AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಿನ ಉದ್ಯಮಿ ಬಿ ಆರ್​ ಶೆಟ್ಟಿಗೆ ತಪ್ಪದ ಸಂಕಷ್ಟ: 131 ದಶಲಕ್ಷ ಡಾಲರ್ ಕಟ್ಟುವಂತೆ ಸೂಚಿಸಿದ ಲಂಡನ್ ಕೋರ್ಟ್​

ಮನವಿಯನ್ನು ಪುರಸ್ಕರಿಸಿರುವ ಲಂಡನ್ ಕೋರ್ಟ್ ಇದೀಗ ಮಂಗಳೂರಿನ ಉದ್ಯಮಿ ಬಿ ಆರ್​ ಶೆಟ್ಟಿಗೆ 131 ದಶಲಕ್ಷ ಡಾಲರ್ ಕಟ್ಟುವಂತೆ ಸೂಚಿಸಿದೆ. ಇದರೊಂದಿಗೆ ದಿವಾಳಿಯೆದ್ದಿರುವ ಮಂಗಳೂರಿನ ಬಿ ಆರ್​ ಶೆಟ್ಟಿಗೆ ಸಂಕಷ್ಟಗಳ ಸರಮಾಲೆ ಮುಂದುವರಿದಿದೆ. ಇದಕ್ಕೂ ಮುನ್ನ ದುಬೈ ಕೋರ್ಟ್​ ಸಹ ಬಾರ್ಕ್ಲೇಸ್ ಕಂಪನಿ ಪರ ಆದೇಶ ನೀಡಿತ್ತು.

ಮಂಗಳೂರಿನ ಉದ್ಯಮಿ ಬಿ ಆರ್​ ಶೆಟ್ಟಿಗೆ ತಪ್ಪದ ಸಂಕಷ್ಟ: 131 ದಶಲಕ್ಷ ಡಾಲರ್ ಕಟ್ಟುವಂತೆ ಸೂಚಿಸಿದ ಲಂಡನ್ ಕೋರ್ಟ್​
ಮಂಗಳೂರಿನ ಉದ್ಯಮಿ ಬಿ ಆರ್​ ಶೆಟ್ಟಿಗೆ ತಪ್ಪದ ಸಂಕಷ್ಟ: 131 ದಶಲಕ್ಷ ಡಾಲರ್ ಕಟ್ಟುವಂತೆ ಸೂಚಿಸಿದ ಲಂಡನ್ ಕೋರ್ಟ್​
TV9 Web
| Edited By: |

Updated on:Jan 11, 2022 | 2:01 PM

Share

ಭಾರತದ ಮಂಗಳೂರಿನ ಉದ್ಯಮಿ ಬಿ ಆರ್​ ಶೆಟ್ಟಿ ತಮ್ಮ ಕಂಪನಿಯ ಜೊತೆ 2020ರಲ್ಲಿ ಮಾಡಿಕೊಂಡಿದ್ದ ವಿದೇಶ ವಿನಿಮಯ ಬಿಸಿನೆಸ್​ ಅಗ್ರಿಮೆಂಟ್​ ಪ್ರಕಾರ (foreign exchange business) ಹಣ ಪಾವಿತಿಸುವಲ್ಲಿ ವಿಫಲವಾಗಿದ್ದಾರೆ. ಹಾಗಾಗಿ ಅವರಿಂದ ಹಣ ಕೊಡಿಸಬೇಕು ಎಂದು ಬಾರ್ಕ್ಲೇಸ್ ಕಂಪನಿ ಲಂಡನ್ ಕೋರ್ಟ್ (London court ) ಮೊರೆ ಹೋಗಿತ್ತು. ಮನವಿಯನ್ನು ಪುರಸ್ಕರಿಸಿರುವ ಲಂಡನ್ ಕೋರ್ಟ್ ಇದೀಗ ಮಂಗಳೂರಿನ ಉದ್ಯಮಿ ಬಿ ಆರ್​ ಶೆಟ್ಟಿಗೆ 131 ದಶಲಕ್ಷ ಡಾಲರ್ ಕಟ್ಟುವಂತೆ ಸೂಚಿಸಿದೆ. ಇದರೊಂದಿಗೆ ದಿವಾಳಿಯೆದ್ದಿರುವ ಮಂಗಳೂರಿನ ಬಿ ಆರ್​ ಶೆಟ್ಟಿಗೆ (Bavaguthu Raghuram Shetty) ಸಂಕಷ್ಟಗಳ ಸರಮಾಲೆ ಮುಂದುವರಿದಿದೆ. ಇದಕ್ಕೂ ಮುನ್ನ ದುಬೈ ಕೋರ್ಟ್​ ಸಹ ಬಾರ್ಕ್ಲೇಸ್ ಕಂಪನಿ ( Barclays) ಪರ ಆದೇಶ ನೀಡಿತ್ತು.

ಉದ್ಯಮಿ ಬಿ ಆರ್​ ಶೆಟ್ಟಿ ವಿರುದ್ಧ ಬಾರ್ಕ್ಲೇಸ್ ಕಂಪನಿ ಕಾನೂನು ಸಮರ ಗೆದ್ದಿದ್ದು ಶೆಟ್ಟಿ 131 ದಶಲಕ್ಷ ಡಾಲರ್ ಪಾವತಿ ಮಾಡಬೇಕಿದೆ. ಯುಕೆ ಕೋರ್ಟ್​ನಲ್ಲಿ ವಿಚಾರಣೆ ವೇಳೆ ಉದ್ಯಮಿ ಬಿ ಆರ್​ ಶೆಟ್ಟಿ ಪರ ವಕೀಲರು ತಮ್ಮ ಕಕ್ಷಿದಾರ ಸಂಸ್ಥೆಯು ಆರ್ಥಿಕವಾಗಿ ಪರದಾಡುತ್ತಿದ್ದಾರೆ (financially paralyzed) ಎಂದು ಅಲವತ್ತುಕೊಂಡಿದ್ದರು. ಹಾಗಾಗಿ ತಮ್ಮ ಕ್ಷಿದಾರ ಸಂಸ್ಥೆಗೆ ಕಾನೂನಾತ್ಮಕವಾಗಿ ವಿನಾಯಿತಿ ನೀಡಬೇಕು ಎಂದು ಮೊರೆಯಿಟ್ಟಿದ್ದರು. ಆದರೆ ಕೋರ್ಟ್​ ಶೆಟ್ಟಿ ವಕೀಲರ ಮನವಿಯನ್ನು ಇದೀಗ ತಿರಸ್ಕರಿಸಿದೆ.

ಮಂಗಳೂರಿನ ಉದ್ಯಮಿ, 79 ವರ್ಷದ ಬಿ ಆರ್​ ಶೆಟ್ಟಿ ಆರ್ಥಿಕ ದಿವಾಳಿತನಕ್ಕೆ ಗುರಿಯಾಗಿದ್ದು, ತೀವ್ರ ಸಂಕಷ್ಟಕ್ಕೆ ಈಡಾಗಿದ್ದಾರೆ. ಅವರು ಸದ್ಯ ಮಂಗಳೂರಿನಲ್ಲಿ ಠಿಕಾಣಿ ಹೂಡಿದ್ದಾರೆ. ಈ ಹಿನ್ನೆಲೆಯಲ್ಲಿ ಜಗತ್ತಿನಾದ್ಯಂತ ಇರುವ ಬಿ ಆರ್​ ಶೆಟ್ಟಿಯ ಖಾತೆಗಳನ್ನು, ಆಸ್ತಿಪಾಸ್ತಿಗಳನ್ನು ಸ್ಥಗಿತಗೊಳಿಸುವಂತೆ ಬಾರ್ಕ್ಲೇಸ್ ಕಂಪನಿ ವಕೀಲರು ಕೋರ್ಟ್​ಗೆ ಮೊರೆಯಿಟ್ಟಿದ್ದರು.

ಇದನ್ನೂ ಓದಿ:ಉಡುಪಿ ಜಿಲ್ಲೆಯ ಉಚಿತ ಹೆರಿಗೆ ಆಸ್ಪತ್ರೆಯ ನಿರ್ವಹಣೆಯನ್ನು ಕೈಬಿಟ್ಟ ಬಿ.ಆರ್​.ಶೆಟ್ಟಿ; 250 ಸಿಬ್ಬಂದಿ ಬದುಕು ಅತಂತ್ರ

Published On - 1:35 pm, Tue, 11 January 22

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ