವ್ಯಕ್ತಿ ಬೆಂಕಿಯಿಂದ ಸುತ್ತುವರಿಯಲ್ಪಟ್ಟಿದ್ದನ್ನು ನೋಡಿದ ಜನರು ಪೊಲೀಸರಿಗೆ ಫೋನ್ ಮಾಡಿದ್ದರು ಎಂದು ಕ್ಯುಡೊ ಸುದ್ದಿಸಂಸ್ಥೆ ವರದಿ ಮಾಡಿದೆ.

ಘಟನೆ ನಡೆದ ಸ್ಥಳದಲ್ಲಿ ಆತ್ಮಹತ್ಯೆಗೆ ಪ್ರಯತ್ನಿಸಿದ ವ್ಯಕ್ತಿ ಬರೆದಿರುವ ನೋಟ್ ಒಂದು ಸಿಕ್ಕಿದ್ದು ಅವನು ಅಬೆಯವರ ಅಂತ್ಯಸಂಸ್ಕಾರಕ್ಕೆ ವಿರೋಧ ವ್ಯಕ್ತಪಡಿಸಿದ್ದಾನೆ.

ಅತಿ ದೀರ್ಘಾವಧಿವರಗೆ ಜಪಾನ್ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದ ಅಬೆ ಅವರನ್ನು ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾಗ ಗುಂಡಿಟ್ಟು ಕೊಲ್ಲಲಾಗಿತ್ತು.

ಅವರ ಗೌರವಾರ್ಥ ಸಾರ್ಬಜನಿಕ ದೇಣಿಗೆ ಮೂಲಕ ಏರ್ಪಡಿಸಲಾಗಿರುವ ಸರ್ಕಾರೀ ಮರ್ಯಾದೆಗಳೊಂದಿಗಿನ ಅಂತಿಮ ವಿಧಿವಿಧಾನಗಳು ಸೆಪ್ಟೆಂಬರ್ 27 ರಂದು ನಡೆಯಲಿವೆ.

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?