AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಕೇವಲ ‘ಗಾಳಿಮಾತು’ ಎಂದು ನಂಬಿ ಸೋಂಕಿತನ ಪಾರ್ಟಿಗೆ ಹೋದ, ಸತ್ತ!

ಕೊರೊನಾ ಮಹಾಮಾರಿಯ ಮೃತ್ಯುಕೂಪದಲ್ಲಿ ಸಿಲುಕಿ ವಿಶ್ವದ ದೊಡ್ಡಣ್ಣ ಅಮೆರಿಕ ಅಕ್ಷರಶಃ ನಲುಗಿಹೋಗಿದ್ದಾನೆ. ಜಗತ್ತಿನಲ್ಲೇ ಅತಿ ಹೆಚ್ಚು ಸೋಂಕಿತರ ಮತ್ತು ಸಾವಿನ ಸಂಖ್ಯೆ ಹೊಂದಿರುವ ಅಮೆರಿಕಾದಲ್ಲಿ ಹೆಮ್ಮಾರಿಯ ರುದ್ರತಾಂಡವ ಬಲು ಭೀಕರ. ಆದರೆ, ಕೊರೊನಾ ವೈರಸ್​ ಅನ್ನೋದು ಬರೀ ಗಾಳಿಮಾತು. ಅದರಿಂದ ನಂಗೆ ಏನು ಆಗಲ್ಲ ಅಂತಾ ಭಾವಿಸಿ ಸೋಂಕಿತನೊಬ್ಬನ ಪಾರ್ಟಿಗೆ ಹೋದ ವ್ಯಕ್ತಿ ಕೊನೆಗೆ ವೈರಸ್​ಗೇ ಬಲಿಯಾಗಿರೋ ನಿಜ ಸಂಗತಿ ಅಮೆರಿಕಾದ ಟೆಕ್ಸಾಸ್​ನಲ್ಲಿ ಬೆಳಕಿಗೆ ಬಂದಿದೆ. ಹೌದು, ಕೇಳೋಕೆ ಆಶ್ಚರ್ಯ ಅನ್ನಿಸಿದ್ರೂ ಇದು ರಿಯಲ್​ ಸ್ಟೋರಿ. ಟೆಕ್ಸಾಸ್​ನ […]

ಕೊರೊನಾ ಕೇವಲ ‘ಗಾಳಿಮಾತು’ ಎಂದು ನಂಬಿ ಸೋಂಕಿತನ ಪಾರ್ಟಿಗೆ ಹೋದ, ಸತ್ತ!
KUSHAL V
|

Updated on: Jul 15, 2020 | 7:48 PM

Share

ಕೊರೊನಾ ಮಹಾಮಾರಿಯ ಮೃತ್ಯುಕೂಪದಲ್ಲಿ ಸಿಲುಕಿ ವಿಶ್ವದ ದೊಡ್ಡಣ್ಣ ಅಮೆರಿಕ ಅಕ್ಷರಶಃ ನಲುಗಿಹೋಗಿದ್ದಾನೆ. ಜಗತ್ತಿನಲ್ಲೇ ಅತಿ ಹೆಚ್ಚು ಸೋಂಕಿತರ ಮತ್ತು ಸಾವಿನ ಸಂಖ್ಯೆ ಹೊಂದಿರುವ ಅಮೆರಿಕಾದಲ್ಲಿ ಹೆಮ್ಮಾರಿಯ ರುದ್ರತಾಂಡವ ಬಲು ಭೀಕರ. ಆದರೆ, ಕೊರೊನಾ ವೈರಸ್​ ಅನ್ನೋದು ಬರೀ ಗಾಳಿಮಾತು. ಅದರಿಂದ ನಂಗೆ ಏನು ಆಗಲ್ಲ ಅಂತಾ ಭಾವಿಸಿ ಸೋಂಕಿತನೊಬ್ಬನ ಪಾರ್ಟಿಗೆ ಹೋದ ವ್ಯಕ್ತಿ ಕೊನೆಗೆ ವೈರಸ್​ಗೇ ಬಲಿಯಾಗಿರೋ ನಿಜ ಸಂಗತಿ ಅಮೆರಿಕಾದ ಟೆಕ್ಸಾಸ್​ನಲ್ಲಿ ಬೆಳಕಿಗೆ ಬಂದಿದೆ.

ಹೌದು, ಕೇಳೋಕೆ ಆಶ್ಚರ್ಯ ಅನ್ನಿಸಿದ್ರೂ ಇದು ರಿಯಲ್​ ಸ್ಟೋರಿ. ಟೆಕ್ಸಾಸ್​ನ ಸಾನ್​ ಌಂಟೋನಿಯೋದಲ್ಲಿರುವ ಮೆಥಾಡಿಸ್ಟ್​ ಆಸ್ಪತ್ರೆಗೆ ದಾಖಲಾದ ಮೃತ ಸೋಂಕಿತನೇ ಖುದ್ದು ಈ ವಿಷಯವನ್ನ ಅಲ್ಲಿನ ಸಿಬ್ಬಂದಿಗೆ ಹೇಳಿದ್ದಾನಂತೆ.

ಚಾಲೆಂಜ್​ ಒಪ್ಪಿಕೊಂಡಿದ್ದೇ ಮುಳುವಾಯ್ತಾ? ಈ ಬಗ್ಗೆ ಮಾತನಾಡಿದ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಜೇನ್​ ಌಪಲ್​ಬೀ ಸೋಂಕಿತ ತಾನು ಇನ್ನು ಚಿಕ್ಕ ವಯಸ್ಸಿನವ. ಕೇವಲ ಮೂವತ್ತರ ಹರೆಯ ನನಗೆ. ಹೀಗಾಗಿ ಈ ವೈರಸ್​ ನಂಗೆ ಏನು ಮಾಡಲ್ಲ ಅಂತಾ ಹಾಯಾಗಿ ಇದ್ದನಂತೆ. ಈ ನಡುವೆ ಸೋಂಕಿಗೆ ತುತ್ತಾಗಿದ್ದ ತನ್ನ ಸ್ನೇಹಿತನೊಬ್ಬ ಈತನನ್ನ ನನ್ನ ಪಾರ್ಟಿಗೆ ಬಾ ಅಂತಾ ಕರೆದನಂತೆ. ನಂಗೆ ಸೋಂಕು ತಗಲಿದೆ. ಹೀಗಾಗಿ, ನೀನು ನನ್ನ ಪಾರ್ಟಿಗೆ ಬಂದ್ರೇ ನಿಂಗೂ ಕೊರೊನಾ ಬರುತ್ತೆ. ಆಗ ನೀನು ಸೋಂಕಿನಿಂದ ಬಚಾವ್ ಆಗ್ತಿಯೋ ಇಲ್ವೋ ಅಂತಾ ನೋಡೋಣ ಎಂದು ಚಾಲೆಂಜ್​ ಹಾಕಿದ್ದಾನಂತೆ. ಅದಕ್ಕೆ ಒಪ್ಪಿಕೊಂಡು ಈತ ಸ್ನೇಹಿತನ ಪಾರ್ಟಿಗೆ ಹೋಗೇ ಬಿಟ್ಟ.

‘ನಾನು ಆ ಪಾರ್ಟಿಗೆ ಹೋಗಿ ತಪ್ಪು ಮಾಡಿಬಿಟ್ಟೆ’ ಮುಂದೇನಾಗಿರುತ್ತೆ ಅಂತಾ ನಿಮಗೆ ವಿವರಿಸೋ ಅಗತ್ಯವಿಲ್ಲ. ಕೊನೆಗೂ ಸೋಂಕು ತಗಲಿಸಿಕೊಂಡವ ಆಸ್ಪತ್ರೆ ಪಾಲಾದ. ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ. ವಿಪರ್ಯಾಸವೆಂದರೆ ಸಾಯುವ ಹಂತ ತಲುಪಿದ್ದ ಈ ಬಲಿಷ್ಠ 30ರ ಹರೆಯದವನು ನಾನು ಆ ಪಾರ್ಟಿಗೆ ಹೋಗಿ ತಪ್ಪು ಮಾಡಿಬಿಟ್ಟೆ ಅಂತಾ ಆಸ್ಪತ್ರೆಯ ನರ್ಸ್​ ಬಳಿ ಹೇಳಿಕೊಂಡನಂತೆ. ಆದರೆ, ಏನು ಪ್ರಯೋಜನ? ಕೊರೊನಾ ಎಂಬುದು ಗಾಳಿಮಾತಲ್ಲ. ಗಾಳಿಯಲ್ಲಿ ಹರಡುವ ಮಾರಕ ಮಹಾಮಾರಿ ಎಂದು ಈತ ಅರಿತುಕೊಳ್ಳಲೇ ಇಲ್ಲ.

3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಮಾಡಿದ ರಚಿತಾ ರಾಮ್
ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಮಾಡಿದ ರಚಿತಾ ರಾಮ್