AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Marijuana: ಗಾಂಜಾ ಬೆಳೆಯುವುದನ್ನು ಕಾನೂನುಬದ್ಧಗೊಳಿಸಿದ ಏಷ್ಯಾದ ಮೊದಲ ದೇಶ ಥೈಲ್ಯಾಂಡ್

ಔಷಧೀಯ ಉದ್ದೇಶಗಳಿಗಾಗಿ ಮಾತ್ರ ಗಾಂಜಾವನ್ನು ಕಾನೂನುಬದ್ಧಗೊಳಿಸಲಾಗಿದೆ ಎಂಬುದು ಮುಖ್ಯವಾಗಿದೆ. ಲೈಸೆನ್ಸ್​ ಇಲ್ಲದೆ ಗಾಂಜಾದ ವಾಣಿಜ್ಯ ಬಳಕೆಗೆ ಥೈಲ್ಯಾಂಡ್​ನಲ್ಲಿ ಅನುಮತಿಯಿಲ್ಲ.

Marijuana: ಗಾಂಜಾ ಬೆಳೆಯುವುದನ್ನು ಕಾನೂನುಬದ್ಧಗೊಳಿಸಿದ ಏಷ್ಯಾದ ಮೊದಲ ದೇಶ ಥೈಲ್ಯಾಂಡ್
ಗಾಂಜಾImage Credit source: CNN
TV9 Web
| Edited By: |

Updated on: Jun 10, 2022 | 11:51 AM

Share

ನವದೆಹಲಿ: ಜೂನ್ ತಿಂಗಳಲ್ಲಿ ದೇಶದ ಮನೆಗಳಿಗೆ ಒಂದು ಮಿಲಿಯನ್ ಉಚಿತ ಗಾಂಜಾ (Marijuana) ಗಿಡಗಳನ್ನು ವಿತರಿಸುವ ಯೋಜನೆಯನ್ನು ಥೈಲ್ಯಾಂಡ್ (Thailand) ಸರ್ಕಾರ ಈ ಹಿಂದೆ ಘೋಷಿಸಿತ್ತು. ಆರೋಗ್ಯ ಸಚಿವ ಅನುಟಿನ್ ಚಾರ್ನ್‌ವಿರಾಕುಲ್ ಅವರ ಪ್ರಕಾರ, ಜನರು ಮನೆಯಲ್ಲಿ ಗಾಂಜಾ ಬೆಳೆಯಲು ಅನುಮತಿಸಲಾಗುತ್ತಿದೆ. ಗಾಂಜಾವನ್ನು ಕಾನೂನುಬದ್ಧಗೊಳಿಸಿದ ಏಷ್ಯಾದ ಮೊದಲ ದೇಶ ಥೈಲ್ಯಾಂಡ್ ಆಗಿದೆ.

ಔಷಧೀಯ ಉದ್ದೇಶಗಳಿಗಾಗಿ ಮಾತ್ರ ಗಾಂಜಾವನ್ನು ಕಾನೂನುಬದ್ಧಗೊಳಿಸಲಾಗಿದೆ ಎಂಬುದು ಮುಖ್ಯವಾಗಿದೆ. ಲೈಸೆನ್ಸ್​ ಇಲ್ಲದೆ ಗಾಂಜಾದ ವಾಣಿಜ್ಯ ಬಳಕೆಗೆ ಥೈಲ್ಯಾಂಡ್​ನಲ್ಲಿ ಅನುಮತಿಯಿಲ್ಲ. ಹಾಗೇ, ಎತ್ತರಕ್ಕೆ ಗಾಂಜಾ ಗಿಡವನ್ನು ಬಳಸುವವರಿಗೆ ಕಠಿಣ ದಂಡ ವಿಧಿಸಲಾಗುವುದು ಎಂದು ಥೈಲ್ಯಾಂಡ್ ಆರೋಗ್ಯ ಸಚಿವರು ಮಾಹಿತಿ ನೀಡಿದ್ದಾರೆ.

“ನಾವು ಇನ್ನೂ ಕಾನೂನಿನ ಅಡಿಯಲ್ಲಿ ಗಾಂಜಾ ಬೆಳೆಯ ಕುರಿತು ನಿಬಂಧನೆಗಳನ್ನು ಹೊಂದಿದ್ದೇವೆ. ಅದು ಗಾಂಜಾ ಉತ್ಪನ್ನಗಳ ಸೇವನೆ, ಧೂಮಪಾನ ಅಥವಾ ಬಳಕೆಯನ್ನು ನಿಯಂತ್ರಿಸುತ್ತದೆ” ಎಂದು ಅವರು ಹೇಳಿದ್ದಾರೆ. ಜೂನ್ 9ರಿಂದ ಥೈಲ್ಯಾಂಡ್​ನಲ್ಲಿ ಗಾಂಜಾ ಮತ್ತು ಸೆಣಬಿನ ಉತ್ಪನ್ನಗಳನ್ನು ಬೆಳೆಯುವುದು ಮತ್ತು ವ್ಯಾಪಾರ ಮಾಡುವುದು ಅಥವಾ ವೈದ್ಯಕೀಯ ಚಿಕಿತ್ಸೆಗಾಗಿ ಸಸ್ಯದ ಭಾಗಗಳನ್ನು ಬಳಸುವುದು ಅಪರಾಧವಲ್ಲ ಎಂದು ಘೋಷಿಸಲಾಗಿದೆ.

ಇದನ್ನೂ ಓದಿ: Viral Video: ಗಾಂಜಾ ವ್ಯಸನಿ ಪುತ್ರನನ್ನು ಕಂಬಕ್ಕೆ ಕಟ್ಟಿಹಾಕಿ, ಕಣ್ಣಿಗೆ ಖಾರದ ಪುಡಿ ಹಾಕಿದ ತಾಯಿ

ಆಹಾರ ಮತ್ತು ಪಾನೀಯಗಳ ಉದ್ಯಮದಲ್ಲಿ, ಕೆಫೆಗಳು ಮತ್ತು ರೆಸ್ಟಾರೆಂಟ್‌ಗಳು ಗಾಂಜಾ ತುಂಬಿದ ವಸ್ತುಗಳನ್ನು ಸಹ ಒದಗಿಸಬಹುದು. ಆದರೆ, ಗಾಂಜಾ ಬಳಕೆಗೆ ಕೆಲವು ನಿಬಂಧನೆಗಳನ್ನು ಕೂಡ ವಿಧಿಸಲಾಗಿದೆ. ನಿಯಮವನ್ನು ಉಲ್ಲಂಘಿಸುವವರಿಗೆ ಮೂರು ತಿಂಗಳವರೆಗೆ ಜೈಲು ಶಿಕ್ಷೆ ಮತ್ತು ಸಾರ್ವಜನಿಕವಾಗಿ ಧೂಮಪಾನಕ್ಕಾಗಿ 800 ರೂ. ದಂಡವನ್ನು ವಿಧಿಸಲಾಗುತ್ತದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ