AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಕೇವಲ ‘ಗಾಳಿಮಾತು’ ಎಂದು ನಂಬಿ ಸೋಂಕಿತನ ಪಾರ್ಟಿಗೆ ಹೋದ, ಸತ್ತ!

ಕೊರೊನಾ ಮಹಾಮಾರಿಯ ಮೃತ್ಯುಕೂಪದಲ್ಲಿ ಸಿಲುಕಿ ವಿಶ್ವದ ದೊಡ್ಡಣ್ಣ ಅಮೆರಿಕ ಅಕ್ಷರಶಃ ನಲುಗಿಹೋಗಿದ್ದಾನೆ. ಜಗತ್ತಿನಲ್ಲೇ ಅತಿ ಹೆಚ್ಚು ಸೋಂಕಿತರ ಮತ್ತು ಸಾವಿನ ಸಂಖ್ಯೆ ಹೊಂದಿರುವ ಅಮೆರಿಕಾದಲ್ಲಿ ಹೆಮ್ಮಾರಿಯ ರುದ್ರತಾಂಡವ ಬಲು ಭೀಕರ. ಆದರೆ, ಕೊರೊನಾ ವೈರಸ್​ ಅನ್ನೋದು ಬರೀ ಗಾಳಿಮಾತು. ಅದರಿಂದ ನಂಗೆ ಏನು ಆಗಲ್ಲ ಅಂತಾ ಭಾವಿಸಿ ಸೋಂಕಿತನೊಬ್ಬನ ಪಾರ್ಟಿಗೆ ಹೋದ ವ್ಯಕ್ತಿ ಕೊನೆಗೆ ವೈರಸ್​ಗೇ ಬಲಿಯಾಗಿರೋ ನಿಜ ಸಂಗತಿ ಅಮೆರಿಕಾದ ಟೆಕ್ಸಾಸ್​ನಲ್ಲಿ ಬೆಳಕಿಗೆ ಬಂದಿದೆ. ಹೌದು, ಕೇಳೋಕೆ ಆಶ್ಚರ್ಯ ಅನ್ನಿಸಿದ್ರೂ ಇದು ರಿಯಲ್​ ಸ್ಟೋರಿ. ಟೆಕ್ಸಾಸ್​ನ […]

ಕೊರೊನಾ ಕೇವಲ ‘ಗಾಳಿಮಾತು’ ಎಂದು ನಂಬಿ ಸೋಂಕಿತನ ಪಾರ್ಟಿಗೆ ಹೋದ, ಸತ್ತ!
KUSHAL V
|

Updated on: Jul 15, 2020 | 7:48 PM

Share

ಕೊರೊನಾ ಮಹಾಮಾರಿಯ ಮೃತ್ಯುಕೂಪದಲ್ಲಿ ಸಿಲುಕಿ ವಿಶ್ವದ ದೊಡ್ಡಣ್ಣ ಅಮೆರಿಕ ಅಕ್ಷರಶಃ ನಲುಗಿಹೋಗಿದ್ದಾನೆ. ಜಗತ್ತಿನಲ್ಲೇ ಅತಿ ಹೆಚ್ಚು ಸೋಂಕಿತರ ಮತ್ತು ಸಾವಿನ ಸಂಖ್ಯೆ ಹೊಂದಿರುವ ಅಮೆರಿಕಾದಲ್ಲಿ ಹೆಮ್ಮಾರಿಯ ರುದ್ರತಾಂಡವ ಬಲು ಭೀಕರ. ಆದರೆ, ಕೊರೊನಾ ವೈರಸ್​ ಅನ್ನೋದು ಬರೀ ಗಾಳಿಮಾತು. ಅದರಿಂದ ನಂಗೆ ಏನು ಆಗಲ್ಲ ಅಂತಾ ಭಾವಿಸಿ ಸೋಂಕಿತನೊಬ್ಬನ ಪಾರ್ಟಿಗೆ ಹೋದ ವ್ಯಕ್ತಿ ಕೊನೆಗೆ ವೈರಸ್​ಗೇ ಬಲಿಯಾಗಿರೋ ನಿಜ ಸಂಗತಿ ಅಮೆರಿಕಾದ ಟೆಕ್ಸಾಸ್​ನಲ್ಲಿ ಬೆಳಕಿಗೆ ಬಂದಿದೆ.

ಹೌದು, ಕೇಳೋಕೆ ಆಶ್ಚರ್ಯ ಅನ್ನಿಸಿದ್ರೂ ಇದು ರಿಯಲ್​ ಸ್ಟೋರಿ. ಟೆಕ್ಸಾಸ್​ನ ಸಾನ್​ ಌಂಟೋನಿಯೋದಲ್ಲಿರುವ ಮೆಥಾಡಿಸ್ಟ್​ ಆಸ್ಪತ್ರೆಗೆ ದಾಖಲಾದ ಮೃತ ಸೋಂಕಿತನೇ ಖುದ್ದು ಈ ವಿಷಯವನ್ನ ಅಲ್ಲಿನ ಸಿಬ್ಬಂದಿಗೆ ಹೇಳಿದ್ದಾನಂತೆ.

ಚಾಲೆಂಜ್​ ಒಪ್ಪಿಕೊಂಡಿದ್ದೇ ಮುಳುವಾಯ್ತಾ? ಈ ಬಗ್ಗೆ ಮಾತನಾಡಿದ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಜೇನ್​ ಌಪಲ್​ಬೀ ಸೋಂಕಿತ ತಾನು ಇನ್ನು ಚಿಕ್ಕ ವಯಸ್ಸಿನವ. ಕೇವಲ ಮೂವತ್ತರ ಹರೆಯ ನನಗೆ. ಹೀಗಾಗಿ ಈ ವೈರಸ್​ ನಂಗೆ ಏನು ಮಾಡಲ್ಲ ಅಂತಾ ಹಾಯಾಗಿ ಇದ್ದನಂತೆ. ಈ ನಡುವೆ ಸೋಂಕಿಗೆ ತುತ್ತಾಗಿದ್ದ ತನ್ನ ಸ್ನೇಹಿತನೊಬ್ಬ ಈತನನ್ನ ನನ್ನ ಪಾರ್ಟಿಗೆ ಬಾ ಅಂತಾ ಕರೆದನಂತೆ. ನಂಗೆ ಸೋಂಕು ತಗಲಿದೆ. ಹೀಗಾಗಿ, ನೀನು ನನ್ನ ಪಾರ್ಟಿಗೆ ಬಂದ್ರೇ ನಿಂಗೂ ಕೊರೊನಾ ಬರುತ್ತೆ. ಆಗ ನೀನು ಸೋಂಕಿನಿಂದ ಬಚಾವ್ ಆಗ್ತಿಯೋ ಇಲ್ವೋ ಅಂತಾ ನೋಡೋಣ ಎಂದು ಚಾಲೆಂಜ್​ ಹಾಕಿದ್ದಾನಂತೆ. ಅದಕ್ಕೆ ಒಪ್ಪಿಕೊಂಡು ಈತ ಸ್ನೇಹಿತನ ಪಾರ್ಟಿಗೆ ಹೋಗೇ ಬಿಟ್ಟ.

‘ನಾನು ಆ ಪಾರ್ಟಿಗೆ ಹೋಗಿ ತಪ್ಪು ಮಾಡಿಬಿಟ್ಟೆ’ ಮುಂದೇನಾಗಿರುತ್ತೆ ಅಂತಾ ನಿಮಗೆ ವಿವರಿಸೋ ಅಗತ್ಯವಿಲ್ಲ. ಕೊನೆಗೂ ಸೋಂಕು ತಗಲಿಸಿಕೊಂಡವ ಆಸ್ಪತ್ರೆ ಪಾಲಾದ. ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ. ವಿಪರ್ಯಾಸವೆಂದರೆ ಸಾಯುವ ಹಂತ ತಲುಪಿದ್ದ ಈ ಬಲಿಷ್ಠ 30ರ ಹರೆಯದವನು ನಾನು ಆ ಪಾರ್ಟಿಗೆ ಹೋಗಿ ತಪ್ಪು ಮಾಡಿಬಿಟ್ಟೆ ಅಂತಾ ಆಸ್ಪತ್ರೆಯ ನರ್ಸ್​ ಬಳಿ ಹೇಳಿಕೊಂಡನಂತೆ. ಆದರೆ, ಏನು ಪ್ರಯೋಜನ? ಕೊರೊನಾ ಎಂಬುದು ಗಾಳಿಮಾತಲ್ಲ. ಗಾಳಿಯಲ್ಲಿ ಹರಡುವ ಮಾರಕ ಮಹಾಮಾರಿ ಎಂದು ಈತ ಅರಿತುಕೊಳ್ಳಲೇ ಇಲ್ಲ.

ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​