AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನುಷ್ಯ ಅಲ್ಲ ಈತ ರಾಕ್ಷಸ, ಪತ್ನಿಯ ಹತ್ಯೆ ಮಾಡಿ 200 ತುಂಡುಗಳಾಗಿ ಕತ್ತರಿಸಿ ವಾರ ಅಡುಗೆ ಮನೆಯಲ್ಲಿ ಇಟ್ಟುಕೊಂಡಿದ್ದ ವ್ಯಕ್ತಿ

ವ್ಯಕ್ತಿಯೊಬ್ಬ ಪತ್ನಿಯನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿ, ಬಳಿಕ ದೇಹವನ್ನು 200ಕ್ಕೂ ಹೆಚ್ಚು ತುಂಡುಗಳಾಗಿ ಕತ್ತರಿಸಿದ ಘಟನೆ ಇಂಗ್ಲೆಂಡ್​ನಲ್ಲಿ ನಡೆದಿದೆ. ಅಷ್ಟೇ ಅಲ್ಲ ದೇಹದ ತುಂಡುಗಳನ್ನು ವಾರಗಳವರೆಗೆ ಅಡುಗೆ ಮನೆಯಲ್ಲೇ ಇಟ್ಟುಕೊಂಡಿದ್ದ, ಇದಾದ ನಂತರ ಸ್ನೇಹಿತನಿಗೆ 5 ಸಾವಿರ ರೂ. ಕೊಟ್ಟು ಅವುಗಳನ್ನು ನದಿಗೆ ಎಸೆಯಲು ತಿಳಿಸಿದ್ದ.

ಮನುಷ್ಯ ಅಲ್ಲ ಈತ ರಾಕ್ಷಸ, ಪತ್ನಿಯ ಹತ್ಯೆ ಮಾಡಿ 200 ತುಂಡುಗಳಾಗಿ ಕತ್ತರಿಸಿ ವಾರ ಅಡುಗೆ ಮನೆಯಲ್ಲಿ ಇಟ್ಟುಕೊಂಡಿದ್ದ ವ್ಯಕ್ತಿ
ಆರೋಪಿ
ನಯನಾ ರಾಜೀವ್
|

Updated on: Apr 07, 2024 | 11:22 AM

Share

ವ್ಯಕ್ತಿಯೊಬ್ಬ ಪತ್ನಿಯನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿ, ಬಳಿಕ ದೇಹವನ್ನು 200ಕ್ಕೂ ಹೆಚ್ಚು ತುಂಡುಗಳಾಗಿ ಕತ್ತರಿಸಿದ ಘಟನೆ ಇಂಗ್ಲೆಂಡ್​ನಲ್ಲಿ ನಡೆದಿದೆ. ಅಷ್ಟೇ ಅಲ್ಲ ದೇಹದ ತುಂಡುಗಳನ್ನು ವಾರಗಳವರೆಗೆ ಅಡುಗೆ ಮನೆಯಲ್ಲೇ ಇಟ್ಟುಕೊಂಡಿದ್ದ, ಇದಾದ ನಂತರ ಸ್ನೇಹಿತನಿಗೆ 5 ಸಾವಿರ ರೂ. ಕೊಟ್ಟು ಅವುಗಳನ್ನು ನದಿಗೆ ಎಸೆಯಲು ತಿಳಿಸಿದ್ದ.

28 ವರ್ಷದ ನಿಕೋಲಸ್ ಮೆಟ್ಸನ್ 26 ವರ್ಷದ ಪತ್ನಿ ಬ್ಲಾಮ್ಲಿಯನ್ನು ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಮೊದಲು ಬೆಡ್​ರೂಮಿನಲ್ಲಿ ಪತ್ನಿಗೆ ಹಲವು ಬಾರಿ ಇರಿದು ಕೊಲೆ ಮಾಡಿ ಬಳಿಕ ದೇಹವನ್ನು ಸ್ನಾನಗೃಹಕ್ಕೆ ತೆಗೆದುಕೊಂಡು ಹೋಗಿ ಅಲ್ಲಿಂದ 200ಕ್ಕೂ ಹೆಚ್ಚು ತುಂಡುಗಳಾಗಿ ಕತ್ತರಿಸಿ ಬಳಿಕ ಪ್ಲಾಸ್ಟಿಕ್ ಚೀಲಗಳಲ್ಲಿ ತುಂಡುಗಳನ್ನು ಹಾಕಿ ಇರಿಸಿದ್ದ.

ಘಟನೆ ನಡೆದು ಸುಮಾರು ಒಂದು ವಾರದ ಬಳಿಕ ಪೊಲೀಸರಿಗೆ ಮಾಹಿತಿ ದೊರೆತಿತ್ತು. ಶವವನ್ನು ವಿಲೇವಾರಿ ಮಾಡಿದ ಮರುದಿನವೇ ವಾಕಿಂಗ್​ಗೆ ತೆರಳಿದ್ದ ವ್ಯಕ್ತಿಯೊಬ್ಬರು ನದಿಯಲ್ಲಿ ಪ್ಲಾಸ್ಟಿಕ್​ ಚೀಲಗಳು ತೇಲುತ್ತಿರುವುದನ್ನು ನೋಡಿದ್ದರು. ಒಂದು ಬ್ಯಾಗ್​ನಲ್ಲಿ ಬ್ರಾಮ್ಲಿಯ ಕೈ ಹಾಗೂ ಬೋಳಿಸಿದ ತಲೆ ಇತ್ತು. ದೇಹವನ್ನು ವಿರೂಪಗೊಳಿಸಲಾಗಿತ್ತು.

ಮತ್ತಷ್ಟು ಓದಿ: ಮಂಗಳೂರು: ಅವಳಿ ಕೊಲೆ ಕೇಸ್​ನಲ್ಲಿ ಮೃತಪಟ್ಟಿದ್ದ ಮಹಿಳೆ ಪತಿ ಹತ್ಯೆಗೆ ಯತ್ನ: ಆಸ್ಪತ್ರೆಗೆ ದಾಖಲು

ತನ್ನ ಮಗಳಿಗೆ ಮದುವೆಯಾಗಿ ಕೇವಲ 16 ತಿಂಗಳುಗಳಾಗಿದೆ, ಈ ರಾಕ್ಷಸರು ಒಂದು ದಿನವೂ ಆಕೆಗೆ ನಮ್ಮನ್ನು ಭೇಟಿಯಾಗಲು ಅವಕಾಶ ಕೊಟ್ಟಿರಲಿಲ್ಲ. ಮಾರ್ಚ್​ 24 ರಂದು ಪೊಲೀಸರು ಅವರ ಮನೆಗೆ ಹೋದಾಗ ಆತ ತನ್ನ ಹೆಂಡತಿ ತನಗೆ ಕಾಟ ಕೊಡುತ್ತಿದ್ದಾಳೆ ಎಂದು ಕಚ್ಚಿದ ಕಲೆಯನ್ನು ತೋರಿಸಿದ್ದ.

ಬಳಿಕ ಪೊಲೀಸರು ಬಾತ್​ ಟಬ್​ನಲ್ಲಿ ರಕ್ತದ ಕಲೆಗಳನ್ನು ಕಂಡಿದ್ದಾರೆ, ರೂಮಿನ ತುಂಬಾ ಅಮೋನಿಯಾ ಹಾಗೂ ಬ್ಲೀಚ್​ನ ವಾಸನೆ ಮೂಗಿಗೆ ಬಡಿಯುತ್ತಿತ್ತು. ಕೆಲವು ದಿನಗಳ ಹಿಂದೆ ಆಕೆ ತನ್ನ ಸ್ನೇಹಿತೆಯರ ಜತೆ ಮನೆ ಬಿಟ್ಟು ಹೋಗಿದ್ದಾಳೆ ಎಂದು ನಂಬಿಸಲು ಪ್ರಯತ್ನಿಸಿದ್ದ, ಪೊಲೀಸರು ವ್ಯಕ್ತಿಯನ್ನು ಬಂಧಿಸಿದ್ದಾರೆ ಸೋಮವಾರ ಹಂತಕನಿಗೆ ಶಿಕ್ಷೆಯಾಗಲಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು