AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಡಹಗಲೇ ಹೆಂಡ್ತಿಗೆ ಚಾಕು ಇರಿದು ಕೊಲೆಗೈದ, Dubai ಕೋರ್ಟ್​ ಕೊಟ್ಟ ಶಿಕ್ಷೆ ಏನು ಗೊತ್ತಾ?

ಪತ್ನಿಯ ಶೀಲ ಶಂಕಿಸಿ ಆಕೆಯನ್ನ ಕೊಲೆಗೈದ ಪತಿ ಮಹಾಶಯನಿಗೆ ಜೀವಾವಧಿ ಶಿಕ್ಷೆ ವಿಧಿಸಿರುವ ಪ್ರಕರಣ ಮಧ್ಯಪ್ರಾಚ್ಯದ ದುಬೈ ನಗರದಲ್ಲಿ ಬೆಳಕಿಗೆ ಬಂದಿದೆ. 44 ವರ್ಷದ ಕೇರಳ ಮೂಲದ ಉಘೇಶ್ ಜೀವಾವಧಿ ಶಿಕ್ಷೆ ಪಡೆದ ಪತಿರಾಯ. ಕಳೆದ ಸೆಪ್ಟಂಬರ್​ನಲ್ಲಿ ತನ್ನ ಪತ್ನಿ, 40 ವರ್ಷದ ವಿದ್ಯಾಚಂದ್ರನ್​ ಪತಿ ಉಘೇಶ್​, ವಿದ್ಯಾರ ಆಫೀಸ್​ ಪಾರ್ಕಿಂಗ್​ ಏರಿಯಾದಲ್ಲಿ ಹಾಡಹಗಲೇ ಚಾಕು ಇರಿದು ಪರಾರಿಯಾಗಿದ್ದ. ರಕ್ತದ ಮಡುವಿನಲ್ಲಿ ಬಿದ್ದಿದ್ದ ವಿದ್ಯಾ ತೀವ್ರ ರಕ್ತಸ್ರಾವದಿಂದ ಅಸುನೀಗಿದ್ದರು. ಇನ್ನು ಆರೋಪಿಯ ಬೆನ್ನುಹತ್ತಿದ್ದ ಪೊಲೀಸರು ಉಘೇಶ್​ನನ್ನ ಅಂದೇ […]

ಹಾಡಹಗಲೇ ಹೆಂಡ್ತಿಗೆ ಚಾಕು ಇರಿದು ಕೊಲೆಗೈದ,  Dubai ಕೋರ್ಟ್​ ಕೊಟ್ಟ ಶಿಕ್ಷೆ ಏನು ಗೊತ್ತಾ?
ಪ್ರಾತಿನಿಧಿಕ ಚಿತ್ರ
KUSHAL V
| Edited By: |

Updated on:Jul 27, 2020 | 9:36 PM

Share

ಪತ್ನಿಯ ಶೀಲ ಶಂಕಿಸಿ ಆಕೆಯನ್ನ ಕೊಲೆಗೈದ ಪತಿ ಮಹಾಶಯನಿಗೆ ಜೀವಾವಧಿ ಶಿಕ್ಷೆ ವಿಧಿಸಿರುವ ಪ್ರಕರಣ ಮಧ್ಯಪ್ರಾಚ್ಯದ ದುಬೈ ನಗರದಲ್ಲಿ ಬೆಳಕಿಗೆ ಬಂದಿದೆ. 44 ವರ್ಷದ ಕೇರಳ ಮೂಲದ ಉಘೇಶ್ ಜೀವಾವಧಿ ಶಿಕ್ಷೆ ಪಡೆದ ಪತಿರಾಯ.

ಕಳೆದ ಸೆಪ್ಟಂಬರ್​ನಲ್ಲಿ ತನ್ನ ಪತ್ನಿ, 40 ವರ್ಷದ ವಿದ್ಯಾಚಂದ್ರನ್​ ಪತಿ ಉಘೇಶ್​, ವಿದ್ಯಾರ ಆಫೀಸ್​ ಪಾರ್ಕಿಂಗ್​ ಏರಿಯಾದಲ್ಲಿ ಹಾಡಹಗಲೇ ಚಾಕು ಇರಿದು ಪರಾರಿಯಾಗಿದ್ದ. ರಕ್ತದ ಮಡುವಿನಲ್ಲಿ ಬಿದ್ದಿದ್ದ ವಿದ್ಯಾ ತೀವ್ರ ರಕ್ತಸ್ರಾವದಿಂದ ಅಸುನೀಗಿದ್ದರು. ಇನ್ನು ಆರೋಪಿಯ ಬೆನ್ನುಹತ್ತಿದ್ದ ಪೊಲೀಸರು ಉಘೇಶ್​ನನ್ನ ಅಂದೇ ಬಂಧಿಸಿದ್ದರು.

ಪತ್ನಿಯ ಶೀಲದ ಮೇಲೆ ಪತಿರಾಯನ ಶಂಕೆ ಇಬ್ಬರು ಹೆಣ್ಣುಮಕ್ಕಳ ತಾಯಿಯಾಗಿದ್ದ ವಿದ್ಯಾ, ಕೆಲವು ವರ್ಷಗಳಿಂದ ಉದ್ಯೋಗಕ್ಕಾಗಿ ದುಬೈನಲ್ಲಿ ನೆಲೆಸಿದ್ದರಂತೆ. ಬಹಳ ಕಷ್ಟಪಟ್ಟು ಹಣ ಕೂಡಿಟ್ಟು ಮನೆಗೆ ಕಳಿಸುತ್ತಿದ್ದರಂತೆ. ಆದರೆ, ಉಘೇಶ್​ ಕಳೆದ ಕೆಲವು ವರ್ಷಗಳಿಂದ ಸಾಕಷ್ಟು ಕಿರುಕುಳ ನೀಡುತ್ತಿದ್ದ ಎಂದು ಮೃತಳ ಕುಟುಂಬದವರು ಆರೋಪಿಸಿದ್ದಾರೆ. ವಿದ್ಯಾ ಮತ್ತೊಂದು ಪುರುಷನೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂಬ ಗುಮಾನಿ ಸಹ ಅವನಿಗೆ ಇತ್ತಂತೆ.

ಅನೈತಿಕ ಗುಮಾನಿ, ಸಾಯಿಸಲೆಂದೇ ದುಬೈಗೆ ಹೋಗಿದ್ದ​! ಆದರೆ, ಆರೋಪಿ ನೀಡಿರುವ ಹೇಳಿಕೆ ಪ್ರಕಾರ ವಿದ್ಯಾಳ ಅನೈತಿಕ ಸಂಬಂಧದ ಬಗ್ಗೆ ಆಕೆಯ ಕಚೇರಿಯ ಮ್ಯಾನೇಜರ್​ ತನಗೆ ಮೆಸೇಜ್​ ಕಳಿಸಿದ್ದ. ಹಾಗಾಗಿ, ಇದರ ಬಗ್ಗೆ ವಿಚಾರಿಸಲು ಆ ದೇಶದ ವೀಸಾ ಪಡೆದು ದುಬೈಗೆ ಬಂದಿದ್ದೆ. ವಿದ್ಯಾಳ ಮ್ಯಾನೇಜರ್​ನೊಟ್ಟಿಗೆ ಇದರ ಬಗ್ಗೆ ಮಾತಡುವಾಗ ಅವಳು ಅಲ್ಲಿಗೆ ಬಂದಿದ್ದಳು. ಆಗ ವಿಚಾರ ತಿಳಿದು ಆಕೆಗೆ ಸಿಟ್ಟು ಬಂದು ನನ್ನೊಂದಿಗೆ ಜಗಳ ತೆಗೆದಿದ್ದಳು. ಈ ನಡುವೆ ಮಾತಿಗೆ ಮಾತು ಬೆಳೆದು ಕೊನೆಗೆ ಉಘೇಶ್​ ಅವಳಿಗೆ ಚಾಕು ಇರಿದು ಪರಾರಿಯಾಗಿದ್ದ.

ಇದೀಗ, ಉಘೇಶ್​ಗೆ ಅಲ್ಲಿನ ನ್ಯಾಯಲಯ ಜೀವಾವಧಿ ಶಿಕ್ಷೆ ವಿಧಿಸಿರೋದು ವಿದ್ಯಾಳ ಕುಟುಂಬಕ್ಕೆ ನೆಮ್ಮದಿ ತಂದಿದೆ. ಉಘೇಶ್​ ತನ್ನ 25 ವರ್ಷ ಕಾಲಾವಧಿಯ ಜೀವಾವಧಿ ಶಿಕ್ಷೆ ಮುಗಿಸಿದ ನಂತರ ಆತನನ್ನು ಭಾರತಕ್ಕೆ ಕಳುಹಿಸಬೇಕು ಎಂದು ದುಬೈ ಕೋರ್ಟ್​ ಆದೇಶ ನೀಡಿದೆ.

Published On - 11:05 am, Mon, 27 July 20

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!