AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Marijuana: ಗಾಂಜಾ ಬೆಳೆಯುವುದನ್ನು ಕಾನೂನುಬದ್ಧಗೊಳಿಸಿದ ಏಷ್ಯಾದ ಮೊದಲ ದೇಶ ಥೈಲ್ಯಾಂಡ್

ಔಷಧೀಯ ಉದ್ದೇಶಗಳಿಗಾಗಿ ಮಾತ್ರ ಗಾಂಜಾವನ್ನು ಕಾನೂನುಬದ್ಧಗೊಳಿಸಲಾಗಿದೆ ಎಂಬುದು ಮುಖ್ಯವಾಗಿದೆ. ಲೈಸೆನ್ಸ್​ ಇಲ್ಲದೆ ಗಾಂಜಾದ ವಾಣಿಜ್ಯ ಬಳಕೆಗೆ ಥೈಲ್ಯಾಂಡ್​ನಲ್ಲಿ ಅನುಮತಿಯಿಲ್ಲ.

Marijuana: ಗಾಂಜಾ ಬೆಳೆಯುವುದನ್ನು ಕಾನೂನುಬದ್ಧಗೊಳಿಸಿದ ಏಷ್ಯಾದ ಮೊದಲ ದೇಶ ಥೈಲ್ಯಾಂಡ್
ಗಾಂಜಾImage Credit source: CNN
TV9 Web
| Edited By: |

Updated on: Jun 10, 2022 | 11:51 AM

Share

ನವದೆಹಲಿ: ಜೂನ್ ತಿಂಗಳಲ್ಲಿ ದೇಶದ ಮನೆಗಳಿಗೆ ಒಂದು ಮಿಲಿಯನ್ ಉಚಿತ ಗಾಂಜಾ (Marijuana) ಗಿಡಗಳನ್ನು ವಿತರಿಸುವ ಯೋಜನೆಯನ್ನು ಥೈಲ್ಯಾಂಡ್ (Thailand) ಸರ್ಕಾರ ಈ ಹಿಂದೆ ಘೋಷಿಸಿತ್ತು. ಆರೋಗ್ಯ ಸಚಿವ ಅನುಟಿನ್ ಚಾರ್ನ್‌ವಿರಾಕುಲ್ ಅವರ ಪ್ರಕಾರ, ಜನರು ಮನೆಯಲ್ಲಿ ಗಾಂಜಾ ಬೆಳೆಯಲು ಅನುಮತಿಸಲಾಗುತ್ತಿದೆ. ಗಾಂಜಾವನ್ನು ಕಾನೂನುಬದ್ಧಗೊಳಿಸಿದ ಏಷ್ಯಾದ ಮೊದಲ ದೇಶ ಥೈಲ್ಯಾಂಡ್ ಆಗಿದೆ.

ಔಷಧೀಯ ಉದ್ದೇಶಗಳಿಗಾಗಿ ಮಾತ್ರ ಗಾಂಜಾವನ್ನು ಕಾನೂನುಬದ್ಧಗೊಳಿಸಲಾಗಿದೆ ಎಂಬುದು ಮುಖ್ಯವಾಗಿದೆ. ಲೈಸೆನ್ಸ್​ ಇಲ್ಲದೆ ಗಾಂಜಾದ ವಾಣಿಜ್ಯ ಬಳಕೆಗೆ ಥೈಲ್ಯಾಂಡ್​ನಲ್ಲಿ ಅನುಮತಿಯಿಲ್ಲ. ಹಾಗೇ, ಎತ್ತರಕ್ಕೆ ಗಾಂಜಾ ಗಿಡವನ್ನು ಬಳಸುವವರಿಗೆ ಕಠಿಣ ದಂಡ ವಿಧಿಸಲಾಗುವುದು ಎಂದು ಥೈಲ್ಯಾಂಡ್ ಆರೋಗ್ಯ ಸಚಿವರು ಮಾಹಿತಿ ನೀಡಿದ್ದಾರೆ.

“ನಾವು ಇನ್ನೂ ಕಾನೂನಿನ ಅಡಿಯಲ್ಲಿ ಗಾಂಜಾ ಬೆಳೆಯ ಕುರಿತು ನಿಬಂಧನೆಗಳನ್ನು ಹೊಂದಿದ್ದೇವೆ. ಅದು ಗಾಂಜಾ ಉತ್ಪನ್ನಗಳ ಸೇವನೆ, ಧೂಮಪಾನ ಅಥವಾ ಬಳಕೆಯನ್ನು ನಿಯಂತ್ರಿಸುತ್ತದೆ” ಎಂದು ಅವರು ಹೇಳಿದ್ದಾರೆ. ಜೂನ್ 9ರಿಂದ ಥೈಲ್ಯಾಂಡ್​ನಲ್ಲಿ ಗಾಂಜಾ ಮತ್ತು ಸೆಣಬಿನ ಉತ್ಪನ್ನಗಳನ್ನು ಬೆಳೆಯುವುದು ಮತ್ತು ವ್ಯಾಪಾರ ಮಾಡುವುದು ಅಥವಾ ವೈದ್ಯಕೀಯ ಚಿಕಿತ್ಸೆಗಾಗಿ ಸಸ್ಯದ ಭಾಗಗಳನ್ನು ಬಳಸುವುದು ಅಪರಾಧವಲ್ಲ ಎಂದು ಘೋಷಿಸಲಾಗಿದೆ.

ಇದನ್ನೂ ಓದಿ: Viral Video: ಗಾಂಜಾ ವ್ಯಸನಿ ಪುತ್ರನನ್ನು ಕಂಬಕ್ಕೆ ಕಟ್ಟಿಹಾಕಿ, ಕಣ್ಣಿಗೆ ಖಾರದ ಪುಡಿ ಹಾಕಿದ ತಾಯಿ

ಆಹಾರ ಮತ್ತು ಪಾನೀಯಗಳ ಉದ್ಯಮದಲ್ಲಿ, ಕೆಫೆಗಳು ಮತ್ತು ರೆಸ್ಟಾರೆಂಟ್‌ಗಳು ಗಾಂಜಾ ತುಂಬಿದ ವಸ್ತುಗಳನ್ನು ಸಹ ಒದಗಿಸಬಹುದು. ಆದರೆ, ಗಾಂಜಾ ಬಳಕೆಗೆ ಕೆಲವು ನಿಬಂಧನೆಗಳನ್ನು ಕೂಡ ವಿಧಿಸಲಾಗಿದೆ. ನಿಯಮವನ್ನು ಉಲ್ಲಂಘಿಸುವವರಿಗೆ ಮೂರು ತಿಂಗಳವರೆಗೆ ಜೈಲು ಶಿಕ್ಷೆ ಮತ್ತು ಸಾರ್ವಜನಿಕವಾಗಿ ಧೂಮಪಾನಕ್ಕಾಗಿ 800 ರೂ. ದಂಡವನ್ನು ವಿಧಿಸಲಾಗುತ್ತದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
ಗರುಡ ಪುರಾಣದ ಪ್ರಕಾರ ಊಟ ಎಲ್ಲಿ ಮಾಡಬೇಕು, ಎಲ್ಲಿ ಮಾಡಬಾರದು? ಫಲಗಳೇನು?
ಗರುಡ ಪುರಾಣದ ಪ್ರಕಾರ ಊಟ ಎಲ್ಲಿ ಮಾಡಬೇಕು, ಎಲ್ಲಿ ಮಾಡಬಾರದು? ಫಲಗಳೇನು?
2028ರ ಎಲೆಕ್ಷನ್ ಗೆಲ್ಲಲು ಜೋಶಿಗೆ ಸಾರಥ್ಯ?ಇದಕ್ಕೆ ಅವರು ಹೇಳಿದ್ದೇನು?
2028ರ ಎಲೆಕ್ಷನ್ ಗೆಲ್ಲಲು ಜೋಶಿಗೆ ಸಾರಥ್ಯ?ಇದಕ್ಕೆ ಅವರು ಹೇಳಿದ್ದೇನು?
ದೀದಿ ಕೋಟೆಯನ್ನು ಬಿಜೆಪಿ ಛಿದ್ರಗೊಳಿಸಿದ್ದು ಹೇಗೆ? ಪ್ರಲ್ಹಾದ್ ಜೋಶಿ ಮಾಹಿತಿ
ದೀದಿ ಕೋಟೆಯನ್ನು ಬಿಜೆಪಿ ಛಿದ್ರಗೊಳಿಸಿದ್ದು ಹೇಗೆ? ಪ್ರಲ್ಹಾದ್ ಜೋಶಿ ಮಾಹಿತಿ
ಮಮತಾ ಬ್ಯಾನರ್ಜಿ ಮನೆ ಹೊರಗೆ ಟಿಎಂಸಿ ಶಾಸಕ ಕುನಾಲ್ ಘೋಷ್ ಮೇಲೆ ಮೊಟ್ಟೆ ದಾಳಿ
ಮಮತಾ ಬ್ಯಾನರ್ಜಿ ಮನೆ ಹೊರಗೆ ಟಿಎಂಸಿ ಶಾಸಕ ಕುನಾಲ್ ಘೋಷ್ ಮೇಲೆ ಮೊಟ್ಟೆ ದಾಳಿ
ಮಾಜಿ ಸೈನಿಕನ ಸಾವಿಗೆ ಟ್ವಿಸ್ಟ್​:FSL ವರದಿಯನ್ನೇ ತಿರುಚಿದ ಗ್ಯಾಂಗ್!
ಮಾಜಿ ಸೈನಿಕನ ಸಾವಿಗೆ ಟ್ವಿಸ್ಟ್​:FSL ವರದಿಯನ್ನೇ ತಿರುಚಿದ ಗ್ಯಾಂಗ್!
ಮೋದಿ ಅಧಿಕಾರ ಸಾಕು ಅಂದಿದ್ರು; ಅಚ್ಚರಿಯ ಸಂಗತಿ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ
ಮೋದಿ ಅಧಿಕಾರ ಸಾಕು ಅಂದಿದ್ರು; ಅಚ್ಚರಿಯ ಸಂಗತಿ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ
ಕಾಕ್ರೋಜ್‌ ಪಾರ್ಟಿ ಸಂಸ್ಥಾಪಕನಿಗೆ ಕಪಾಳಮೋಕ್ಷ: ವಿಡಿಯೋ ವೈರಲ್‌
ಕಾಕ್ರೋಜ್‌ ಪಾರ್ಟಿ ಸಂಸ್ಥಾಪಕನಿಗೆ ಕಪಾಳಮೋಕ್ಷ: ವಿಡಿಯೋ ವೈರಲ್‌
RSS ವಿವರಣೆ ಕೇಳಿದ ಪ್ರಿಯಾಂಕ್ ಖರ್ಗೆಗೆ ತೇಜಸ್ವಿ ಸೂರ್ಯ ಖಡಕ್ ಉತ್ತರ
RSS ವಿವರಣೆ ಕೇಳಿದ ಪ್ರಿಯಾಂಕ್ ಖರ್ಗೆಗೆ ತೇಜಸ್ವಿ ಸೂರ್ಯ ಖಡಕ್ ಉತ್ತರ
ಜಮೀರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಪಟ್ಟು: ಪಾದರಾಯನಪುರದಲ್ಲಿ ಹೈಡ್ರಾಮಾ
ಜಮೀರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಪಟ್ಟು: ಪಾದರಾಯನಪುರದಲ್ಲಿ ಹೈಡ್ರಾಮಾ
ತಾಯಿಯಿಂದ ಬೇರ್ಪಟ್ಟು ಗ್ರಾಮಕ್ಕೆ ಬಂದ ಮರಿಯಾನೆ: ಆಹಾರ ನೀಡಿದ ಗ್ರಾಮಸ್ಥರು!
ತಾಯಿಯಿಂದ ಬೇರ್ಪಟ್ಟು ಗ್ರಾಮಕ್ಕೆ ಬಂದ ಮರಿಯಾನೆ: ಆಹಾರ ನೀಡಿದ ಗ್ರಾಮಸ್ಥರು!