AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಿನ ಉದ್ಯಮಿ ಬಿ ಆರ್​ ಶೆಟ್ಟಿಗೆ ತಪ್ಪದ ಸಂಕಷ್ಟ: 131 ದಶಲಕ್ಷ ಡಾಲರ್ ಕಟ್ಟುವಂತೆ ಸೂಚಿಸಿದ ಲಂಡನ್ ಕೋರ್ಟ್​

ಮನವಿಯನ್ನು ಪುರಸ್ಕರಿಸಿರುವ ಲಂಡನ್ ಕೋರ್ಟ್ ಇದೀಗ ಮಂಗಳೂರಿನ ಉದ್ಯಮಿ ಬಿ ಆರ್​ ಶೆಟ್ಟಿಗೆ 131 ದಶಲಕ್ಷ ಡಾಲರ್ ಕಟ್ಟುವಂತೆ ಸೂಚಿಸಿದೆ. ಇದರೊಂದಿಗೆ ದಿವಾಳಿಯೆದ್ದಿರುವ ಮಂಗಳೂರಿನ ಬಿ ಆರ್​ ಶೆಟ್ಟಿಗೆ ಸಂಕಷ್ಟಗಳ ಸರಮಾಲೆ ಮುಂದುವರಿದಿದೆ. ಇದಕ್ಕೂ ಮುನ್ನ ದುಬೈ ಕೋರ್ಟ್​ ಸಹ ಬಾರ್ಕ್ಲೇಸ್ ಕಂಪನಿ ಪರ ಆದೇಶ ನೀಡಿತ್ತು.

ಮಂಗಳೂರಿನ ಉದ್ಯಮಿ ಬಿ ಆರ್​ ಶೆಟ್ಟಿಗೆ ತಪ್ಪದ ಸಂಕಷ್ಟ: 131 ದಶಲಕ್ಷ ಡಾಲರ್ ಕಟ್ಟುವಂತೆ ಸೂಚಿಸಿದ ಲಂಡನ್ ಕೋರ್ಟ್​
ಮಂಗಳೂರಿನ ಉದ್ಯಮಿ ಬಿ ಆರ್​ ಶೆಟ್ಟಿಗೆ ತಪ್ಪದ ಸಂಕಷ್ಟ: 131 ದಶಲಕ್ಷ ಡಾಲರ್ ಕಟ್ಟುವಂತೆ ಸೂಚಿಸಿದ ಲಂಡನ್ ಕೋರ್ಟ್​
Follow us
TV9 Web
| Updated By: ಸಾಧು ಶ್ರೀನಾಥ್​

Updated on:Jan 11, 2022 | 2:01 PM

ಭಾರತದ ಮಂಗಳೂರಿನ ಉದ್ಯಮಿ ಬಿ ಆರ್​ ಶೆಟ್ಟಿ ತಮ್ಮ ಕಂಪನಿಯ ಜೊತೆ 2020ರಲ್ಲಿ ಮಾಡಿಕೊಂಡಿದ್ದ ವಿದೇಶ ವಿನಿಮಯ ಬಿಸಿನೆಸ್​ ಅಗ್ರಿಮೆಂಟ್​ ಪ್ರಕಾರ (foreign exchange business) ಹಣ ಪಾವಿತಿಸುವಲ್ಲಿ ವಿಫಲವಾಗಿದ್ದಾರೆ. ಹಾಗಾಗಿ ಅವರಿಂದ ಹಣ ಕೊಡಿಸಬೇಕು ಎಂದು ಬಾರ್ಕ್ಲೇಸ್ ಕಂಪನಿ ಲಂಡನ್ ಕೋರ್ಟ್ (London court ) ಮೊರೆ ಹೋಗಿತ್ತು. ಮನವಿಯನ್ನು ಪುರಸ್ಕರಿಸಿರುವ ಲಂಡನ್ ಕೋರ್ಟ್ ಇದೀಗ ಮಂಗಳೂರಿನ ಉದ್ಯಮಿ ಬಿ ಆರ್​ ಶೆಟ್ಟಿಗೆ 131 ದಶಲಕ್ಷ ಡಾಲರ್ ಕಟ್ಟುವಂತೆ ಸೂಚಿಸಿದೆ. ಇದರೊಂದಿಗೆ ದಿವಾಳಿಯೆದ್ದಿರುವ ಮಂಗಳೂರಿನ ಬಿ ಆರ್​ ಶೆಟ್ಟಿಗೆ (Bavaguthu Raghuram Shetty) ಸಂಕಷ್ಟಗಳ ಸರಮಾಲೆ ಮುಂದುವರಿದಿದೆ. ಇದಕ್ಕೂ ಮುನ್ನ ದುಬೈ ಕೋರ್ಟ್​ ಸಹ ಬಾರ್ಕ್ಲೇಸ್ ಕಂಪನಿ ( Barclays) ಪರ ಆದೇಶ ನೀಡಿತ್ತು.

ಉದ್ಯಮಿ ಬಿ ಆರ್​ ಶೆಟ್ಟಿ ವಿರುದ್ಧ ಬಾರ್ಕ್ಲೇಸ್ ಕಂಪನಿ ಕಾನೂನು ಸಮರ ಗೆದ್ದಿದ್ದು ಶೆಟ್ಟಿ 131 ದಶಲಕ್ಷ ಡಾಲರ್ ಪಾವತಿ ಮಾಡಬೇಕಿದೆ. ಯುಕೆ ಕೋರ್ಟ್​ನಲ್ಲಿ ವಿಚಾರಣೆ ವೇಳೆ ಉದ್ಯಮಿ ಬಿ ಆರ್​ ಶೆಟ್ಟಿ ಪರ ವಕೀಲರು ತಮ್ಮ ಕಕ್ಷಿದಾರ ಸಂಸ್ಥೆಯು ಆರ್ಥಿಕವಾಗಿ ಪರದಾಡುತ್ತಿದ್ದಾರೆ (financially paralyzed) ಎಂದು ಅಲವತ್ತುಕೊಂಡಿದ್ದರು. ಹಾಗಾಗಿ ತಮ್ಮ ಕ್ಷಿದಾರ ಸಂಸ್ಥೆಗೆ ಕಾನೂನಾತ್ಮಕವಾಗಿ ವಿನಾಯಿತಿ ನೀಡಬೇಕು ಎಂದು ಮೊರೆಯಿಟ್ಟಿದ್ದರು. ಆದರೆ ಕೋರ್ಟ್​ ಶೆಟ್ಟಿ ವಕೀಲರ ಮನವಿಯನ್ನು ಇದೀಗ ತಿರಸ್ಕರಿಸಿದೆ.

ಮಂಗಳೂರಿನ ಉದ್ಯಮಿ, 79 ವರ್ಷದ ಬಿ ಆರ್​ ಶೆಟ್ಟಿ ಆರ್ಥಿಕ ದಿವಾಳಿತನಕ್ಕೆ ಗುರಿಯಾಗಿದ್ದು, ತೀವ್ರ ಸಂಕಷ್ಟಕ್ಕೆ ಈಡಾಗಿದ್ದಾರೆ. ಅವರು ಸದ್ಯ ಮಂಗಳೂರಿನಲ್ಲಿ ಠಿಕಾಣಿ ಹೂಡಿದ್ದಾರೆ. ಈ ಹಿನ್ನೆಲೆಯಲ್ಲಿ ಜಗತ್ತಿನಾದ್ಯಂತ ಇರುವ ಬಿ ಆರ್​ ಶೆಟ್ಟಿಯ ಖಾತೆಗಳನ್ನು, ಆಸ್ತಿಪಾಸ್ತಿಗಳನ್ನು ಸ್ಥಗಿತಗೊಳಿಸುವಂತೆ ಬಾರ್ಕ್ಲೇಸ್ ಕಂಪನಿ ವಕೀಲರು ಕೋರ್ಟ್​ಗೆ ಮೊರೆಯಿಟ್ಟಿದ್ದರು.

ಇದನ್ನೂ ಓದಿ:ಉಡುಪಿ ಜಿಲ್ಲೆಯ ಉಚಿತ ಹೆರಿಗೆ ಆಸ್ಪತ್ರೆಯ ನಿರ್ವಹಣೆಯನ್ನು ಕೈಬಿಟ್ಟ ಬಿ.ಆರ್​.ಶೆಟ್ಟಿ; 250 ಸಿಬ್ಬಂದಿ ಬದುಕು ಅತಂತ್ರ

Published On - 1:35 pm, Tue, 11 January 22

ಜನಸಂದಣಿ ಕಂಡು ಕನ್ನಡಿಗರಿಗಾದಂತೆ ಜನಪ್ರತಿನಿಧಿಗಳಿಗೆ ಗಾಬರಿ ಆಗುತ್ತಿಲ್ಲ
ಜನಸಂದಣಿ ಕಂಡು ಕನ್ನಡಿಗರಿಗಾದಂತೆ ಜನಪ್ರತಿನಿಧಿಗಳಿಗೆ ಗಾಬರಿ ಆಗುತ್ತಿಲ್ಲ
ಸುಹಾಸ್ ಕೊಲೆಯಲ್ಲಿ ಕನಿಷ್ಠ 40 ಜನ ಶಾಮೀಲಾಗಿದ್ದಾರೆ: ಪ್ರದೀಪ್ ಸರಿಪಲ್ಲ
ಸುಹಾಸ್ ಕೊಲೆಯಲ್ಲಿ ಕನಿಷ್ಠ 40 ಜನ ಶಾಮೀಲಾಗಿದ್ದಾರೆ: ಪ್ರದೀಪ್ ಸರಿಪಲ್ಲ
ಕಾಲ್ತುಳಿತ: ರಾಜ್ಯಪಾಲರಿಗೆ ಆಹ್ವಾನ ಕೊಟ್ಟಿದ್ಯಾರು? ಡಿಸಿಎಂ ಹೇಳಿದ್ದಿಷ್ಟು
ಕಾಲ್ತುಳಿತ: ರಾಜ್ಯಪಾಲರಿಗೆ ಆಹ್ವಾನ ಕೊಟ್ಟಿದ್ಯಾರು? ಡಿಸಿಎಂ ಹೇಳಿದ್ದಿಷ್ಟು
ಕೊಲೆಯಾದವ ಮತ್ತು ಆರೋಪಿಗಳೆಲ್ಲ ಅಸ್ಸಾಂ ಮೂಲದವರು, ಮದ್ಯದ ಅಮಲಿನಲ್ಲಿ ಹತ್ಯೆ
ಕೊಲೆಯಾದವ ಮತ್ತು ಆರೋಪಿಗಳೆಲ್ಲ ಅಸ್ಸಾಂ ಮೂಲದವರು, ಮದ್ಯದ ಅಮಲಿನಲ್ಲಿ ಹತ್ಯೆ
ಶ್ವೇತಾ ಮನೆ ಬಿಟ್ಟು ಹೋಗ್ತಿದ್ಳು, ನನ್ನಮ್ಮನನ್ನು ಹೊಡೆಯುತ್ತಿದ್ದಳು: ರಘು
ಶ್ವೇತಾ ಮನೆ ಬಿಟ್ಟು ಹೋಗ್ತಿದ್ಳು, ನನ್ನಮ್ಮನನ್ನು ಹೊಡೆಯುತ್ತಿದ್ದಳು: ರಘು
‘ಸರಿಗಮಪ’ ವಿನ್ನರ್ ಶಿವಾನಿಗೆ ಸಿಕ್ಕ ಹಣ ಎಷ್ಟು? ಬಾಳು ಬೆಳಗುಂದಿಗೂ ಬಂಪರ್
‘ಸರಿಗಮಪ’ ವಿನ್ನರ್ ಶಿವಾನಿಗೆ ಸಿಕ್ಕ ಹಣ ಎಷ್ಟು? ಬಾಳು ಬೆಳಗುಂದಿಗೂ ಬಂಪರ್
ಊಟ ಕೊಡುವುದು ತಡವಾಗಿದ್ದಕ್ಕೆ ರೆಸ್ಟೋರೆಂಟ್​ ಧ್ವಂಸ
ಊಟ ಕೊಡುವುದು ತಡವಾಗಿದ್ದಕ್ಕೆ ರೆಸ್ಟೋರೆಂಟ್​ ಧ್ವಂಸ
Daily Devotional: ಅದೃಷ್ಟ ಒಲಿಯಲು ಏನು ಮಾಡಬೇಕು?
Daily Devotional: ಅದೃಷ್ಟ ಒಲಿಯಲು ಏನು ಮಾಡಬೇಕು?
Daily Horoscope: ನಿಮ್ಮವರಿಂದಲೇ ನಿಮಗೆ ಕಷ್ಟಗಳು ಬರುವ ಸಾಧ್ಯತೆ!
Daily Horoscope: ನಿಮ್ಮವರಿಂದಲೇ ನಿಮಗೆ ಕಷ್ಟಗಳು ಬರುವ ಸಾಧ್ಯತೆ!
ಸರಿಗಮಪ ಸ್ಪರ್ಧಿ ಅನಘ ಗಾಯನಕ್ಕೆ ಅಣ್ಣಾವ್ರೆ ಸ್ಪೂರ್ತಿ
ಸರಿಗಮಪ ಸ್ಪರ್ಧಿ ಅನಘ ಗಾಯನಕ್ಕೆ ಅಣ್ಣಾವ್ರೆ ಸ್ಪೂರ್ತಿ