AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕ ಅಧ್ಯಕ್ಷ ಜೋ ಬೈಡನ್ ಹಾಗೂ ಕಮಲಾ ಹ್ಯಾರಿಸ್​ಗೆ ಬೆದರಿಕೆ ಹಾಕಿದ್ದ ವ್ಯಕ್ತಿಯ ಹತ್ಯೆ

ಅಮೆರಿಕ ಅಧ್ಯಕ್ಷ ಜೋ ಬೈಡನ್ ಹಾಗೂ ಕಮಲಾ ಹ್ಯಾರಿಸ್​ಗೆ ಬೆದರಿಕೆ ಹಾಕಿದ್ದ ಶಂಕಿತನನ್ನು ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ (ಎಫ್‌ಬಿಐ) ಹತ್ಯೆ ಮಾಡಿದೆ.

ಅಮೆರಿಕ ಅಧ್ಯಕ್ಷ ಜೋ ಬೈಡನ್ ಹಾಗೂ ಕಮಲಾ ಹ್ಯಾರಿಸ್​ಗೆ ಬೆದರಿಕೆ ಹಾಕಿದ್ದ ವ್ಯಕ್ತಿಯ ಹತ್ಯೆ
ಜೋ ಬೈಡನ್
ನಯನಾ ರಾಜೀವ್
|

Updated on:Aug 10, 2023 | 8:29 AM

Share

ಅಮೆರಿಕ ಅಧ್ಯಕ್ಷ ಜೋ ಬೈಡನ್‌(Joe Biden) ಹಾಗೂ ಕಮಲಾ ಹ್ಯಾರಿಸ್​(Kamala Harris)ಗೆ ಬೆದರಿಕೆ ಹಾಕಿದ್ದ ಶಂಕಿತನನ್ನು ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ (ಎಫ್‌ಬಿಐ) ಹತ್ಯೆ ಮಾಡಿದೆ. ಸಾಲ್ಟ್ ಲೇಕ್ ಸಿಟಿಯ ದಕ್ಷಿಣದ ಪ್ರೊವೊದಲ್ಲಿರುವ ಕ್ರೆಹ್ ಡೆಲೆವ್ ರಾಬರ್ಟ್‌ಸನ್ ಅವರ ಮನೆಯಲ್ಲಿ ಬೆಳಗ್ಗೆ 6.15 ಕ್ಕೆ ಗುಂಡಿನ ದಾಳಿ ನಡೆದಿದೆ ಎಂದು ಎಫ್‌ಬಿಐ ಹೇಳಿಕೆಯಲ್ಲಿ ತಿಳಿಸಿದೆ.

ರಾಬರ್ಟ್‌ಸನ್ ಆನ್‌ಲೈನ್‌ನಲ್ಲಿ ಬೆದರಿಕೆ ಹಾಕಿದ್ದರು, ರಾಬರ್ಟ್‌ಸನ್‌ನ ಮನೆಯಲ್ಲಿ ಎಫ್‌ಬಿಐ ಏಜೆಂಟ್‌ಗಳು ಬಂಧನ ಮತ್ತು ಶೋಧ ವಾರಂಟ್ ನೀಡಲು ಪ್ರಯತ್ನಿಸುತ್ತಿದ್ದಾಗ ಗುಂಡಿನ ದಾಳಿ ಸಂಭವಿಸಿದೆ.

ಎಫ್​ಬಿಐ ಅಧಿಕಾರಿಗಳು ಬಂಧನದ ವಾರೆಂಟ್ ಹಾಗೂ ಶೋಧ ನಡೆಸಲು ಮುಂದಾಗುತ್ತಿದ್ದ ಸಂದರ್ಭದಲ್ಲಿ ಗುಂಡಿನ ದಾಳಿ ನಡೆದಿದೆ. ಹೆಚ್ಚಿನ ವಿವರಗಳನ್ನು ನೀಡಲು ಎಫ್‌ಬಿಐ ನಿರಾಕರಿಸಿದೆ.

ಮತ್ತಷ್ಟು ಓದಿ: Ukraine: ಕೊನೆಗೂ ಯುದ್ಧ ಭೂಮಿ ಉಕ್ರೇನ್​ಗೆ ಭೇಟಿ ನೀಡಿದ ಅಮೆರಿಕ ಅಧ್ಯಕ್ಷ ಜೋ ಬೈಡನ್, 500 ಮಿಲಿಯನ್ ಡಾಲರ್ ಶಸ್ತ್ರಾಸ್ತ್ರ ಸಹಾಯ

ಗುಂಡಿನ ದಾಳಿ ಸಂದರ್ಭದಲ್ಲಿ ರಾಬರ್ಟ್​ಸನ್ ಶಸ್ತ್ರಸಜ್ಜಿತನಾಗಿದ್ದ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ಘಟನೆ ಕುರಿತು ಎಫ್​ಬಿಐ ಅಧಿಕಾರಿಗಳು ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದಾರೆ. ಆತ ಜೋ ಬೈಡನ್ ಅವರನ್ನು ಕೊಲೆ ಮಾಡುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಮಾಡಿದ್ದ. ರಾಬರ್ಟ್​ಸನ್ ಓರ್ವ ಉದ್ಯಮಿ, ಆದರೆ ರಾಜ್ಯ ದಾಖಲೆಗಳ ಪ್ರಕಾರ ಕಳೆದ ವರ್ಷ ಅವರ ವ್ಯಾಪಾರಕ್ಕೆ ನೀಡಿದ್ದ ಲೈಸೆನ್ಸ್​ ಮುಗಿದಿದೆ.

ಆದರೆ ಅವರಿಗೆ ನೀಡಿದ ಪರವಾನಗಿಯನ್ನು ಅಪಡೇಟ್ ಮಾಡಿಸಿಲ್ಲ. ಲಿಂಕ್ಡ್​ಇನ್​ನಲ್ಲಿ ರಾಬರ್ಟ್​ಸನ್ 45 ವರ್ಷಗಳ ಕಾಲ ಸ್ಟ್ರಕ್ಚರಲ್ ಸ್ಟೀಲ್ ಮತ್ತು ವೆಲ್ಡಿಂಗ್ ಇನ್ಸ್​ಪೆಕ್ಟರ್ ಆಗಿ ಸೇವೆ ಸಲ್ಲಿಸಿರುವುದಾಗಿ ಬರೆದುಕೊಂಡಿದ್ದಾರೆ. ಅವರು ನಿವೃತ್ತರಾದ ಮೇಲೆ ಮರಗೆಲಸ ಉದ್ಯಮ ಶುರು ಮಾಡಿದ್ದರು.

ಜೋ ಬೈಡನ್ ಈಗ ಪಶ್ಚಿಮ ಯುನೈಟೆಡ್ ಸ್ಟೇಟ್ಸ್​ನ ಪ್ರವಾಸದಲ್ಲಿದ್ದಾರೆ. ಬುಧವಾರ ನ್ಯೂ ಮೆಕ್ಸಿಕೋದಲ್ಲಿ ತಂಗಿದ್ದರು. ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರು ಉತಾಹ್​ಗೆ ಭೇಟಿ ನೀಡುವವರಿದ್ದರು, ಅದಕ್ಕೂ ಮುನ್ನವೇ ಎನ್​ಕೌಂಟರ್ ನಡೆದಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:29 am, Thu, 10 August 23

Follow Us
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ