AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vatican Church: ವ್ಯಾಟಿಕನ್ ಚರ್ಚ್‌ನಲ್ಲಿ ಬೆತ್ತಲೆಯಾಗಿ ಕಾಣಿಸಿಕೊಂಡ ವ್ಯಕ್ತಿ, ಕೊಟ್ಟ ಕಾರಣ ಇದು

ವ್ಯಾಟಿಕನ್ ಸಿಟಿಯ ಸೇಂಟ್​ ಪೀಟರ್ಸ್​ ಚರ್ಚ್​(Church) ನಲ್ಲಿ ವ್ಯಕ್ತಿಯೊಬ್ಬರು ಬೆತ್ತಲಾಗಿ ಕಾಣಿಸಿಕೊಂಡಿದ್ದು, ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಮಾಧ್ಯಮ ವರದಿಗಳ ಪ್ರಕಾರ, ವ್ಯಕ್ತಿಯು ಚರ್ಚ್‌ನ ಬಲಿಪೀಠದ ಬಳಿ ತನ್ನ ಬಟ್ಟೆಗಳನ್ನು ತೆಗೆದಿದ್ದಾನೆ.

Vatican Church: ವ್ಯಾಟಿಕನ್ ಚರ್ಚ್‌ನಲ್ಲಿ ಬೆತ್ತಲೆಯಾಗಿ ಕಾಣಿಸಿಕೊಂಡ ವ್ಯಕ್ತಿ, ಕೊಟ್ಟ ಕಾರಣ ಇದು
ಚರ್ಚ್​
ನಯನಾ ರಾಜೀವ್
|

Updated on:Jun 02, 2023 | 11:05 AM

Share

ವ್ಯಾಟಿಕನ್ ಸಿಟಿಯ ಸೇಂಟ್​ ಪೀಟರ್ಸ್​ ಚರ್ಚ್​(Church) ನಲ್ಲಿ ವ್ಯಕ್ತಿಯೊಬ್ಬರು ಬೆತ್ತಲಾಗಿ ಕಾಣಿಸಿಕೊಂಡಿದ್ದು, ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಮಾಧ್ಯಮ ವರದಿಗಳ ಪ್ರಕಾರ, ವ್ಯಕ್ತಿಯು ಚರ್ಚ್‌ನ ಬಲಿಪೀಠದ ಬಳಿ ತನ್ನ ಬಟ್ಟೆಗಳನ್ನು ತೆಗೆದಿದ್ದಾನೆ. ಉಕ್ರೇನ್ ಯುದ್ಧದ ವಿರುದ್ಧ ಪ್ರತಿಭಟಿಸಲು ಅವನು ಇದನ್ನು ಮಾಡಿದನೆಂದು ನಂಬಲಾಗಿದೆ. ನಂತರ, ಚರ್ಚ್‌ನ ಭದ್ರತಾ ಸಿಬ್ಬಂದಿ ಅವರನ್ನು ತಡೆದು ಇಟಲಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ವ್ಯಾಟಿಕನ್‌ನ ಸೇಂಟ್ ಪೀಟರ್ ಚರ್ಚ್‌ನಲ್ಲಿ ವ್ಯಕ್ತಿಯೊಬ್ಬ ತನ್ನ ಬಟ್ಟೆಗಳನ್ನು ತೆಗೆದಿದ್ದಾನೆ. ಉಕ್ರೇನ್‌ನ ಮಕ್ಕಳನ್ನು ಉಳಿಸಬೇಕು ಎಂದು ವ್ಯಕ್ತಿಯ ಬೆನ್ನಿನ ಮೇಲೆ ಬರೆಯಲಾಗಿದೆ. ಚರ್ಚ್ ಮುಚ್ಚುವ ಮುನ್ನ ಈ ಘಟನೆ ನಡೆದಿದೆ. ಘಟನೆ ನಡೆದ ತಕ್ಷಣ ವ್ಯಾಟಿಕನ್ ಸಿಟಿಯ ಭದ್ರತಾ ಸಿಬ್ಬಂದಿ ಆತನನ್ನು ವಶಕ್ಕೆ ಪಡೆದು ಇಟಲಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಮತ್ತಷ್ಟು ಓದಿ: Russia-Ukraine War: ಉಕ್ರೇನ್ ರಾಜಧಾನಿಯ ಮೇಲೆ ರಷ್ಯಾ ದಾಳಿ, ವಸತಿ ಕಟ್ಟಡದ ಮೇಲ್ಛಾವಣಿಯ ಮೇಲೆ ಬೆಂಕಿ

ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಘಟನೆಯ ಕುರಿತು ಇಟಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಬಂಧಿಸಿ ಇಟಲಿ ಪೊಲೀಸರಿಗೆ ಒಪ್ಪಿಸಿದ್ದಾರೆ. 2016ರ ಹಿಂದೆ ಲೂಯಿಸ್ ಕಾರ್ಲೋಸ್ ಜಿಯಾಂಪೊಲಿ (44 ವರ್ಷ) ಎಂಬುವವರು ಸಹ ವ್ಯಾಟಿಕನ್‌ನ ಸೇಂಟ್ ಪೀಟರ್ಸ್ ಚರ್ಚ್ ಅನ್ನು ಬೆತ್ತಲೆಯಾಗಿ ಪ್ರವೇಶಿಸಿದ್ದನು. ಅವರು ಬ್ರೆಜಿಲ್ ನಿವಾಸಿಯಾಗಿದ್ದರು. ತನಿಖೆಯ ವೇಳೆ ಆರೋಪಿಯ ಮಾನಸಿಕ ಸಮತೋಲನ ಸರಿಯಿಲ್ಲ ಎಂದು ತಿಳಿದುಬಂದಿದೆ. ಇದರಿಂದಾಗಿ ಅವರನ್ನು ಮನೋವೈದ್ಯಕೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:03 am, Fri, 2 June 23

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ