AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಂಡತಿಯನ್ನ ಸಾವಿನ ದವಡೆಯಿಂದ ಉಳಿಸಲು Sharkಗೇ ಗೂಸಾ ಕೊಟ್ಟ ಪತಿರಾಯ!

ಗೂಸಾ ಮೇಲೆ ಗೂಸಾ. ಹೌದು, ಶಾರ್ಕ್​ ಬಾಯಲ್ಲಿ ಸಿಲುಕಿದ್ದ ತನ್ನ ಹೆಂಡತಿಯನ್ನ ರಕ್ಷಿಸಲು ಪತಿರಾಯನೊಬ್ಬ ಅದಕ್ಕೆ ಸರಿಯಾಗಿ ಗೂಸಾ ಕೊಟ್ಟಿರುವ ಸ್ವಾರಸ್ಯಕರ ಪ್ರಸಂಗ ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ವೀಕೆಂಡ್​ ಮಸ್ತಿಗೆಂದು ಸಿಡ್ನಿಯ ಸಮುದ್ರ ತೀರಕ್ಕೆ ಬಂದಿದ್ದ ದಂಪತಿ ನೀರಿನಲ್ಲಿ ಸರ್ಫಿಂಗ್​ ಮಾಡಲು ಮುಂದಾದರು. ಇದೇ ವೇಳೆ ಅಲ್ಲೇ ಈಜುತ್ತಿದ್ದ 10 ಅಡಿ ಉದ್ದದ ಗ್ರೇಟ್​ ವೈಟ್​ ಶಾರ್ಕ್ ಒಂದು ಮಹಿಳೆಯ ಕಾಲಿಗೆ ಬಾಯಿ ಹಾಕಿ ಆಕೆಯನ್ನ ಸಮುದ್ರದೊಳಗೆ ಕಸಿದುಕೊಂದು ಹೋಗಲು ಮುಂದಾಗಿದೆ. ಹೆಂಡತಿಯ […]

ಹೆಂಡತಿಯನ್ನ ಸಾವಿನ ದವಡೆಯಿಂದ ಉಳಿಸಲು Sharkಗೇ ಗೂಸಾ ಕೊಟ್ಟ ಪತಿರಾಯ!
KUSHAL V
|

Updated on: Aug 16, 2020 | 3:12 PM

Share

ಗೂಸಾ ಮೇಲೆ ಗೂಸಾ. ಹೌದು, ಶಾರ್ಕ್​ ಬಾಯಲ್ಲಿ ಸಿಲುಕಿದ್ದ ತನ್ನ ಹೆಂಡತಿಯನ್ನ ರಕ್ಷಿಸಲು ಪತಿರಾಯನೊಬ್ಬ ಅದಕ್ಕೆ ಸರಿಯಾಗಿ ಗೂಸಾ ಕೊಟ್ಟಿರುವ ಸ್ವಾರಸ್ಯಕರ ಪ್ರಸಂಗ ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ಬೆಳಕಿಗೆ ಬಂದಿದೆ.

ಕಳೆದ ಶನಿವಾರ ವೀಕೆಂಡ್​ ಮಸ್ತಿಗೆಂದು ಸಿಡ್ನಿಯ ಸಮುದ್ರ ತೀರಕ್ಕೆ ಬಂದಿದ್ದ ದಂಪತಿ ನೀರಿನಲ್ಲಿ ಸರ್ಫಿಂಗ್​ ಮಾಡಲು ಮುಂದಾದರು. ಇದೇ ವೇಳೆ ಅಲ್ಲೇ ಈಜುತ್ತಿದ್ದ 10 ಅಡಿ ಉದ್ದದ ಗ್ರೇಟ್​ ವೈಟ್​ ಶಾರ್ಕ್ ಒಂದು ಮಹಿಳೆಯ ಕಾಲಿಗೆ ಬಾಯಿ ಹಾಕಿ ಆಕೆಯನ್ನ ಸಮುದ್ರದೊಳಗೆ ಕಸಿದುಕೊಂದು ಹೋಗಲು ಮುಂದಾಗಿದೆ.

ಹೆಂಡತಿಯ ಚೀತ್ಕಾರ ಕೇಳಿದ ಪತಿ ಮಾರ್ಕ್​ ಱಪ್ಲೇ ಕೂಡಲೇ ಆಕೆಯ ಬಳಿಗೆ ಈಜಿಬಂದು ಶಾರ್ಕ್ ಬಾಯಲ್ಲಿ ಸಿಲುಕಿದ್ದ ಪತ್ನಿಯ ಬಲಗಾಲನ್ನು ಹೊರತೆಗೆಯಲು ಪ್ರಯತ್ನಿಸಿದ. ಆದರೆ, ಹೆಂಡತಿಯ ಕಾಲನ್ನು ಶಾರ್ಕ್​ ಬಲವಾಗಿ ಕಚ್ಚಿದ್ದರಿಂದ ಅದು ಸಾಧ್ಯವಾಗಲಿಲ್ಲ. ಇದೇ ವೇಳೆ ಸಿಟ್ಟಿಗೆದ್ದ ಮಾರ್ಕ್ ಶಾರ್ಕ್​ಗೆ ಹಿಗ್ಗಾಮುಗ್ಗಾ ಗೂಸಾ ಕೊಟ್ಟಿದ್ದಾನಂತೆ.

ಮಾರ್ಕ್​ನ ಆಕ್ರಮಣದಿಂದ ಕೊಂಚ ವಿಚಲಿತಗೊಂಡ ಶಾರ್ಕ್ ಪತ್ನಿಯ ಕಾಲನ್ನು ಬಿಡುಗಡೆ ಮಾಡಿ ಅಲ್ಲಿಂದ ಪರಾರಿಯಾಗಿದೆ. ಇತರರ ಸಹಾಯದಿಂದ ಆಕೆಯನ್ನ ತೀರಕ್ಕೆ ಕರೆತಂದ ಮಾರ್ಕ್​ ಕೂಡಲೇ ಪತ್ನಿಯನ್ನ ಆಸ್ಪತ್ರೆಗೆ ಸೇರಿಸಿ ಅವಳ ಪ್ರಾಣ ಉಳಿಸಿದ್ದಾನೆ. ಒಟ್ನಲ್ಲಿ, ಸಾವಿನ ದವಡೆಯಿಂದ ಹೆಂಡತಿಯನ್ನ ಪಾರುಮಾಡಿದ ಮಾರ್ಕ್​ ನಿಜಕ್ಕೂ ಗಂಡೆದೆಯ ಗಂಡು ಅಲ್ಲ ಗಂಡೆದೆಯ ಗಂಡ ಎಂದು ತೋರಿಸಿಕೊಟ್ಟಿದ್ದಾನೆ.

ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!